25ಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಸ್ಥಗಿತ


Team Udayavani, Dec 23, 2019, 2:41 PM IST

mandya-tdy-1

ಕೆ.ಆರ್‌.ಪೇಟೆ: ತಾಲೂಕಿನಲ್ಲಿ ಗ್ರಾಮಿಣ ಭಾಗದ ಜನರ ಆರೋಗ್ಯಕಾಪಾಡುವ ಸಲುವಾಗಿ ಸರ್ಕಾರ ನೂರಾರು ಕೋಟಿ ರೂ. ಖರ್ಚುಮಾಡಿ ಶುದ್ಧ ನೀರು ಸರಬರಾಜು ಘಟಕಗಳನ್ನು ಸ್ಥಾಪನೆಮಾಡಿದ್ದಾರೆ. ಆದರೆ ಅವುಗಳಲ್ಲಿ ಕೆಲವು ಕಾರ್ಯನಿರ್ವಹಿಸಿ ಜನರಿಗೆ ಶುದ್ಧವಾದ ನೀರು ಸರಬರಾಜಾಗುತ್ತಿದ್ದರೆ, ಮತ್ತೆ ಕೆಲವು ಕೆಟ್ಟು ನಿಂತಿವೆ.

ತಾಲೂಕಿನಲ್ಲಿ ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಹಕಾರ ಸಂಘಗಳು, ಭೂ ಸೇನಾ ನಿಗಮ, ಕೋರಮಂಡಲ್‌ ಸಕ್ಕರೆ ಕಾರ್ಖಾನೆ ಸೇರಿದಂತೆ ಖಾಸಗಿ ವ್ಯಕ್ತಿಗಳು ಸುಮಾರು 113 ಶುದ್ಧ ಕುಡಿಯುವ ನೀರು ಸರಬರಾಜು ಘಟಕಗಳಲ್ಲಿ ನಿರ್ಮಾಣ ಮಾಡಿದ್ದಾರೆ. ಆದರೆ ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಮತ್ತು ಭೂ ಸೇನಾ ನಿಗಮ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಘಟಕಗಳು ಇನ್ನು ಉದ್ಘಾಟನೆಯಾಗದೆ ಉಳಿದಿರುವುದು ಖಂಡನೀಯ. ತಾಲೂಕಿನಲ್ಲಿ ಗ್ರಾಮಿಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 58 ಶುದ್ಧ ಕುಡಿಯುವ ನೀರು ಸರಬರಾಜು ಘಟಕಗಳನ್ನು ನಿರ್ಮಾಣ ಮಾಡಲಾಗಿದ್ದು, 8 ಘಟಕಗಳು ಇನ್ನೂ ಕಾಮಗಾರಿ ಪೂರ್ಣಗೊಳ್ಳದೆ ಜನರಿಗೆ ಸೇವೆ ಸಿಗುತ್ತಿಲ್ಲ, 15 ಘಟಕಗಳು ಕೆಟ್ಟು ನಿಂತಿವೆ

ಇನ್ನುಳಿದ 35 ಘಟಕಗಳಲ್ಲಿ ಜನರಿಗೆ ನೀರು ಸರಬರಾಜಾಗುತ್ತದೆ. ಭೂ ಸೇನಾ ನಿಮಗದಿಂದ 28 ಶುದ್ಧ ಕುಡಿಯುವ ನೀರು ಸರಬರಾಜು ಘಟಕಗಳನ್ನು ನಿರ್ಮಿಸಲಾಗಿದ್ದು, 1ಘಟಕಗಳು ಇನ್ನೂ ಕಾಮಗಾರಿ ಪೂರ್ಣಗೊಳ್ಳದೆ ಜನರಿಗೆ ಸೇವೆ ಸಿಗುತ್ತಿಲ್ಲ, 11 ಘಟಕಗಳು ಕೆಟ್ಟು ನಿಂತಿವೆ ಇನ್ನುಳಿದ 16 ಘಟಕಗಳಲ್ಲಿ ಜನರಿಗೆ ನೀರು ಸರಬರಾಜಾಗುತ್ತದೆ. ಸಹಕಾರ ಸಂಘದಿಂದ 10 ಘಟಕಗಳನ್ನು ನಿರ್ಮಾಣ ಮಾಡಿದ್ದು ಎಲ್ಲವೂ ಜನರಿಗೆ ಕುಡಿಯುವ ನೀರನ್ನು ಒದಗಿಸುತ್ತಿವೆ.

ಕೋರಮಂಡಲ್‌ ಸಕ್ಕರೆ ಕಾರ್ಖಾನೆಯವರು ಮಾಕವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 8 ಘಟಕಗಳನ್ನು ಸ್ಥಾಪನೆಮಾಡಿದ್ದ ಎಲ್ಲವೂ ನೀರು ಸರಬರಾಜು ಮಾಡುತ್ತಿವೆ. ಪಟ್ಟಣದಲ್ಲಿ ಪುರಸಭೆ, ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಭೂ ಸೇನಾ ನಿಗಮ ಸೇರಿದಂತೆ ಯಾವುದೇ ಇಲಾಖೆಗಳಿಂದ ಶುದ್ಧ ಕುಡಿಯುವ ನೀರು ಸರಬರಾಜು ಘಟಕಗಳನ್ನು ನಿರ್ಮಾಣ ಮಾಡಿಲ್ಲ. ಆದರೆ ಟಿಎಪಿಸಿಎಸ್‌ಎಂ, ಕಸಬಾ ಸಹಕಾರ ಸಂಘದ ವತಿಯಿಂದ ತಲಾ ಒಂದು ಕುಡಿಯುವ ನೀರು ಸರಬರಾಜು ಘಟಕ ಗಳನ್ನು ನಿರ್ಮಾಣ ಮಾಡಿದ್ದಾರೆ. ಇದರ ಜತೆಗೆ ಖಾಸಗಿ ವ್ಯಕ್ತಿಗಳು ಘಟಕಗಳನ್ನು ನಿರ್ಮಿಸಿ ಜನರಿಗೆ ಶುದ್ಧ ನೀರು ಒದಗಿಸುತ್ತಿದ್ದಾರೆ.

ನಿರ್ವಹಣೆ ಕೊರತೆ: ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರು ಸರಬರಾಜು ಘಟಕಗಳ ನಿರ್ವಹಣೆಯಲ್ಲಿ ಅಧಿಕಾರಿಗಳು ಸೂಕ್ತವಾಗಿ ಕ್ರಮ ವಹಿಸುತ್ತಿಲ್ಲ ಎಂಬ ದೂರುಗಳು ಗ್ರಾಮೀಣಭಾಗದ ಜನರಿಂದ ಕೇಳಿಬರುತ್ತಿವೆ. ಘಟಕದ ಸುತ್ತಲು ಗಿಡಗಳು ಬೆಳೆಯುವುದು. ಅಕ್ಕಪಕ್ಕದಲ್ಲಿ ಕೊಳೆಚೆ ನೀರು ನಿಲ್ಲುವುದನ್ನು ಸಾಮಾನ್ಯವಾಗಿ ತಾಲೂಕಿನಲ್ಲಿ ಕಾಣಬಹುದಾಗಿದೆ. ಇದರಿಂದ ಘಕಟದಲ್ಲಿ ಶುದ್ಧ ನೀರು ಬರುತ್ತಿದೂ ಇಲ್ಲವೋ ಎಂಬ ಅನುಮಾನದಿಂದ ಕೆಲವರು ಇಲ್ಲಿ ನೀರನ್ನು ಪಡೆದುಕೊಳ್ಳುವುದಿಲ್ಲ ಎಂಬ ಆರೋಪಗಳು ಇವೆ.

ಹಣ ನೀಡಲಾಗುತ್ತದೆ:  ತಾಲೂಕಿನಲ್ಲಿ ಸರ್ಕಾರದಿಂದ ನಿರ್ಮಾಣ ಮಾಡಿರುವ ನೀರು ಸರಬರಾಜು ಘಟಕಗಳಿಂದ ಜನರಿಗೆ ಉಚಿತವಾಗಿ ನೀರು ನೀಡಲಾಗುತ್ತಿಲ್ಲ. ಎಲ್ಲರೂ ಹಣವನ್ನು ಪಾವತಿಮಾಡಿಯೇ ನೀರು ಪಡೆಯಬೇಕಾಗಿದೆ. ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಘಟಕಗಳಲ್ಲಿ 20 ಲೀ ಶುದ್ಧ ನೀರು ಪಡೆಯಲು ಜನರು 2 ರೂ. ನೀಡಬೇಕು. ಸಹಕಾರ ಸಂಘ ಮತ್ತು ಕೋರಮಂಡಲ್‌ ಸಕ್ಕರೆ ಕಾರ್ಖಾನೆಯಿಂದ ನಿರ್ಮಾಣ ಮಾಡಿರುವ ಘಟಕಗಳಲ್ಲಿ 5 ರೂ. ನೀಡಬೇಕು. ಖಾಸಗಿ ಘಟಕಗಳಲ್ಲಿ 20 ಲೀಟರ್‌ಗೆ 05 ರಿಂದ 20 ರೂ.ವರೆಗೂ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ.

ದುರಸ್ತಿ ಮಾಡಿಸುತ್ತೇವೆ:  ಗ್ರಾಮಿಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೆ.ಆರ್‌.ಪೇಟೆ ಉಪ ವಿಭಾಗದ ಸಕಾಯಕ ಕಾರ್ಯಪಾಲ ಎಂಜಿನಿಯರ್‌ ಸತೀಶ್‌ಬಾಬು ಮಾತನಾಡಿ, ನಾವುಗಳು ತಾಲೂಕಿನಲ್ಲಿ ನಿರ್ಮಾಣ ಮಾಡಿರುವ ಎಲ್ಲ ಘಟಕಗಳನ್ನು ಸ್ವತ್ಛವಾಗಿಟ್ಟುಕೊಂಡಿದ್ದೇವೆ. ಆದರೆ ಘಟಕಗಳ ಸರಬರಾಜು ಮಾಡಿರುವ ಕಂಪನಿ ಯವರು ಉಚಿತವಾಗಿ ನಿರ್ವಹಣೆ ಮಾಡುವ ಅವಧಿ ಮುಕ್ತಾಯವಾಗಿರುವುದರಿಂದ ಕೆಟ್ಟು ನಿಂತಿರುವ ಘಟಕಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗಿಲ್ಲ. ಈಗಾಗಲೇ ಶುದ್ಧ ಕುಡಿವ ನೀರು ಸರಬರಾಜು ಘಟಕಗಳ ನಿರ್ವಹಣೆಮಾಡಲು ಅರ್ಹ ವ್ಯಕ್ತಿಗಳನ್ನು ಆಹ್ವಾನಿಸಿ ಟೆಂಡರ್‌ ಕರೆಯಲಾಗಿದ್ದು ಒಂದು ತಿಂಗಳ ಅವಧಿಯ ಒಳಗಾಗಿ ಎಲ್ಲ ಘಟಕಗನ್ನು ದುರಸ್ತಿ ಮಾಡಿಸಲಾಗುವುದು ಎಂದರು.

ಕೆಟ್ಟು ನಿಂತ ಘಟಕಗಳು: ತಾಲೂಕಿನಲ್ಲಿ 25 ಕ್ಕೂ ಹೆಚ್ಚು ಶುದ್ಧಕುಡಿಯುವ ನೀರು ಸರಬರಾಜು ಘಟಕಗಳು ಕೆಟ್ಟು ನಿಂತಿವೆ. ಇದಕ್ಕೆ ಕಾರಣ ನಿಮಾರ್ಣವಾಗಿರುವ ಘಟಕ ಗಳನ್ನು ಘಟಕವನ್ನು ಸರಬರಾಜು ಮಾಡಿರುವ ಕಂಪನಿಯವರು 5 ವರ್ಷಗಳ ಕಾಲ ನಿರ್ವಹಣೆ ಮಾಡುವುದಾಗಿ ಭರವಸೆ ನೀಡಿದ್ದರೂ. ಆದರೆ ಈಗ 5 ವರ್ಷದ ಅವಧಿ ಮುಗಿದಿರುವುದರಿಂದ ಘಟಕಗಳ ನಿರ್ವಹಣೆಯಾರು ಮಾಡದೇ ಇರುವುದರಿಂದ ಸಣ್ಣ ತಾಂತ್ರಿಕ ಕಾರಣಗಳಿಂದಲೇ ಬಹತೇಕ ಘಟಕಗಳು ಸ್ಥಗಿತವಾಗಿವೆ. ಈಗ ಅವುಗಳನ್ನು ದುರಸ್ತಿ ಮಾಡಿಸಲು ಅಧಿಕಾರಿಗಳು ಕ್ರಮ ವಹಿಸದಿರುವುದರಿಂದ ಜನರಿಗೆ ಘಟಕಗಳಿದ್ದರೂ ಶುದ್ಧ ನೀರು ಸಿಗದಂತಾಗಿದೆ.

 

ಎಚ್‌.ಬಿ.ಮಂಜುನಾಥ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.