ತೇಗ ಮರ ಕದ್ದು ಸಾಗಿಸುತ್ತಿದ್ದ ವಾಹನ ಅಪಘಾತ

ತೀವ್ರ ಗಾಯಗೊಂಡಿದ್ದ ಚಾಲಕ ಸಾವು: ಕಳ್ಳರು ಪರಾರಿ • ಇಂಡುವಾಳು ಪ್ರಕೃತಿ ಉದ್ಯಾನವನದಲ್ಲಿ ಘಟನೆ

Team Udayavani, Jul 27, 2019, 11:52 AM IST

mandya-tdy-2

ಇಂಡುವಾಳು ಪ್ರಕೃತಿ ಉದ್ಯಾನದ ಬಳಿ ಅಪಘಾತಕ್ಕೀಡಾಗಿರುವ ಬೊಲೇರೋ ವಾಹನ, ಪಕ್ಕದಲ್ಲೇ ಬಿದ್ದಿರುವ ತೇಗದ ಮರದ ತುಂಡುಗಳು.

ಮಂಡ್ಯ: ನಗರದ ಹೊರವಲಯದಲ್ಲಿರುವ ಇಂಡುವಾಳು ಪ್ರಕೃತಿ ಉದ್ಯಾನವನದಲ್ಲಿ ತೇಗದ ಮರ ಕದ್ದು ಸಾಗಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಸುಮಾರು 1 ಲಕ್ಷ ರೂ. ಮೌಲ್ಯದ ತೇಗದ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗಿದ್ದೇನು? : ಗುರುವಾರ ಮಧ್ಯರಾತ್ರಿ ಇಂಡುವಾಳು ಉದ್ಯಾನದಲ್ಲಿರುವ ಬೆಲೆಬಾಳುವ ಮರಗಳನ್ನು ಕದ್ದೊಯ್ಯಲು ಮರಗಳ್ಳತರ ತಂಡ ಎರಡು ವಾಹನಗಳಲ್ಲಿ ಆಗಮಿಸಿದೆ. ಮೊಳೆಕೊಪ್ಪಲು ರಸ್ತೆ ಬಳಿ ಬೆಳೆದು ನಿಂತಿದ್ದ ಮೂರ್‍ನಾಲ್ಕು ತೇಗದ ಮರಗಳ ಪೈಕಿ ಬೃಹತ್‌ ಗಾತ್ರದ ಮರವನ್ನು ಆಯ್ಕೆ ಮಾಡಿಕೊಂಡು ಗರಗಸದಿಂದ ಬುಡ ಕತ್ತರಿಸಿದ್ದಾರೆ. ನೆಲಕ್ಕುರುಳಿದ ಮರವನ್ನು ಅಳತೆಗೆ ತಕ್ಕಂತೆ ಕೊಯ್ದು ತಾವು ತಂದಿದ್ದ ವಾಹನಗಳಿಗೆ ತುಂಬಿದ್ದಾರೆ.

ಮರದ ತುಂಡುಗಳನ್ನು ತುಂಬಿದ್ದ ಬೊಲೇರೋ ವಾಹನ (ಕೆಎ.45- 7418) ಬೆಂಗಳೂರು-ಮೈಸೂರು ಹೆದ್ದಾರಿ ಕಡೆ ಬರುವ ವೇಳೆ ಇಂಡುವಾಳು ಉದ್ಯಾನದ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ. ವಾಹನದಲ್ಲಿದ್ದ ಮರದ ತುಂಡುಗಳು ನೆಲಕ್ಕುರುಳಿವೆ. ಬಳಿಕ ಹರಸಾಹಸ ನಡೆಸಿ ವಾಹನವನ್ನು ಮೇಲೆತ್ತಿ ನಿಲ್ಲಿಸಿದರಾದರೂ ಮತ್ತೆ ದೊಡ್ಡ ಗಾತ್ರದ ಮರದ ತುಂಡುಗಳನ್ನು ತುಂಬಿಕೊಳ್ಳುವುದಕ್ಕೆ ಅವರಿಂದ ಸಾಧ್ಯವಾಗಿಲ್ಲ. ಜೊತೆಗೆ ಚಾಲಕ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ಕಾರಣ ಮರದ ತುಂಡುಗಳೊಂದಿಗೆ ಅವನನ್ನೂ ಬಿಟ್ಟು ಮರದ ದೊಡ್ಡ ದಿಮ್ಮಿಯನ್ನು ಹೊತ್ತಿದ್ದ ಮತ್ತೂಂದು ವಾಹನದಲ್ಲಿ ಕಳ್ಳರು ಕಾಲ್ಕಿತ್ತಿದ್ದಾರೆ.

ರಾತ್ರಿ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ವಾಹನ ಹಳ್ಳಕ್ಕೆ ಉರುಳಿರುವುದನ್ನು ಕಂಡು ಹತ್ತಿರಕ್ಕೆ ಹೋಗಿ ನೋಡಿದಾಗ ಪಕ್ಕದಲ್ಲೇ ಗಂಭೀರ ವಾಗಿ ಗಾಯಗೊಂಡು ನರಳಾಡುತ್ತಿದ್ದ ಚಾಲಕನನ್ನು ಕಂಡಿದ್ದಾರೆ. ಬಳಿಕ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿ ಆ್ಯಂಬುಲೆನ್ಸ್‌ ಮೂಲಕ ಗಾಯಾಳುವನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಚಾಲಕ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾನೆ.

ಬೆಲೆ ಬಾಳುವ ಮರಗಳಿವೆ: ಇನ್ನೂ ಇಂಡುವಾಳು ಪ್ರಕೃತಿ ಉದ್ಯಾನವನದಲ್ಲಿ ತೇಗ, ಹೊನ್ನೆ, ಬೀಟೆ ಸೇರಿದಂತೆ ಹಲವಾರು ಬೆಲೆಬಾಳುವ ಮರಗಳು ಬೆಳೆದು ನಿಂತಿವೆ. ಉದ್ಯಾನದಲ್ಲಿರುವ ಮರಗಳನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫ‌ಲರಾಗಿದ್ದಾರೆ. ಹಾಲಿ ಇರುವ ಮರಗಳ ರಕ್ಷಣೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಪರಿಣಾಮ ನಿರಂತರವಾಗಿ ಮರಗಳ ಲೂಟಿ ನಡೆಯುತ್ತಿರುವುದರಿಂದ ಉದ್ಯಾನ ಬೋಳಾಗುತ್ತಲೇ ಇದೆ.

ಗಿಡ-ಮರ ಬೆಳೆಸುವ ಆಸಕ್ತಿ ಇಲ್ಲ: ಹಿಂದೆಲ್ಲಾ ಇಂಡುವಾಳು ಪ್ರಕೃತಿ ಉದ್ಯಾನದಲ್ಲಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಿಡ-ಮರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಸುವುದನ್ನು ರೂಢಿಸಿಕೊಂಡಿದ್ದರು. ನರ್ಸರಿಯಿಂದ ಬೇವು, ಹೊನ್ನೆ, ಬೀಟೆ, ತೇಗ, ಹಲಸು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ನೆಟ್ಟು ಬೆಳೆಸುತ್ತಿದ್ದರು.

ಈಗ ಉದ್ಯಾನದ ಬಹುತೇಕ ಭಾಗ ಬೋಳು ಬೋಳಾಗಿದ್ದರೂ ಅಲ್ಲಿ ಯಾವುದೇ ಗಿಡ-ಮರಗಳನ್ನು ನೆಡುತ್ತಲೂ ಇಲ್ಲ, ಪ್ರಕೃತಿ ಉದ್ಯಾನವನ್ನು ಗಿಡ- ಮರಗಳಿಂದ ಕೂಡಿರುವಂತೆ ಮಾಡಿ ಸುಂದರ ಪರಿಸರ ವನ್ನು ಕಾಪಾಡುವತ್ತಲೂ ಆಸಕ್ತಿ ತೋರುತ್ತಿಲ್ಲ ಎನ್ನುವುದು ಮೊಳೆಕೊಪ್ಪಲು ಗ್ರಾಮದ ಪ್ರಕಾಶ್‌ ಹೇಳುವ ಮಾತು.

ನಮ್ಮ ತಂದೆಯವರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಸ್ವಲ್ಪ ಜಾಗವೂ ಬಿಡದಂತೆ ಗಿಡ-ಮರಗಳನ್ನು ನೆಟ್ಟು ಬೆಳೆಸಿದ್ದರು. ಅವರ ಕಾಲದ ಮರಗಳು ಇಂದು ಬೃಹದಾಕಾರವಾಗಿ ಬೆಳೆದು ನಿಂತಿವೆ. ರಜಾದಿನಗಳಲ್ಲಿ ಹೊರಗಿನಿಂದ ಮೋಜು-ಮಸ್ತಿಗೆಂದು ಇಲ್ಲಿಗೆ ಬರುವವರೂ ಇದ್ದಾರೆ. ಅವರೆಲ್ಲರೂ ಉತ್ತಮ ಜಾತಿಯ ಮರಗಳು ಎಲ್ಲೆಲ್ಲಿವೆ ಎಂದು ಗುರುತು ಮಾಡಿಕೊಳ್ಳುವುದಕ್ಕೂ ಅನುಕೂಲ ವಾಗಿದೆ. ಅದಕ್ಕಾಗಿ ಉದ್ಯಾನ ಪ್ರವೇಶಿಸುವವರನ್ನು ಮೊದಲು ನಿಷೇಧಿಸಬೇಕು ಎಂದು ಹೇಳುತ್ತಾರೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.