ರಾಜ್ಯದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯಲ್ಲ: ಸಚಿವ ಅಶ್ವತ್ಥ ನಾರಾಯಣ
Team Udayavani, Dec 11, 2022, 8:34 PM IST
ಮದ್ದೂರು: ರಾಜ್ಯದಲ್ಲಿ ಅವಧಿಗೆ ಮೊದಲೇ ಚುನಾವಣೆ ನಡೆಯುವುದಿಲ್ಲ, ಅವಧಿಗೆ ಸರಿಯಾಗಿ ಚುನಾವಣೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಿಗದಿತ ಅವಧಿಯಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು ಅವಧಿಗೆ ಮೊದಲು ನಡೆಯುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ಪುನರ್ ರಚನೆಗೆ ಮುಖ್ಯಮಂತ್ರಿಗಳು ವರಿಷ್ಠರ ಜತೆ ಚರ್ಚಿಸಿ ಸೂಕ್ತ ಕ್ರಮವಹಿಸಲಿದ್ದು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದು ಬಳಿಕ ಸಚಿವ ಸಂಪುಟ ಪುನರ್ ರಚನೆ ಮಾಡುವುದಾಗಿ ಹೇಳಿದರು.
ಕಾಂಗ್ರೆಸ್ ನೆಲೆ ಇಲ್ಲದ ಪಕ್ಷ. ಅದರ ನಾಯಕರಿಗೂ ನೆಲೆ ಇಲ್ಲದಂತಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟದಲ್ಲೇ ತೊಡಗಿದ್ದು ಕೊನೆಗೂ ಯಾವ ಕ್ಷೇತ್ರದಲ್ಲಿ ಹೋಗಿ ಸ್ಪರ್ಧೆ ಮಾಡುತ್ತಾರೋ ಕಾದು ನೋಡಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ಎಚ್.ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ ಹಾಗೂ ವಿಶ್ವನಾಥ್ ನಡುವೆ ವ್ಯತ್ಯಾಸವಿದ್ದು ಅವರ ವೈಯಕ್ತಿಕ ಸಂಬಂಧಗಳು ಏನು ಅಂತ ಗೊತ್ತಿಲ್ಲ, ಈಗಾಗಲೇ ವಿಶ್ವನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಹೋಗಿದ್ದರು. ಈಗ ಬಿಜೆಪಿಯಲ್ಲಿದ್ದಾರೆ. ಅವರು ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಗೊತ್ತಿಲ್ಲ ಎಂದರು.
ಇದನ್ನೂ ಓದಿ: 1992 ರ ಮುಂಬಯಿ ಗಲಭೆ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?