ಘನತ್ಯಾಜ್ಯ ನಿರ್ವಹಣೆಗೆ ಯೋಜನೆ ರೂಪಿಸಲು ತಿಂಗಳ ಗಡುವು
ವಾರ್ಡ್ವಾರು ಗೊಬ್ಬರ ಕೇಂದ್ರ ತೆರೆಯಲು ಸೂಚನೆ • ಜಿಲ್ಲೆಯಲ್ಲಿ ನಿತ್ಯ 129.44 ಮೆಟ್ರಿಕ್ ಟನ್ ಕಸ ಉತ್ಪತ್ತಿ
Team Udayavani, May 19, 2019, 3:47 PM IST
ಮಂಡ್ಯದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾೕಕರಣದ ರಾಜ್ಯ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಅಡಿ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಆರೋಗ್ಯ ಮತ್ತು ಇತರೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಮಂಡ್ಯ: ಘನತ್ಯಾಜ್ಯ ನಿರ್ವಹಣೆಗೆ ಸಂಬಂಸಿದಂತೆ ತಿಂಗಳೊಳಗೆ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳು ಯೋಜನೆ ರೂಪಿಸದಿದ್ದಲ್ಲಿ ಅಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಾೕಧಿಕರಣದ ರಾಜ್ಯ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಅಡಿ ಎಚ್ಚರಿಕೆ ನೀಡಿದರು.
ಶನಿವಾರ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಆರೋಗ್ಯ ಮತ್ತು ಇತರೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅನುಷ್ಠಾನಗೊಳಿಸಲು ವಿಫಲವಾದಲ್ಲಿ ಕಲಂ 15ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಾೕಧಿಕರಣ ಮತ್ತು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.
ನಿರ್ವಹಣೆ ಕೊರತೆ: ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕ ನಿರ್ವಹಣೆ ಮಾಡದಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಸಮಿತಿ ರಚಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿರುವ ಸಮಿತಿ ಅದರ ಸಮರ್ಪಕ ಅನುಷ್ಠಾನ ಮಾಡಬೇಕಾಗಿದೆ. ಇನ್ನೂ ಪರಿಣಾಮಕಾರಿಯಾಗಿ ಮಾಡದ ಕಾರಣ ಎಲ್ಲ ಜಿಲ್ಲೆಗಳಿಗೂ ತೆರಳಿ ಸಭೆ ನಡೆಸಿ ಸೂಚನೆ ನೀಡಲಾಗುತ್ತಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಒಟ್ಟಾರೆ ಪ್ರತಿನಿತ್ಯ 11,600 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಬೆಂಗಳೂರು ಒಂದರಲ್ಲೆ 5,600 ಮೆಟ್ರಿಕ್ ಟನ್ ಉತ್ಪಾದನೆಯಾದರೆ, ಮಂಡ್ಯ ಜಿಲ್ಲೆಯಲ್ಲಿ 128.44 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಈ ಪೈಕಿ 60 ಮೆಟ್ರಿಕ್ ಟನ್ ಮಂಡ್ಯ ನಗರವೊಂದರಲ್ಲೇ ಉತ್ಪತ್ತಿಯಾಗುತ್ತದೆ ಎಂದರು.
ಜನಸಾಮಾನ್ಯರ ಸಹಭಾಗಿತ್ವ: ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಜನಸಾಮಾನ್ಯರ ಸಹಭಾಗಿತ್ವವೂ ಅಷ್ಟೇ ಮುಖ್ಯ. ಬೆಂಗಳೂರಿನಂತಹ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿರುವ ಅಪಾರ್ಟ್ಮೆಂಟ್ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿಕೊಳ್ಳುವುದು ಕಡ್ಡಾಯವಾಗಿದೆ. ಸಮುದಾಯ ಭವನಗಳಲ್ಲೂ ಕೇಂದ್ರಗಳನ್ನು ಸ್ಥಾಪಿಸಬೇಕು ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಪರಿಸರ ಮಾಲಿನ್ಯ ಅಕಾರಿಗಳು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಮರ್ಪಕವಾಗಿ ನಿಯಮಗಳನ್ನು ರೂಪಿಸಲು ಚಿಂತನೆ ನಡೆಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಅಕಾರಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ದೊಡ್ಡ ಮಟ್ಟದ ದಂಡ ಅಂದರೆ ಪ್ರಥಮ ಬಾರಿ ತಪ್ಪು ಎಸಗಿದಲ್ಲಿ 25 ಸಾವಿರ ರೂ., ಎರಡನೇ ಬಾರಿಯೂ ಪುನರಾವರ್ತನೆಯಾದಲ್ಲಿ 50 ಸಾವಿರ ರೂ. ಮತ್ತೂ ಮುಂದುವರಿದಲ್ಲಿ ಅವರ ಪರವಾನಗಿಯನ್ನೇ ರದ್ದುಪಡಿಸುವಂತಹ ಶಿಕ್ಷೆಗಳನ್ನು ವಿಸುವಂತಹ ಕಾನೂನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ನಿಷೇಧ: ಈಗಾಗಲೇ ರಾಷ್ಟ್ರಾದ್ಯಂತ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ರಾಜ್ಯವಾರು ಶಿಸ್ತು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲು ಆಗುತ್ತಿಲ್ಲ. ಈ ಹಿನ್ನಲೆಯಲ್ಲಿ ಮಾರುವವರು ಮತ್ತು ಕೊಂಡುಕೊಳ್ಳುವವರಿಗೆ ದಂಡ ವಿಸಿದರೆ ಸ್ವಲ್ಪ ಮಟ್ಟಿನ ಜಾಗೃತಿ ಮೂಡಲಿದೆ ಎಂದು ಹೇಳಿದರು.
ಸಮುದಾಯ ಭವನಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಸ್ಥಳೀಯ ಸಂಸ್ಥೆಗಳು ಅವರಿಗೆ ಎಚ್ಚರಿಕೆ ನೀಡಬೇಕು. ಹಿಂದೆ ಇದ್ದಂತೆ ಸ್ಟೀಲ್ ತಟ್ಟೆ, ಲೋಟಗಳನ್ನು ಬಳಸುವುದನ್ನು ಪ್ರೋತ್ಸಾಹಿಸಬೇಕು. ಉತ್ಕೃಷ್ಟ ದರ್ಜೆಯ ಸ್ವಚ್ಛತೆ ಅಳವಡಿಸಿಕೊಂಡು, ಗುಣಮಟ್ಟದ ನೀರನ್ನು ಸರಬರಾಜು ಮಾಡುವಂತಹ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಪಿ.ಸಿ.ಜಾಫರ್, ಆರೋಗ್ಯ ಇಲಾಖೆಯ ಉಪನಿರ್ದೇಶಕ ಡಾ. ವಿವೇಕ್ದೊರೆ, ಡಾ.ರಮೇಶ್, ಪೌರಾಡಳಿತ ಇಲಾಖೆಯ ಮುಖ್ಯ ಅಭಿಯಂತರ ಸೋಮೇಶ್, ಲೋಕನಾಥ್, ರಮೇಶ್, ನಾಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ. ಎಚ್.ಪಿ. ಮಂಚೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ