ಬಗೆಹರಿಯದ ನಗರಸಭೆ ಮೀಸಲಾತಿ ಗೊಂದಲ

2 ವರ್ಷವಾದರೂ ಸಳೀಯ ಜನಪ್ರತಿನಿಧಿಗಳಿಗಿಲ್ಲ ಅಧಿಕಾರ

Team Udayavani, Sep 4, 2020, 1:32 PM IST

ಬಗೆಹರಿಯದ ನಗರಸಭೆ ಮೀಸಲಾತಿ ಗೊಂದಲ

ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ನಡೆದು ಎರಡು ವರ್ಷ ಕಳೆಯುತ್ತಾ ಬಂದರೂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಗೊಂದಲದಿಂದ ಇನ್ನೂ ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಮರೀಚಿಕೆಯಾಗಿದೆ.

2018ರ ಆ.31ರಂದು ಚುನಾವಣೆ ನಡೆದು, ಸೆ.3ರಂದು ಫ‌ಲಿತಾಂಶ ಪ್ರಕಟವಾಗಿತ್ತು. ಒಟ್ಟು 35 ವಾರ್ಡ್‌ಗಳ ಪೈಕಿ ಜೆಡಿಎಸ್‌ ಪಕ್ಷ 18, ಕಾಂಗ್ರೆಸ್‌ 10, ಬಿಜೆಪಿ 2 ಹಾಗೂ ಪಕ್ಷೇತರ 5 ಮಂದಿ ಸದಸ್ಯರು ಚುನಾಯಿತರಾಗಿದ್ದರು. ಜೆಡಿಎಸ್‌ ಬಹುಮತ ಪಡೆಯುವ ಮೂಲಕ ಕಾಂಗ್ರೆಸ್‌ನಿಂದ ಅಧಿಕಾರಕಸಿದುಕೊಂಡಿದೆ. ಆದರೂ, ಇನ್ನೂ ಆಡಳಿತದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿಲ್ಲ.

ಕೋರ್ಟ್‌ ಮೆಟ್ಟಿಲು: ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಬಿ) ಮಹಿಳೆಗೆ ನಿಗದಿಪಡಿಸಿ ಸರ್ಕಾರ ಪ್ರಕಟಿಸಿತ್ತು. ಇದರ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಸಲ್ಲಿಸಿದ ಪರಿಣಾಮ ಗೊಂದಲ ಉಂಟಾಯಿತು. ನಂತರ ಹೈಕೋರ್ಟ್‌ ಸರ್ಕಾರದ ಮೀಸಲಾತಿ ಎತ್ತಿ ಹಿಡಿದಿತ್ತು. ಆದರೆ ,ಮತ್ತೆ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದ್ದು, ಇದು ವಿಚಾರಣೆ ಹಂತದಲ್ಲಿದೆ.

7 ವರ್ಷ ಸದಸ್ಯತ್ವ: ಸದಸ್ಯರಾಗಿ 2 ವರ್ಷಗಳು ಕಳೆದಿದೆ. ಮೊದಲ ಸಾಮಾನ್ಯ ಸಭೆ ನಡೆದ ದಿನದಿಂದ ಸದಸ್ಯರಿಗೆ ಅಧಿಕಾರ ಸಿಗಲಿದೆ. ಆದರೆ, ಇನ್ನೂ ಸಭೆ ನಡೆದಿಲ್ಲ. ಇದೇ ವರ್ಷ ಮೀಸಲಾತಿ ಗೊಂದಲ ಮುಗಿದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗಿ ಸಭೆ ನಡೆದರೆಮುಂದಿನ 5 ವರ್ಷ ಅಧಿಕಾರ ಸಿಗಲಿದೆ. ಈಗಾಗಲೇ 2 ವರ್ಷ ಮುಗಿದಿದೆ. ಇದರಿಂದ ಈಗಿನ ಸದಸ್ಯರು 7 ವರ್ಷ ಸದಸ್ಯರಾಗಲಿದ್ದಾರೆ.

ಅಧಿಕಾರಿಗಳದ್ದೇ ದರ್ಬಾರು: ಸದ್ಯ ನಗರಸಭೆ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಕಾಮಗಾರಿಗಳಿಗೆ ಅನುಮೋದನೆಗೆ ಜಿಲ್ಲಾಧಿಕಾರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೆ, ಇತರೆ ನಗರದ ಯೋಜನೆಗಳಿಗೆ ಆಡಳಿತ ಮಂಡಳಿ ಅನುಮೋದನೆ ಅಗತ್ಯವಾಗಿದ್ದು, ಇದರಿಂದ ನಗರದ ಅಭಿವೃದ್ಧಿಗೆ ಕುಂಠಿತವಾಗಿದೆ. ಅಲ್ಲದೆ, ನಗರಸಭೆಯಲ್ಲಿ ಅಧಿಕಾರಿಗಳ ದರ್ಬಾರ್‌ ಜೋರಾಗಿದ್ದು, ಸದಸ್ಯರ ಮಾತಿಗೆ ಕಿಮ್ಮತ್ತಿಲ್ಲದಂತಾಗಿದೆ. ಯಾವ ಕೆಲಸಗಳು ನಡೆಯುತ್ತಿಲ್ಲ ಎಂದು ನಗರಸಭೆ ಸದಸ್ಯರು ಆರೋಪಿಸಿದ್ದಾರೆ.

ಜನಪ್ರತಿನಿಧಿಗಳಿಗೆ ಶಾಪ: ನಗರದಲ್ಲಿ ಸಮಸ್ಯೆಗಳು ಸಾಕಷ್ಟಿವೆ. ಇದಕ್ಕಾಗಿ ಆಯಾ ವಾರ್ಡ್‌ಗಳ ಸದಸ್ಯರಿಗೆ ಸಾರ್ವಜನಿಕರು ಮನವಿ ಮಾಡುತ್ತಾರೆ. ನಾಯಿಗಳ ಕಾಟ ಹೆಚ್ಚಾಗಿದೆ. ಆದರೆ, ನಗರಸಭೆಯಲ್ಲಿ ಅಧಿಕಾರಿಗಳು ಸದಸ್ಯರ ಮಾತಿಗೆ ಮನ್ನಣೆ ನೀಡದ ಪರಿಣಾಮ ಯಾವ ಕೆಲಸಗಳು ಆಗುತ್ತಿಲ್ಲ. ಇದರ ವಾಸ್ತವ ಅರಿಯದ ಸಾರ್ವಜನಿಕರು ಸದಸ್ಯರಿಗೆ ಹಿಡಿಶಾಪ ಹಾಕುತ್ತಾರೆ ಎಂದು 17ನೇ ವಾರ್ಡ್‌ನ ಸದಸ್ಯೆ ಎಂ.ಬಿ.ಶಶಿಕಲಾಪ್ರಕಾಶ್‌ ಹೇಳುತ್ತಾರೆ.

ಚುರುಕುಗೊಳ್ಳದ ಕಾಮಗಾರಿ: ನಗರಕ್ಕೆ 24 ಗಂಟೆ ಕಾಲ ನೀರು ಸರಬರಾಜು ಮಾಡುವ ಅಮೃತ್‌ ಯೋಜನೆ ಕುಂಟುತ್ತಾ ಸಾಗಿದೆ. ಎಲ್ಲ ವಾರ್ಡ್‌ಗಳಲ್ಲೂ ಪೈಪ್‌ಲೈನ್‌ ಅಳವಡಿಸಲು ಕಾಮಗಾರಿಗಾಗಿ ರಸ್ತೆ ಅಗೆದಿದ್ದಾರೆ. ಇದರಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೆಡೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ ಎಂದು ನಗರದ ನಿವಾಸಿ ಕುಮಾರ್‌ ಅಳಲು. ಈ ಸಮಸ್ಯೆಗೆ ಪರಿಹಾರ ಏನು ಎಂಬುದು ಮತದಾರರ ಪ್ರಶ್ನೆ ಆಗಿದೆ.

ಸರ್ಕಾರದ ವೈಫ‌ಲ್ಯದಿಂದ ಸ್ಥಳೀಯ ಜನಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ. ನ್ಯಾಯಾಲಯ ಮತ್ತೂಮ್ಮೆ ಪರಿಶೀಲಿಸಿ ಎಂದು ಸರ್ಕಾರಕ್ಕೆ ಹೇಳಿದ್ದರೂ ಸರ್ಕಾರ ಇತ್ತ ಗಮನಹರಿಸುತ್ತಿಲ್ಲ. ಕೆಲವು ರಾಜಕೀಯ ಪ್ರಭಾವಿಗಳು ಇದನ್ನು ತಡೆ ಹಿಡಿದಿದ್ದಾರೆ. ಜಿಲ್ಲಾಧಿಕಾರಿಗಳು ಸಹ ಸದಸ್ಯರನ್ನು ಕರೆದು ಮಾತನಾಡಿಲ್ಲ. ಅಧಿಕಾರಿಗಳು ನಮ್ಮ ಮಾತಿಗೆ ಮನ್ನಣೆ ನೀಡುತ್ತಿಲ್ಲ. ಕೆಲವು ಸದಸ್ಯರ ಪರಿಸ್ಥಿತಿಯಂತೂ ಮೂರಾಬಟ್ಟೆಯಾಗಿದೆ. ಒಟ್ಟಾರೆ ಸದಸ್ಯರನ್ನು ಕೈಕಟ್ಟಿ ಕೂರುವಂತೆ ಮಾಡಿದ್ದಾರೆ.  ನಾಗೇಶ್‌, ಜೆಡಿಎಸ್‌ ಸದಸ್ಯ, 1ನೇ ವಾರ್ಡ್‌.

ಸರ್ಕಾರದಿಂದ ಬಂದಿರುವ ಅನುದಾನ ಬಳಸಲು ಸಾಧ್ಯವಾಗುತ್ತಿಲ್ಲ. ನಗರದ ಅಭಿವೃದ್ಧಿ ಕುಂಠಿತವಾಗಿದೆ. 50 ಕೋಟಿ ರೂ. ಅನುದಾನ ಬಂದಿದೆ. ಆದರೆ, ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಒಂದು ಬಾರಿಯೂ ಸಭೆ ನಡೆಸಿಲ್ಲ. ಅನುದಾನ ಬಳಸದಿದ್ದರೆ ವಾಪಸ್‌ ಹೋಗಲಿದೆ. ನಗರದ ಅಭಿವೃದ್ಧಿಗಳಿಗೆ ಸ್ಪಂದಿಸುತ್ತಿಲ್ಲ. ಸಾರ್ವಜನಿಕರಿಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ.   ಟಿ.ಕೆ.ರಾಮಲಿಂಗಯ್ಯ, ಕಾಂಗ್ರೆಸ್‌ ಸದಸ್ಯ, 27ನೇ ವಾರ್ಡ್‌

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.