ಮಾದರಿ ಕ್ಷೇತ್ರವನ್ನಾಗಿಸಲು ಶ್ರಮ: ಶಾಸಕ ತಮ್ಮಣ್ಣ
Team Udayavani, Feb 5, 2021, 5:08 PM IST
ಮದ್ದೂರು: ಕ್ಷೇತ್ರದ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಕೈಗೊಂಡು ಮಾದರಿ ಕ್ಷೇತ್ರವನ್ನಾಗಿಸಲು ನಿರಂತರವಾಗಿ ಶ್ರಮಿಸುತ್ತೇವೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.
ತಾಲೂಕಿನ ಕೆಸ್ತೂರು ಜಿಪಂ ವ್ಯಾಪ್ತಿಯ ಅಡಗನಹಳ್ಳಿ, ಬ್ಯಾಲದಕೆರೆ, ಕುಂದನಕುಪ್ಪೆ ಹಾಗೂ ಇನ್ನಿತರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕಿನಲ್ಲಿ ಕೋಟ್ಯಂತರ ರೂ. ಅನುದಾನವನ್ನು ಬಿಡುಗಡೆಗೊಳಿಸಿ, ಅಭಿವೃದ್ಧಿ ಕಾರ್ಯ ಗಳಿಗೆ ಮುಂದಾಗುತ್ತೇವೆ ಎಂದು ಹೇಳಿದರು.
ಮದ್ದೂರಿಗೆ ಪ್ರಥಮ ಸ್ಥಾನ: ಆತಗೂರು ಹೋಬಳಿ ವ್ಯಾಪ್ತಿಯ ಕೆರೆಗಳ ಪುನಶ್ಚೇತನ, ನೀರು ತುಂಬಿಸುವುದು, ಹೂಳು ತೆಗೆಸುವುದು, ಏತ ನೀರಾವರಿ ಹಾಗೂ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಿ ಸ್ಥಳೀಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದ್ದು, ತಾಲೂಕಿನ ಪ್ರೌಢಶಾಲಾ ವಿಭಾಗದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮಾರ್ಗಸೂಚಿ ಪತ್ರಿಕೆ ವಿತರಿಸುವ ಮೂಲಕ ಜಿಲ್ಲೆಯಲ್ಲೇ ಮದ್ದೂರು ತಾಲೂಕು ಪ್ರಥಮ ಸ್ಥಾನದಲ್ಲಿರುವುದಾಗಿ ತಿಳಿಸಿದರು.
ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಿ: ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಸದಸ್ಯರು ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಮಾದರಿ ಗ್ರಾಮವನ್ನಾಗಿಸುವ ಜತೆಗೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಲು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿ ಸಬೇಕು ಎಂದರು.
ಇದನ್ನೂ ಓದಿ :ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹ
ತಾಪಂ ಮಾಜಿ ಸದಸ್ಯ ಬಿಳಿಯಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಶಂಕರೇಗೌಡ, ಮುಖಂಡರಾದ ಹೂತಗೆರೆ ದಿಲೀಪ್ಕುಮಾರ್, ಚಂದ್ರಶೇಖರ್, ಕುಂದನಕುಪ್ಪೆ ಕುಮಾರ್, ಚಂದನ್, ರವಿ, ಮಲ್ಲಿಕಾರ್ಜುನ, ನಾಗಣ್ಣ, ಗಂಗರಾಜು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಲ್ದೋಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ತೆ.!
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
ದಿನೇಶ್ ವಿರುದ್ಧ ಸುಮೊಟೋ ದೂರು ದಾಖಲಿಸಿ: ಎಚ್.ಡಿ.ಕುಮಾರಸ್ವಾಮಿ ಒತ್ತಾಯ
ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಟೋಕಿಯೊ ಒಲಿಂಪಿಕ್ಸ್ : ವಿನೇಶ್ ಸ್ವರ್ಣ ವಿಜಯ; ಸಿಂಧು ಪರಾಜಯ
ಪೈರಸಿ ವಿರುದ್ಧ ಗುಡುಗಿದ ‘ರಾಬರ್ಟ್’ ನಿರ್ಮಾಪಕ ಉಮಾಪತಿ
ರೇಷನ್ ಕಾರ್ಡ್ ಇರುವ ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ : ಸ್ಟಾಲಿನ್
ಕೇಲ್ದೋಡಿಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪತ್ತೆ.!
ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 4 ಲಕ್ಷ ರೂ. ಮೌಲ್ಯದ ಸ್ಫೋಟಕ ವಶ, ನಾಲ್ವರ ಬಂಧನ