“ಆ ಯಮ್ಮಾ ಏನೂ ಮಾಡಲ್ಲ, ಕೆಲಸ ಇದ್ದರೆ ನನಗೆ ಹೇಳಿ”: ಸುಮಲತಾ ವಿರುದ್ಧ ಪ್ರತಾಪ್ ಸಿಂಹ ಟೀಕೆ
Team Udayavani, Nov 14, 2020, 2:54 PM IST
ಮಂಡ್ಯ: ಆ ಯಮ್ಮಾ ಏನೂ ಮಾಡಲ್ಲ. ಮಂಡ್ಯದ ಕೆಲಸ ಏನೇ ಇದ್ದರೂ ನನಗೆ ಹೇಳಿ ಎಂದು ಮಂಡ್ಯ ಸಂಸದೆ ಸುಮಲತಾ ಕಾರ್ಯವೈಖರಿ ಬಗ್ಗೆ ಕೊಡಗು-ಮೈಸೂರು ಸಂಸದ ಪ್ರತಾಪ ಸಿಂಹ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಗುರುವಾರ ಬೆಂಗಳೂರಿಗೆ ತೆರಳುವಾಗ ತಾಲ್ಲೂಕಿನ ಯಲಿಯೂರು ಗೇಟ್ ಸರ್ಕಲ್ ಬಳಿ ಸುತ್ತಮುತ್ತಲಿನ ಗ್ರಾಮಸ್ಥರು ಸಾರ್ವಜನಿಕರ ಅನುಕೂಲಕ್ಕಾಗಿ ಕೆಳಸೇತುವೆ ನಿರ್ಮಿಸುವಂತೆ ಸಂಸದ ಪ್ರತಾಪ ಸಿಂಹ ಅವರಿಗೆ ಮನವಿ ಮಾಡಿದ್ದಾರೆ.
ಆಗ ಹೆದ್ದಾರಿ ಯೋಜನಾ ನಿರ್ದೇಶಕರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿದ ಪ್ರತಾಪ್ ಸಿಂಹ ಸಂಸದೆ ಸುಮಲತಾ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.
ಮೊಬೈಲ್ ಸಂಭಾಷಣೆ ವಿವರ
‘ದೇವೇಗೌಡರ ಕುಟುಂಬವನ್ನು ಸೋಲಿಸುವ ಉದ್ದೇಶದಿಂದ ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ’ ಎಂದು ಫೋನ್ ನಲ್ಲಿ ಮಾತನಾಡಿದ್ದಾರೆ.
ಇದನ್ನೂ ಓದಿ:ಡಿಸಿಸಿ ಬ್ಯಾಂಕ್ ಗೆ ರಮೇಶ ಕತ್ತಿ ಅಧ್ಯಕ್ಷ, ಢವಳೇಶ್ವರ ಉಪಾಧ್ಯಕ್ಷ: ಅಧಿಕೃತ ಘೋಷಣೆ ಬಾಕಿ
ಪ್ರತಾಪ್ ಸಿಂಹ ಬೆಂಗಳೂರು- ಮೈಸೂರು ದಶಪಥ ಕಾಮಗಾರಿಯ ಯೋಜನಾಧಿಕಾರಿ ಜೊತೆ ಮಾತನಾಡಿದ್ದಾರೆ. ಸುಮಲತಾ ವಿರುದ್ಧ ಅಧಿಕಾರಿ ದೂರು ಹೇಳಿದಾಗ ಪ್ರತಾಪ್ ಸಿಂಹ, ಸುಮಲತಾ ವಿರುದ್ಧವೇ ಮಾತನಾಡಿದ್ದಾರೆ ಎಂದು ಸುಮಲತಾ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಸುಮಲತಾ ಪ್ರಶ್ನಿಸಿದ್ದರು. ಇದರ ಬಗ್ಗೆ ಯೋಜನಾಧಿಕಾರಿ ಪ್ರತಾಪ್ ಸಿಂಹ ಅವರಿಗೆ ದೂರು ನೀಡಿದಾಗ ಅವರು ನಮ್ಮ ಸಂಸದೆ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಪ್ರತಾಪ್ ಸಿಂಹ ಅವರು ತಮ್ಮ ಕ್ಷೇತ್ರದ ಸಮಸ್ಯೆ ನೋಡಿಕೊಳ್ಳಲಿ, ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಅವರು ಬಾರದಿರುವುದೇ ಒಳ್ಳೆಯದು ಎಂದು ಸುಮಲತಾ ಬೆಂಬಲಿಗರು ಕಿಡಿಕಾರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ