ಮೈಷುಗರ್‌ ಯಂತ್ರಗಳ ಸಾಗಾಟ: ಆರೋಪ


Team Udayavani, Dec 22, 2021, 4:36 PM IST

MY SUGAR

ಮಂಡ್ಯ: ಮೈಷುಗರ್‌ ಕಾರ್ಖಾನೆಯ ಯಂತ್ರಗಳನ್ನು ಖಾಸಗಿ ಕಾರ್ಖಾನೆಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮಂಗಳವಾರ ಬೆಳಗ್ಗೆ ಮೈಷುಗರ್‌ ಕಾರ್ಖಾನೆಯ ಟರ್ಬನ್‌ ಯಂತ್ರವನ್ನು ಪಿಎಸ್‌ಎಸ್‌ಕೆ ಕಾರ್ಖಾನೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ತಡೆ ಹಿಡಿದಿದ್ದಾರೆ.

ಪಿಎಸ್‌ಎಸ್‌ಕೆ ಕಾರ್ಖಾನೆಗೆ ಸೇರಿದ ಜೀಪ್‌ವೊಂದು ಮೈಷುಗರ್‌ ಕಾರ್ಖಾನೆಯಲ್ಲಿದ್ದ ಟರ್ಬನ್‌ ಯಂತ್ರವನ್ನು ಕೊಂಡೊಯ್ಯಲು ಸಿದ್ಧತೆ ನಡೆಸಿತ್ತು. ಆಗ ತಕ್ಷಣ ಸ್ಥಳಕ್ಕೆ ಆಗಮಿಸಿದ ಕರವೇ ಜಿಲ್ಲಾಧ್ಯಕ್ಷ ಎಚ್‌.ಡಿ.ಜಯರಾಂ ಹಾಗೂ ಕಾರ್ಯಕರ್ತರು ವಾಹನವನ್ನು ತಡೆ ಹಿಡಿದು ಪ್ರತಿಭಟನೆ ನಡೆಸಿದರು.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪಿಎಸ್‌ಎಸ್‌ಕೆ ಕಾರ್ಖಾನೆಗೆ ಸೇರಿದ ವಾಹವನ್ನು ವಶಪಡಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. ಕರವೇ ಜೋಸೆಫ್‌, ಸೋಮಶೇಖರ್‌, ಚಿಕ್ಕೆçದೇಗೌಡ, ಮಲ್ಲಯ್ಯ ಇದ್ದರು.

ಪಿಎಸ್‌ಎಸ್‌ಕೆ ವಾಹನ ನೋಂದಣಿ ಜೀಪು

ಯಂತ್ರಗಳ ದಂಧೆ?: ಮೈಷುಗರ್‌ ಕಾರ್ಖಾನೆಯ ಲ್ಲಿರುವ ಉತ್ತಮ ಗುಣಮಟ್ಟದ ಯಂತ್ರಗಳನ್ನು ಬೇರೆ ಕಾರ್ಖಾನೆಗೆ ಸಾಗಿಸುವ ಮೂಲಕ ಮೈಷುಗರ್‌ ಕಾರ್ಖಾನೆಯನ್ನು ಮುಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ. ಕಾರ್ಖಾನೆಯಲ್ಲಿ ಉತ್ತಮ ಗುಣಮಟ್ಟದ ಯಂತ್ರಗಳಿದ್ದು, ತಕ್ಷಣ ಪ್ರಾರಂಭಿಸಿದರೂ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿವೆ.

ಆದರೆ, ಇಲ್ಲಿನ ಅಧಿಕಾರಿಗಳು ಹಾಗೂ ರಾಜಕೀಯ ಪ್ರಭಾವಿಗಳು ಕಾರ್ಖಾನೆಯನ್ನು ಮುಚ್ಚುವ ಉದ್ದೇಶದಿಂದ ಯಂತ್ರಗಳನ್ನು ಬೇರೆಡೆ ಸಾಗಿಸಿ, ಯಂತ್ರಗಳು ಇಲ್ಲ ಎಂಬ ವರದಿ ತೋರಿಸುವ ಹಿನ್ನೆಲೆಯಲ್ಲಿ ಈ ರೀತಿಯ ದಂಧೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

“ಮೈಷುಗರ್‌ ಕಾರ್ಖಾನೆ ಯಂತ್ರಗಳನ್ನು ಬೇರೆ ಖಾಸಗಿ ಕಾರ್ಖಾನೆಗಳಿಗೆ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ, ಪಿಎಸ್‌ಎಸ್‌ಕೆ ಕಾರ್ಖಾನೆಗೆ ಸೇರಿದ ಜೀಪ್‌ವೊಂದು ಕಾರ್ಖಾನೆಯ ಟರ್ಬನ್‌ ಯಂತ್ರ ಕೊಂಡೊಯ್ಯಲು ಸಿದ್ಧತೆ ನಡೆಸಿತ್ತು. ಆಗ ನಾವು ಅದನ್ನು ತಡೆದಾಗ, ಪಿಎಸ್‌ಎಸ್‌ಕೆ ಸಿಬ್ಬಂದಿ ನಮಗೆ ಸರ್ಕಾರವೇ ಅನುಮತಿ ನೀಡಿದೆ ಎಂದು ತಿಳಿಸಿದರು. ಆಗ ನಾವು ಬಿಡದೆ ಪೊಲೀಸರಿಗೆ ಒಪ್ಪಿಸಿದ್ದೇವೆ.” ಎಚ್‌.ಡಿ.ಜಯರಾಂ, ಜಿಲ್ಲಾಧ್ಯಕ್ಷ, ಕರವೇ

“ನನ್ನ ಗಮನಕ್ಕೆ ಬಾರದೇ ಯಂತ್ರ ಕೊಂಡೊಯ್ಯಲು ಪ್ರಯತ್ನ ನಡೆದಿತ್ತು. ಆಗ ನಾನು ಅದನ್ನು ತಡೆದು ಖಾಸಗಿ ಕಾರ್ಖಾನೆ ವಾಹನ ಒಳ ಪ್ರವೇಶಿಸಲು ಅನುವು ಮಾಡಿಕೊಟ್ಟ ಇಬ್ಬರು ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಖಾನೆ ಆರಂಭಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ.” ಶಿವಲಿಂಗೇಗೌಡ, ಅಧ್ಯಕ್ಷ, ಮೈಷುಗರ್‌ ಕಾರ್ಖಾನೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.