ಚುನಾವಣಾ ಗುಂಗಿನಿಂದ ಹೊರಬರದ ಶಾಸಕರು

ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ, ರೈತರ ಸಮಸ್ಯೆಗೆ ಸಿಗದ ಮುಕ್ತಿ • ಬೆಳೆಹಾನಿಗೊಳಗಾದವರ ಕಷ್ಟ ಕೇಳ್ಳೋರಿಲ್ಲ, ಕಬ್ಬಿನ ಬಾಕಿ ಕೊಟ್ಟಿಲ್ಲ

Team Udayavani, May 6, 2019, 5:23 PM IST

mandya-1..

ಮಂಡ್ಯ: ಲೋಕಸಭಾ ಚುನಾವಣೆಯ ಗುಂಗಿನಿಂದ ಜಿಲ್ಲೆಯ ಸಚಿವರು ಹಾಗೂ ಶಾಸಕರು ಇನ್ನೂ ಹೊರಬಂದಿಲ್ಲ. ಚುನಾವಣೆ ಮುಗಿದು 17 ದಿನವಾದರೂ ಅಭಿವೃದ್ಧಿ ಕಾರ್ಯಗಳ ಕಡೆ ಗಮನಹರಿಸುವ, ರೈತರ ಸಂಕಷ್ಟಗಳಿಗೆ ಸ್ಪಂದಿಸುವ, ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವತ್ತ ಮನಸ್ಸು ಕೊಟ್ಟಿಲ್ಲ.

ಕಾರ್ಖಾನೆಗಳು ರೈತರ ಕಬ್ಬಿನ ಬಾಕಿ ಹಣ ಪಾವತಿಸಿಲ್ಲ, ಬಿರುಗಾಳಿ ಮಳೆಯಿಂದ ರೈತರ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾಗೂ ಆಸ್ತಿಗೆ ಹಾನಿಯಾಗಿದೆ. ಕೆರೆ-ಕಟ್ಟೆಗಳಲ್ಲಿ ನೀರಿಲ್ಲದೆ ಎಲ್ಲೆಡೆ ಕುಡಿವ ನೀರಿಗೆ ಹಾಹಾಕಾರ ಎದುರಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಗ್ರಹಣ ಹಿಡಿದಿದೆ. ಆದರೂ ಜನಪ್ರತಿನಿಧಿಗಳೆನಿಸಿಕೊಂಡವರು ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದ್ದಾರೆ. ಸಮಸ್ಯೆ ಹೆಚ್ಚಾಗಿದೆ.

ಗೆಲವಿನ ಲೆಕ್ಕಾಚಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರದ ಕುರ್ಚಿ ಉಳಿವಿಗಾಗಿ, ಮಂಡ್ಯ ಕ್ಷೇತ್ರದಲ್ಲಿ ಪುತ್ರನ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಪುತ್ರನ ಗೆಲವು ಸೋಲಿನ ಲೆಕ್ಕಾಚಾರದಲ್ಲಿದ್ದಾರೆ. ಶಾಸಕರು ಇದೇ ಗುಂಗಿನಲ್ಲಿದ್ದು ಜನರ ಕೈಗೆ ಸಿಗುತ್ತಿಲ್ಲ ಎಂಬಂತಾಗಿದೆ.

ಜಿಲ್ಲೆಯ ಕೆ.ಆರ್‌.ಪೇಟೆ, ಮಳವಳ್ಳಿ, ನಾಗಮಂಗಲ, ಮದ್ದೂರು ಸೇರಿದಂತೆ ವಿವಿಧೆಡೆ ಇತ್ತೀಚೆಗೆ ಬಿರುಗಾಳಿ ಮಳೆಯಾಗಿದ್ದು, ಆ ಭಾಗಗಳಲ್ಲಿ ಬಾಳೆ, ಅಡಕೆ, ತೋಟಗಾರಿಕೆ ಬೆಳೆಗಳು ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿವೆ. ಹಲವಾರು ಮನೆಗಳ ಮೇಲ್ಚಾವಣಿಗಳು ಬಿರುಗಾಳಿಗೆ ಹಾರಿಹೋಗಿವೆ. ಲಕ್ಷಾಂತರ ರೂ. ಮೌಲ್ಯದ ಬೆಳೆ, ಆಸ್ತಿ ಹಾನಿಯಾಗಿದ್ದರೂ ಯಾರೂ ಸಹ ಸಂತ್ರಸ್ತರನ್ನು ಸಂತೈಸುವ, ಅವರ ಕಷ್ಟಕ್ಕೆ ಸ್ಪಂದಿಸದೆ ದೂರವೇ ಉಳಿದಿದ್ದಾರೆ.

ಬಾಕಿ ಹಣ ನೀಡಿಲ್ಲ: ಚುನಾವಣಾ ಪೂರ್ವದಿಂದಲೂ ಸಕ್ಕರೆ ಕಾರ್ಖಾನೆಗಳಿಗೆ ಸರಬರಾಜು ಮಾಡಿದ ಕಬ್ಬಿನ ಬಾಕಿ ಪಾವತಿಸುವಂತೆ ರೈತರು ಒತ್ತಾಯಿಸುತ್ತಲೇ ಇದ್ದಾರೆ. ಇಂದಿಗೂ ಕಾರ್ಖಾನೆಗಳು ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿ ಮಾಡುವಲ್ಲಿ ವಿಫ‌ಲ ವಾಗಿವೆ. ಜಿಲ್ಲಾಡಳಿತವೂ ಕಾರ್ಖಾನೆ ಅಧಿಕಾರಿಗಳ ಸಭೆ ನಡೆಸಿ ಶೀಘ್ರ ಕಬ್ಬು ಬೆಳೆಗಾರರಿಗೆ ಹಣ ದೊರಕಿಸಿಕೊಡುವ ಕೆಲಸ ಮಾಡುತ್ತಿಲ್ಲ. ಇಲ್ಲವೇ ಸಕ್ಕರೆ ಜಪ್ತಿ ಮಾಡಿಕೊಂಡು ಮಾರಾಟ ಮಾಡಿ ಬಾಕಿ ಪಾವತಿ ಸುವ ಕ್ರಮಕ್ಕೂ ಮುಂದಾಗುತ್ತಿಲ್ಲ. ಜನಪ್ರತಿನಿಧಿಗಳೀಗ ಈ ವಿಷಯ ಗೊತ್ತಿದ್ದೂ ಗೊತ್ತಿಲ್ಲದವರಂತಿದ್ದಾರೆ.

ಆಕ್ರೋಶ: ಜಿಲ್ಲೆಯ ರೈತರು ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳಿಗಿಂತಲೂ ಮಂಡ್ಯ ಲೋಕಸಭಾ ಕ್ಷೇತ್ರದ ಫ‌ಲಿತಾಂಶವೇ ಅವರಿಗೆ ಪ್ರಧಾನವಾಗಿದೆ. ಫ‌ಲಿತಾಂಶ ಏನಾಗಬಹುದೆಂಬ ಲೆಕ್ಕಾಚಾರದಲ್ಲೇ ಮುಳುಗಿಹೋಗಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದಕ್ಕೆ ಸಮಯ ಕೊಡಲಾಗದೆ ಫ‌ಲಿತಾಂಶಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಇದು ಸಹಜವಾಗಿಯೇ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕಾಣದಂತಾದ ಪ್ರತಿನಿಧಿಗಳು: ಮಂಡ್ಯ ಫ‌ಲಿತಾಂಶದ ಗುಪ್ತಚರ ಇಲಾಖೆ ನೀಡಿರುವ ವರದಿ ಶಾಸಕರಲ್ಲೂ ತಳಮಳ ಸೃಷ್ಟಿಸಿದೆ. ಮುಖ್ಯಮಂತ್ರಿ ಪುತ್ರ ನಿಖೀಲ್ ಸ್ಪರ್ಧೆಯಿಂದ ಕ್ಷೇತ್ರ ದೇಶದಲ್ಲೇ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಫ‌ಲಿತಾಂಶವೇನಾದರೂ ಏರು-ಪೇರಾದರೆ ಜೆಡಿಎಸ್‌ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಅವರ ಆಕ್ರೋಶವನ್ನು ಎದುರಿಸುವುದು ಹೇಗೆ, ಮುಂದಿನ ತಮ್ಮ ರಾಜಕೀಯ ಭವಿಷ್ಯದ ಗತಿ ಏನು ಎಂಬ ಬಗ್ಗೆ ಬಹುತೇಕರು ತಲೆಕೆಡಿಸಿಕೊಂಡಿದ್ದಾರೆ.

ಹೀಗಾಗಿ ಜೆಡಿಎಸ್‌ ಸಚಿವರು, ಶಾಸಕರು, ಸಂಸದರು ಯಾರೂ ಸಹ ಕ್ಷೇತ್ರದೊಳಗೆ ಕಾಣಿಸಿ ಕೊಳ್ಳುತ್ತಿಲ್ಲ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಧರ್ಮ ಪಾಲಿಸಿಲ್ಲವೆಂಬ ಬಗ್ಗೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ನಾಯಕರಲ್ಲಿ ಅಪಸ್ವರಗಳು ಹೆಚ್ಚಾಗುತ್ತಿವೆ. ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಮಾತುಗಳು ದಟ್ಟವಾಗಿ ಳಿಬರುತ್ತಿವೆ. ಈ ಕಾರಣದಿಂದಲೂ ಶಾಸಕರೆಲ್ಲರೂ ಕ್ಷೇತ್ರದಿಂದ ಹೊರಗುಳಿದು ಅವರದೇ ಆದ ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಮುಂದೆ ಏನೆಲ್ಲಾ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂಬ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಸಿಎಂಗೆ ನೆಮ್ಮದಿಯಿಲ್ಲ: ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬಹದು. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಜನರು ಆಯ್ಕೆ ಮಾಡಿದ್ದರೂ, ಪಕ್ಷದ ನಾಯಕರೇ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೂ ಇನ್ನೂ ತೃಪ್ತಿ ಸಿಕ್ಕಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಮಂಡ್ಯ ಅಖಾಡದಲ್ಲಿ ಸಿಎಂ ಪುತ್ರನ ಗೆಲುವು ಜನಪ್ರತಿನಿಧಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅದಕ್ಕಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ. ಚುನಾವಣೋತ್ತರದಲ್ಲಿ ಜಿಲ್ಲೆಯೊಳಗೆ ಫ‌ಲಿತಾಂಶದ ಬಗೆಗಿನ ವಾತಾವರಣ ಬದಲಾಗಿರುವುದು ಶಾಸಕರ ನಿದ್ದೆಗೆಡಿಸಿದೆ. ಸಿಎಂಗೆ ನೆಮ್ಮದಿ ಇಲ್ಲದಂತೆ ಮಾಡಿದೆ.

ಒಟ್ಟಿನಲ್ಲಿ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲ, ನೀರಿಲ್ಲದೆ ಬೆಳೆ ನಷ್ಟಕ್ಕೊಳಗಾಗಿ ಆರ್ಥಿಕ ಚೇತರಿಕೆಯನ್ನು ಕಾಣದೆ ಕಂಗಾಲಾಗಿದ್ದಾರೆ. ನಾಗಮಂಗಲ, ಕೆ.ಆರ್‌.ಪೇಟೆ ಸೇರಿದಂತೆ ಗ್ರಾಮೀಣ ಭಾಗದ ಜನರು ಕುಡಿಯುವ ನೀರಿಲ್ಲದೆ ಕಂಗೆಟ್ಟಿದ್ದಾರೆ. ಇದೆಲ್ಲದರ ನಡುವೆ ನಾಡಿನ ದೊರೆ ಮಾತ್ರ ಇದಾವುದರ ಚಿಂತೆ ಇಲ್ಲದೆ ಮಂಡ್ಯದಲ್ಲಿ ಮಗನ ಫ‌ಲಿತಾಂಶದ ಬಗ್ಗೆ ದಿಕ್ಕೆಟ್ಟಿರುವುದು ವಿಚಿತ್ರ ಸತ್ಯವಾಗಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.