ನಾಳೆ 9 ಕೋಟಿ ರೈತರ ಖಾತೆಗೆ ಹಣ ಜಮೆ


Team Udayavani, Dec 24, 2020, 2:05 PM IST

ನಾಳೆ 9 ಕೋಟಿ ರೈತರ ಖಾತೆಗೆ ಹಣ ಜಮೆ

ಮಂಡ್ಯ: ಬಿಜೆಪಿ ವತಿಯಿಂದ ಡಿ.25ರಂದು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ರಾಜ್ಯದ್ಯಂತ ಕಿಸಾನ್‌ ಸಮ್ಮಾನ್‌ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 9 ಕೋಟಿ ರೈತ ಬಾಂಧವರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ 18 ಸಾವಿರಕೋಟಿ ರೂ. ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೆಮಧ್ಯಾಹ್ನ 11.45ರಲ್ಲಿ ವರ್ಗಾಯಿಸಿ, ನಂತರ 12ಕ್ಕೆರೈತರನ್ನು ಉದ್ದೇಶಿಸಿ ಮಾತನಾಡಲಿದ್ದು, ಎಲ್ಲ ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರವಾಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನೇರ ಪ್ರಸಾ ರವೀಕ್ಷಣೆ : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿರುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಲ್ಲ ಜಿಲ್ಲೆ, ಮಂಡಲ,ಎಪಿಎಂಸಿ, ಸಹಕಾರ ಸಂಘ-ಸಂಸ್ಥೆಗಳು ಹಾಗೂ ಶಕ್ತಿ ಕೇಂದ್ರಗಳಲ್ಲಿ ಬಿಜೆಪಿಯ ಪದಾಧಿಕಾರಿಗಳು ರೈತರನ್ನುಆಹ್ವಾನಿಸಿ,ಅಟಲ್‌ಜೀಅವರಭಾವಚಿತ್ರಕ್ಕೆಪುಷ್ಪಾರ್ಚನೆಮಾಡಿ, ಪ್ರಧಾನ ಮಂತ್ರಿಗಳ ಭಾಷಣದ ನೇರ ಪ್ರಸಾರ ವೀಕ್ಷಣೆ ಮಾಡಲಿದ್ದಾರೆ ಎಂದರು.

ಇದಕ್ಕೂ1 ಗಂಟೆ ಮುಂಚಿತವಾಗಿ ಚುನಾಯಿತ ಪ್ರತಿ ನಿಧಿಗಳು ಹಾಗೂ ಪದಾಧಿಕಾರಿಗಳು ರೈತ ಸಭೆಗಳನ್ನುಆಯೋಜಿಸಿ, ಕೇಂದ್ರ ಸರ್ಕಾರ ಕೃಷಿ ಕಲ್ಯಾಣಕ್ಕಾಗಿಹಾಗೂ ರೈತಆರ್ಥಿಕ ಸಬಲೀಕರಣಕ್ಕಾಗಿ ತೆಗೆದುಕೊಂಡಿರುವ ಕೃಷಿ ಸುಧಾರಣಾ ನೀತಿ, ರೈತಪರಯೋಜನೆಗಳಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ಹೇಳಿದರು.

ವಿವಿಧ ಯೋಜನೆ ಜಾರಿ: ಕೇಂದ್ರ ಸರ್ಕಾರ ರೈತರಿಗಾಗಿ ಬೇವು ಲೇಪಿತ ಯೂರಿಯಾ, ಬೀಜ್‌-ಸೆ-ಬಜಾರ್‌ ತಕ್‌’, 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆ, ಕಿಸಾನ್‌ ಕಾರ್ಡ್‌ಗಳ ವಿತರಣೆ, ರಸ ಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆ, ಮಣ್ಣಿನ ಫಲವತ್ತತೆ ಕಾರ್ಡ್‌ ವಿತರಣೆ, ಅಟಲ್‌ ಪೆನÒನ್‌ಯೋಜನೆ, ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ,ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಜೋಡಣೆ,ಆತ್ಮನಿರ್ಭರ ಭಾರ ತಯೋಜನೆಯಡಿಯಲ್ಲಿ 1 ಲಕ್ಷ ಕೋಟಿ ಮೊತ್ತ ಕೃಷಿ ಸೌಲಭ್ಯಕ್ಕಾಗಿ ಮೀಸಲು,ಕಬ್ಬು ಬೆಳೆಗಾರರಿಗೆ ಸಬ್ಸಿಡಿ ಹಣ, ಪಶು ಸಂಗೋಪನಾ ಮೂಲಸೌಕರ್ಯನಿ, ಎಣ್ಣೆಕಾಳುಗಳ ಎಂಎಸ್‌ಪಿಯಲ್ಲಿಶೇ.59ರಷ್ಟು ಹೆಚcಳ ‌, ಭತ ¤ ಮñು¤ ‌ ಗೋದಿ ಎಂಎಸ್‌ ಪಿಯಲ್ಲಿ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.

ವಿಜಯ್‌ ಕುಮಾರ್‌, ರೈತ ಮೋರ್ಚಾದ ರಾಜ್ಯ  ಉಪಾಧ್ಯಕ್ಷಕೆ.ಎಸ್‌.ನಂಜುಂಡೇಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ, ಜಿಲ್ಲಾ ವಕ್ತಾರ ಕೆ.ಕಾಳೇಗೌಡ,ಮಾಧ್ಯಮ ಪ್ರಮುಖ್‌ ಎಂ.ಕೆ.ನಾಗಾನಂದ್‌ ಹಾಜರಿದ್ದರು.

ರೈತರ ಹೋರಾಟ ದಾರಿ ತಪ್ಪಿದೆ :  ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ರೈತರಹೋರಾಟವಲ್ಲ. ರೈತರ ಹೋರಾಟ ದಾರಿ ತಪ್ಪಿದ್ದು, ಎಪಿಎಂಸಿ ಹಾಗೂ ಭೂ ಸುಧಾರಣೆ ಕಾಯ್ದೆಯಿಂದ ದಲ್ಲಾಳಿಗಳಿಗೆ ನಷ್ಟವಾಗಲಿದೆ. ಆ ದೃಷ್ಟಿಯಿಂದ ರೈತರನ್ನು ಎತ್ತಿಕಟ್ಟಿ ಹೋರಾಟ ಮಾಡಲಾಗುತ್ತಿದೆ.ಹೋರಾಟ ದಾರಿ ತಪ್ಪುತ್ತಿರುವ ಬಗ್ಗೆ ಅಲ್ಲಿನ ರೈತರೇ ಹೇಳಿದ್ದಾರೆ.ಕೇಂದ್ರದ ಮಂತ್ರಿಗಳು ಹಲವಾರು ಬಾರಿ ಮಾತುಕತೆ ನಡೆಸಿದ್ದರೂ ಪ್ರಯೋಜನವಾಗಿಲ್ಲ. ಕಾಯ್ದೆಗಳಿಗೆ ತಿದ್ದುಪಡಿ ತರುತ್ತೇವೆ ಎಂದರೂ ಕೇಳುತ್ತಿಲ್ಲ. ಸಂಪೂರ್ಣ ಕಾಯ್ದೆ ರದ್ದು ಮಾಡುವಂತೆ

ಒತ್ತಾಯಿಸುತ್ತಿದ್ದಾರೆ. ಅಲ್ಲದೆ, ನಕ್ಸಲ್‌ ಪ್ರಕರಣಗಳಿರುವವರನ್ನು ಬಿಡುಗಡೆ ಮಾಡಬೇಕೆಂಬಒತ್ತಾಯವನ್ನೂ ಸೇರಿಸಿದ್ದಾರೆ. ಇದು ರಾಜಕೀಯಪ್ರೇರಿತವಾಗಿದೆ. ಇದನ್ನು ರೈತರ ಹೋರಾಟ ಎಂದುಹೇಗೆ ಹೇಳಲು ಸಾಧ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಪ್ರಶ್ನಿಸಿದರು.

ಬಿಜೆಪಿ-ಜೆಡಿಎಸ್‌ ವಿಲೀನ ಚರ್ಚೆ ಇಲ್ಲ  :

ಬಿಜೆಪಿ-ಜೆಡಿಎಸ್‌ ವಿಲೀನಗೊಳ್ಳಲಿವೆ ಎಂಬ ಸುದ್ದಿ ಗಳು ಸುಳ್ಳು. ಆ ರೀತಿಯ ಯಾವುದೇ ಚರ್ಚೆಗಳು ನಡೆದಿಲ್ಲ. ವಿಷಯಾಧಾರಿತ ಬೆಂಬಲ ನೀಡಲಾಗುವುದು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಇದು ಅನಗತ್ಯ ಎಂದು ಅಶ್ವತ್ಥನಾರಾಯಣಹೇಳಿದರು.

ಸಚಿವರನ್ನು ಕೇಳಿ: ಕೋವಿಡ್ ಸಂದರ್ಭದಲ್ಲಿ ರೇಷ್ಮೆ ಬೆಳೆಗಾರರಿಗೆಕೆ.ಜಿ. ರೇಷ್ಮೆಗೂಡಿಗೆ 50 ರೂ. ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಹೇಳಿದ್ದರು. ಆದರೆ, ಇದುವರೆಗೂ ಜಿಲ್ಲೆಯ ಯಾವೊಬ್ಬ ರೈತರಿಗೂ ಹಣ ಬಂದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ನೀವು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಕೆ .ಸಿ.ನಾರಾಯಣಗೌಡರನ್ನೇ ಕೇಳಬೇಕು ಎಂದು ಜಾರಿಕೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.