ಅಕ್ರಮಗಳಿಗೆ ಕಡಿವಾಣ ಹಾಕಿ ಮನ್‌ಮುಲ್‌ ಆಡಳಿತ ಮಂಡಳಿಯಿಂದ ಹೆಚ್ಚಿನ ಒತ್ತು ನೀಡಿ ಕೆಲಸ: ಶಾಸಕ


Team Udayavani, Apr 19, 2022, 3:32 PM IST

ಅಕ್ರಮಗಳಿಗೆ ಕಡಿವಾಣ ಹಾಕಿ ಮನ್‌ಮುಲ್‌ ಆಡಳಿತ ಮಂಡಳಿಯಿಂದ ಹೆಚ್ಚಿನ ಒತ್ತು ನೀಡಿ ಕೆಲಸ: ಶಾಸಕ

ಮಂಡ್ಯ: ಹಾಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮನ್‌ಮುಲ್‌ ಆಡಳಿತ ಮಂಡಳಿ ಒತ್ತು ನೀಡಿ ಕೆಲಸ ಮಾಡುತ್ತಿದೆ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ತಿಳಿಸಿದರು.

ತಾಲೂಕಿನ ಹೊಳಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನೂತನವಾಗಿ ಹಾಲು ಶೀಥಲೀಕರಣ ಘಟಕವನ್ನು (ಬಿಎಂಸಿ) ಉದ್ಘಾಟಿಸಿ ಮಾತನಾಡಿದರು.

ಆಡಳಿತ ಮಂಡಳಿ ಕ್ರಮ: ಹಳೇ ಬಿಎಂಸಿ ಘಟಕಗಳಲ್ಲಿ ನಿತ್ಯ ಸಾವಿರಾರು ಲೀಟರ್‌ ಹಾಲು ಕಳ್ಳತನ ಮಾಡುತ್ತಿದ್ದರು. ಇಂತಹ ಪ್ರಕರಣ ಗಳನ್ನು ಅಧ್ಯಕ್ಷರು ಪತ್ತೆ ಹಚ್ಚಿ ತನಿಖೆಗೆ ಆದೇಶ ಮಾಡಿ ದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಕ್ರಮ ವಹಿಸಲಿದೆ ಎಂದು ಹೇಳಿದರು.

ಸಹಕಾರ ನೀಡಿ: ಶಿಲಾನ್ಯಾಸ ಫಲಕ ಉದ್ಘಾ ಟಿಸಿದ ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮ ಚಂದ್ರು ಮಾತನಾಡಿ, ಗುಣಮಟ್ಟದ ಹಾಲನ್ನು ಡೇರಿಗೆ ಹಾಕಬೇಕು. ಕಳಪೆ ಹಾಲು ಹಾಕಿದರೆ ಎಷ್ಟು ಪ್ರಮಾಣದ ಹಾಲು ಶೇಖರಣೆಯಾಗಿ ರುತ್ತೋ ಅಷ್ಟೂ ಪ್ರಮಾಣದ ಹಾಲು ಕೆಡುತ್ತದೆ. ಆದ್ದರಿಂದ ಉತ್ತಮ ಹಾಲನ್ನು ಹಾಕುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.

ಕುಟುಂಬದ ಆರೋಗ್ಯವೂ ಮುಖ್ಯ: ಮಾಜಿ ಶಾಸಕ ಎಚ್‌.ಬಿ.ರಾಮು ಮಾತನಾಡಿ, ಮಾಜಿ ಶಾಸಕ ದಿ.ಎಚ್‌.ಡಿ.ಚೌಡಯ್ಯ ಅವರ ಸಲಹೆ ಮೇರೆಗೆ ಗ್ರಾಮದಲ್ಲಿ ಬಿಎಂಸಿ ಘಟಕ ಉದ್ಘಾ ಟನೆಯಾಗಿದೆ. ಉತ್ಪಾದಕರು ತಮಗೆ ಎಷ್ಟು ಬೇಕೋ ಅಷ್ಟು ಹಾಲನ್ನು ಕುಟುಂಬಕ್ಕಾಗಿ ಇಟ್ಟು ಕೊಂಡು ಉಳಿದ ಹಾಲನ್ನು ಡೇರಿಗೆ ಹಾಕಬೇಕು. ತಮ್ಮ ಕುಟುಂಬವೂ ಆರೋಗ್ಯವಾಗಿರಬೇಕು. ಎಲ್ಲವನ್ನೂ ಹಾಕದೆ ಸ್ವಲ್ಪ ಮಟ್ಟಿಗೆ ಉಳಿಸಿಕೊಳ್ಳು ವುದು ಅಗತ್ಯ ಎಂದು ಸಲಹೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇ ಶಕ ಎಚ್‌.ಎಲ್‌.ಶಿವಣ್ಣ, ಡೇರಿ ಅಧ್ಯಕ್ಷ ತಿಮ್ಮೇ ಗೌಡ, ಮಾಜಿ ಅಧ್ಯಕ್ಷ ನಿಂಗರಾಜು, ಟಿ.ಟಿ.ಶ್ರೀನಿ ವಾಸ್‌, ಉಪಾಧ್ಯಕ್ಷೆ ಶಾಂತಮ್ಮ, ಮಾಜಿ ಉಪಾಧ್ಯಕ್ಷ ಗಂಗಾಧರ್‌, ಗ್ರಾಪಂ ಉಪಾಧ್ಯಕ್ಷ ಎಚ್‌.ಡಿ.ರವಿ, ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಾಳೇಗೌಡ, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಎಸ್‌.ಪ್ರಭಾಕರ್‌, ಜನತಾ ಶಿಕ್ಷಣ ಸಂಸ್ಥೆಯ ಎಚ್‌.ಸಿ.ಮೋಹನ್‌ಕುಮಾರ್‌, ಕೆಎಸ್‌ಎಫ್‌ಸಿ ಲೀಗಲ್‌ ಅಧಿ ಕಾರಿ ಎಚ್‌.ಎಂ.ವಿಜಯ ಕುಮಾರ್‌, ಗ್ರಾಮದ ಮುಖಂಡ ಜಟ್ಟಿಕುಮಾರ್‌, ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಎಚ್‌.ಎಂ.ಕುಮಾರ್‌, ಉಪಾಧ್ಯಕ್ಷ ಕೃಷ್ಣ, ಮನ್‌ಮುಲ್‌ ಉಪವ್ಯವಸ್ಥಾಪಕ ಎಚ್‌.ಎನ್‌. ಮಂಜೇಶ್‌ಗೌಡ, ವಿಸ್ತರಣಾಧಿ ಕಾರಿ ಎಂ.ಸಿ.ರಶ್ಮಿ, ಆರ್‌ಎಪಿಸಿಎಂಎಸ್‌ ಮಾಜಿ ನಿರ್ದೇಶಕ ಎಚ್‌.ಸಿ.ಶ್ರೀಧರ್‌, ಪಶು ವೈದ್ಯಾ  ಧಿಕಾರಿ ಸುರೇಶ್‌, ಆರೋಗ್ಯಾಧಿ ಕಾರಿ ಡಾ. ದುರ್ಗಾಂಭ, ಸಂಘದ ನಿರ್ದೇಶಕರಾದ ಎಚ್‌. ಬಿ.ಯೋಗೇಶ್‌, ಶಿವಲಿಂಗಯ್ಯ, ಉಮೇಶ್‌, ಶಿವರಾಜು, ಪದ್ಮಾ, ಶಿವ, ಸಿಇಒ ಶಿವಕುಮಾರ್‌, ಸಿಬ್ಬಂದಿಗಳಾದ ಎಚ್‌.ಸಿ.ಬೋರಯ್ಯ, ಶಿವಕುಮಾರ್‌, ಬೋರಯ್ಯ, ರಘು, ತಮ್ಮೇ ಗೌಡ ಮತ್ತಿತರರು ಉಪಸ್ಥಿತರಿದ್ದರು

ಅಭಿವೃದ್ಧಿಗೆ ಸಹಕರಿಸಿ: ಮಾಜಿ ಶಾಸಕ ಚೌಡಯ್ಯ ಅವರು ಬಿಎಂಸಿ ಘಟಕ ಸ್ಥಾಪನೆಗೆ ಸಾಕಷ್ಟು ಶ್ರಮ ವಹಿಸಿದ್ದರು. ಅವರ ಆಶಯದಂತೆ ಇದೀಗ ಗ್ರಾಮದಲ್ಲಿ ಬಿಎಂಸಿ ಘಟಕ ಸ್ಥಾಪನೆಯಾಗಿದೆ. ಇದನ್ನು ಪ್ರತಿಯೊಬ್ಬ ಉತ್ಪಾದಕರೂ ಸರಿಯಾದ ನಿಟ್ಟಿನಲ್ಲಿ ಉಪಯೋಗಿಸಿಕೊಳ್ಳಬೇಕು. ಸಂಘದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ತಿಳಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.