ಮೈಷುಗರ್ ಆಸ್ತಿ ರಕ್ಷಣೆಗೆ ಮುಂದಾಗಲಿ
Team Udayavani, Jul 7, 2021, 7:51 PM IST
ಮಂಡ್ಯ: ವಿವಿಧ ಸಂಘಟನೆಗಳುಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ಸರ್ಕಾರ ಮೈಷುಗರ್ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವ ಮುಖ್ಯಮಂತ್ರಿಗಳ ನಿಲುವಿಗೆ ಜಿಲ್ಲೆಯ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿಸುನಂದ ಜಯರಾಂ ತಿಳಿಸಿದರು.
ಇದಕ್ಕೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ ಹಾಗೂ ಆನೇಕಸಂಘಟನೆಗಳ ಮುಖಂಡರಿಗೂ ಧನ್ಯವಾದ ಅರ್ಪಿಸುತ್ತೇವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿಶೀಘ್ರದಲ್ಲೇ ಕಾರ್ಖಾನೆ ಆರಂಭಕ್ಕೆಆದ್ಯತೆ ನೀಡಬೇಕು ಹಾಗೂ ಕಾರ್ಖಾನೆಯ 1,750 ಕೋಟಿ ರೂ. ಮೌಲ್ಯದಆಸ್ತಿ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಮೈಷುಗರ್ ಕಾರ್ಖಾನೆಉಳಿವಿಗಾಗಿ ಜು.9ರಿಂದ ನಿರಂತರಧರಣಿ ನಡೆಸಲು ಪ್ರಗತಿಪರ ಸಂಘಟನೆಗಳು ತೀರ್ಮಾನಿಸಿದ್ದ ಧರಣಿಯನ್ನುಮುಖ್ಯಮಂತ್ರಿಗಳ ಹೇಳಿಕೆಯಿಂದತಾತ್ಕಾಲಿಕವಾಗಿ ಹಿಂಪಡೆಯಲಾಗಿದೆಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡಮಾತನಾಡಿ,ಮೈಷುಗರ್ಉಳಿವಿಗಾಗಿ ಜಿಲ್ಲೆಯಲ್ಲಿ ನಡೆದಹೋರಾಟದಲ್ಲಿ ಪ್ರಥಮ ಹಂತದಯಶಸ್ಸು ಗಳಿಸಲಾಗಿದೆ ಎಂದರು.
ಸಂಸದರ ನಯವಾದ ಮಾತು ಸರಿಯಲ್ಲ: ಜಿಲ್ಲೆ ಹಾಗೂ ರಾಜ್ಯದ ಜೀವನಾಡಿಯಾಗಿರುವ ಕನ್ನಂಬಾಡಿ ಆಣೆಕಟ್ಟೆಬಗ್ಗೆ ಪದೇ ಪದೆ ಬಿರುಕಿನ ಮಾತನಾಡಿ,ಮೈಷುಗರ್ ವಿಚಾರವನ್ನು ಬದಿಗೆಸರಿಸುವ ಸಂಸದೆ ಸುಮಲತಾ ಅವರನಯವಾದ ಮಾತು ಸರಿಯಲ್ಲ ಎಂದುರೈತ ನಾಯಕಿ ಸುನಂದ ಜಯರಾಂಅತೃಪ್ತಿ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಮುಖಂಡರಾದಬಿ.ಟಿ.ವಿಶ್ವನಾಥ್, ಸಿ.ಕುಮಾರಿ,ಶಂಭೂನಹಳ್ಳಿ ಕೃಷ್ಣ, ಬೋರಾಪುರಶಂಕರೇಗೌಡ, ಎಂ.ಬಿ.ಶ್ರೀನಿವಾಸ್, ಪಣಕನಹಳ್ಳಿ ನಾಗಣ್ಣ, ದೇವಿ, ತುಳಸೀಧರ್ಹಾಗೂ ವೇಣುಗೋಪಾಲ್ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ