ನನ್ನ ಕ್ಷೇತ್ರದ ಅಭಿವೃದ್ಧಿಗೆ ನಿನ್ನನ್ನು ಕಾಯಬೇಕಾ?


Team Udayavani, Mar 1, 2021, 1:37 PM IST

ನನ್ನ ಕ್ಷೇತ್ರದ ಅಭಿವೃದ್ಧಿಗೆ ನಿನ್ನನ್ನು ಕಾಯಬೇಕಾ?

ಮಂಡ್ಯ: ನನ್ನ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡಿಸುವುದಕ್ಕೆ ನಾನು ನಿನ್ನನ್ನು ಕಾಯಬೇಕಾ, ನೀನು ಅಷ್ಟು ದೊಡ್ಡವನಾ. ನಿನ್ನನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸಿ ಬೇರೆ ಗುತ್ತಿಗೆದಾರರಿಂದ ಕೆಲಸ ಮಾಡಿಸುತ್ತೇನೆ ಎಂದು ಶಾಸಕ ಎಂ.ಶ್ರೀನಿವಾಸ್‌ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆಯಿತು.

ಕಾವೇರಿ ಜಲಾನಯನ ಯೋಜನೆಯಡಿ ಉಮ್ಮಡಹಳ್ಳಿ ಗ್ರಾಮದ ಮುಖ್ಯರಸ್ತೆಯಿಂದ ಕಾಳೇಗೌಡರ ಜಮೀನಿನವರೆಗೆ ಅಚ್ಚುಕಟ್ಟುವರೆಗೆ ಹೋಗುವ ಮೆಟ್ಲಿಂಗ್‌ ಮಾಡುವ 8 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನಿಗದಿಯಾಗಿತ್ತು. ಈ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲು ಉಮ್ಮಡಹಳ್ಳಿ ಗ್ರಾಮಕ್ಕೆ ಶಾಸಕ ಎಂ.ಶ್ರೀನಿವಾಸ್‌ ತೆರಳಿದ್ದರು. ಆ ವೇಳೆಗೆ ಇಂಜಿನಿಯರ್‌ ರಶ್ಮಿ ಹಾಗೂ ಗುತ್ತಿಗೆದಾರ ಕನಕಪುರ ಚೇತನ್‌ ಬಂದಿರಲಿಲ್ಲ. ಇದನ್ನು ನೋಡಿದ ಶಾಸಕರು ಕೋಪಗೊಂಡರು. ಸ್ವಲ್ಪ

ಹೊತ್ತಿನಲ್ಲೇ ಇಂಜಿನಿಯರ್‌ ರಶ್ಮಿ ಸ್ಥಳಕ್ಕೆ ಧಾವಿಸಿದರು. ಆ ಸಮಯದಲ್ಲಿ ಶಾಸಕರು ಇಂಜಿನಿಯರ್‌ ರಶ್ಮಿ ಅವರನ್ನು ಕಂಡು ಏನ್ರೀ, ಅಧಿಕಾರಿಗಳಾಗಿ ನೀವು ಇಷ್ಟು ತಡವಾಗಿ ಬರಬಹುದೇ. ನಾವು ನಿಮ್ಮನ್ನು ಕಾಯಬೇಕಾ. ಎಲ್ಲಿ ಗುತ್ತಿಗೆದಾರರು ಎಂದು ಕೇಳಿದರು.

ಕೂಡಲೇ ಇಂಜಿನಿಯರ್‌ ರಶ್ಮಿ ಗುತ್ತಿಗೆದಾರ ಚೇತನ್‌ಗೆ ಕರೆ ಮಾಡಿದರು. ಕಾರು ಪಂಕ್ಚರ್‌ ಆಗಿದೆ. ಬರುತ್ತಿದ್ದೇನೆ ಎಂದು ಹೇಳಿದರು. ಇದರಿಂದ ಬೇಸರಗೊಂಡ ಶಾಸಕ ಎಂ.ಶ್ರೀನಿವಾಸ್‌ ವಾಪಸ್‌ ತೆರಳುವುದಕ್ಕೆ ಕಾರು ಹತ್ತಿ ಕುಳಿತರು. ಆ ವೇಳೆಗೆ ಗುತ್ತಿಗೆದಾರ ಕನಕಪುರ ಚೇತನ್‌ ಅಲ್ಲಿಗೆ ಬಂದುಶಾಸಕರನ್ನು ಭೇಟಿ ಮಾಡಿದರು.

ಗುತ್ತಿಗೆದಾರ ಬ್ಲಾಕ್‌ ಲೀಸ್ಟ್‌ಗೆ: ಯಾರಯ್ಯ ನೀನು. ಎಷ್ಟು ಹೊತ್ತಿಗಯ್ಯ ಬರೋದು. ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ನಾನು ಬಂದು ನಿನ್ನನ್ನು ಕಾಯಬೇಕಾ. ನಾನು ಗುದ್ದಲಿ ಪೂಜೆ ಮಾಡೋಲ್ಲ ಹೋಗು. ನಿನ್ನನ್ನ ಬ್ಲಾಕ್‌ ಲೀಸ್ಟ್‌ಗೆ ಸೇರಿಸಿ ಬೇರೆ ಗುತ್ತಿಗೆದಾರನಿಂದ ಕೆಲಸ ಮಾಡಿಸುತ್ತೇನೆ. ನಿನ್ನಿಂದ ನಾನು ಕೆಲಸ ಮಾಡಿಸುವುದಿಲ್ಲ ಎಂದು ಖಡಕ್ಕಾಗಿ ಹೇಳಿ ಅಲ್ಲಿಂದ ವಾಪಸಾದರು.

ಬೇರೆ ಗುತ್ತಿಗೆದಾರನಿಂದ ಕೆಲಸ: ಶಾಸಕರು ಕೋಪಿಸಿಕೊಂಡು ಅಲ್ಲಿಂದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲು ಚಾಮಲಾಪುರ ಕಡೆ ತೆರಳಿದ್ದರು. ಅಲ್ಲಿಗೆ ಬಂದ ಉಮ್ಮಡಹಳ್ಳಿ ಗ್ರಾಮಸ್ಥರು, ಸಾರ್ವಜನಿಕರು ಓಡಾಡುವುದಕ್ಕೆ ತುಂಬಾ ತೊಂದರೆಯಾಗಿದೆ. ದಯವಿಟ್ಟು ಬಂದು ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವಂತೆ ಮನವಿ ಮಾಡಿದರು. ಅದಕ್ಕೂ ಒಪ್ಪದ ಶಾಸಕ ಎಂ.ಶ್ರೀನಿವಾಸ್‌, ಆ ಗುತ್ತಿಗೆದಾರನಿಂದ ಕೆಲಸ ಮಾಡಿಸುವುದಿಲ್ಲ. ಬೇರೊಬ್ಬಗುತ್ತಿಗೆದಾರನ ಮೂಲಕ ಕೆಲಸ ಮಾಡಿಸಿಕೊಡುವ ಭರವಸೆ ನೀಡಿ ಕಳುಹಿಸಿದರು.

ಹೊಸಹಳ್ಳಿಯಲ್ಲಿ ಕಾಮಗಾರಿಗೆ ಚಾಲನೆ: ಮಂಡ್ಯ ನಗರದ 20ನೇ ವಾರ್ಡ್‌ನ ಹೊಸಹಳ್ಳಿ ಶ್ರೀಮಾರಮ್ಮದೇವಸ್ಥಾನದ ರಸ್ತೆ ಅಭಿವೃದ್ಧಿಗೆ 6 ಲಕ್ಷ ರೂ. ಮತ್ತುಸ್ಮಶಾನ ಅಭಿವೃದ್ಧಿಗೆ 9 ಲಕ್ಷ ರೂ. ಸೇರಿದಂತೆ ಒಟ್ಟು 15ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಎಂ.ಶ್ರೀನಿವಾಸ್‌ ಭಾನುವಾರ ಚಾಲನೆ ನೀಡಿದರು.

ನಗರಸಭೆಯ 15ನೇ ಹಣಕಾಸು ಯೋಜನೆಯಡಿ ರಸ್ತೆ ಅಭಿವೃದ್ಧಿ, ಕೂರುವ ಬೆಂಚುಗಳು ಹಾಗೂ ಪುಟ್‌ಬಾತ್‌ ನಿರ್ಮಾಣ ಸೇರಿದಂತೆ ಇನ್ನಿತರೆ ಅಭಿವೃದ್ಧಿಕಾಮಗಾರಿಗಳಿಗೆ ಚಾಲನೆ ನೀಡಿದರು.ನಗರಸಭೆ ಅಧ್ಯಕ್ಷ ಎಚ್‌.ಎಸ್‌.ಮಂಜು, ಮುಖಂಡರಾದ ಹೊಸಳ್ಳಿ ಸುರೇಶ್‌, ಲಿಂಗಣ್ಣ, ಶಿವಲಿಂಗಣ್ಣ, ಬಿಜೆಪಿ ಮುಖಂಡ ನಾಗೇಶ್‌ ಹಾಗೂ ಹೊಸಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.