ನಾವು ವಿಆರ್‌ಎಸ್‌ಗೆ ಸಹಿ ಹಾಕಲ್ಲ

ಸಹಿ ಹಾಕುವಂತೆ ಅಧಿಕಾರಿಗಳಿಂದ ಒತ್ತಡ

Team Udayavani, Nov 3, 2020, 4:41 PM IST

ನಾವು ವಿಆರ್‌ಎಸ್‌ಗೆ ಸಹಿ ಹಾಕಲ್ಲ

ಮಂಡ್ಯ: ಮೈಷುಗರ್‌ ಕಾರ್ಖಾನೆಯಲ್ಲಿ ಕೆಲಸನಿರ್ವಹಿಸುತ್ತಿರುವ ನೌಕರರಿಗೆ ವಿಆರ್‌ಎಸ್‌ಗೆ ಸಹಿ ಹಾಕುವಂತೆ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 144 ಮಂದಿ ನೌಕರರು ಈಗಾಗಲೇ ಸ್ವಯಂನಿವೃತ್ತಿ ಪಡೆದಿದ್ದಾರೆ. ಇನ್ನುಳಿದ 116 ಮಂದಿನೌಕರರು ಇನ್ನೂ ಕೆಲಸ ಮಾಡುವಸಾಮರ್ಥ್ಯವಿದೆ. ಈಗ ಅಧಿಕಾರಿಗಳ ಒತ್ತಡಕ್ಕೆವಿಆರ್‌ಎಸ್‌ ತೆಗೆದುಕೊಂಡರೆ ಮುಂದೆ ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

23 ಕೋಟಿ ರೂ. ಬಿಡುಗಡೆ: ವಿಆರ್‌ಎಸ್‌ಗಾಗಿ ಸರ್ಕಾರದಿಂದ 23 ಕೋಟಿ ರೂ. ಬಿಡು ಗಡೆಯಾಗಿದ್ದು, ನೌಕರರ ಕೆಲಸ ನಿರ್ವಹಿಸಿದ ವರ್ಷಗಳ ಆಧಾರದ ಮೇಲೆ ಸ್ವಯಂ ನಿವೃತ್ತಿ ನೀಡಲಾಗುತ್ತಿದೆ. ಈ ನಿವೃತ್ತಿ ಸೌಲಭ್ಯದ ಹಣಕಡಿಮೆ ಸಿಗುವುದರಿಂದ ಮುಂದಿನ ಜೀವನ ಕಷ್ಟವಾಗಲಿದೆ. ಉದ್ಯೋಗವಿಲ್ಲದೆ ಪರಿತಪಿಸ ಬೇಕಾಗುತ್ತದೆ. ಬಂದಿರುವ ಹಣವನ್ನು ಸರ್ಕಾರಕ್ಕೆ ವಾಪಸ್‌ ಕಳುಹಿಸಲು ಸಾಧ್ಯವಾಗದ ಹಿನ್ನೆಲೆ ಹಾಗೂ ಕಾರ್ಖಾನೆಯನ್ನು ಗುತ್ತಿಗೆ ನೀಡುತ್ತಿರುವುದರಿಂದ ಅಧಿಕಾರಿಗಳು ವಿಆರ್‌ಎಸ್‌ಗೆ ಸಹಿ ಹಾಕುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ನೌಕರರೊಬ್ಬರು ತಿಳಿಸಿದರು.

ವೇತನವೂ ವಿಳಂಬ: ಕಾರ್ಖಾನೆ ಗುತ್ತಿಗೆ ನೀಡಲು ಎಲ್ಲಾ ರೀತಿಯ ಯೋಜನೆ ಸಿದ್ಧವಾಗುತ್ತಿದೆ. ಇದರಿಂದ ಕೆಲಸ ಮಾಡುತ್ತಿರುವ ನೌಕರರಿಗೆ ವಿಆರ್‌ಎಸ್‌ ಕೊಡಲು ಮುಂದಾಗಿದೆ. ವಿಆರ್‌ಎಸ್‌ ಪಡೆಯದ ನೌಕರರಿಗೆ ವೇತನ ವಿಳಂಬ ಮಾಡುವ ಮೂಲಕ ತೊಂದರೆ ನೀಡಲಾಗುತ್ತಿದೆ. ವಿಆರ್‌ಎಸ್‌ ಪಡೆದುಕೊಂಡರೆ ವೇತನ ಪಾವತಿಸ ಲಾಗುವುದು ಎಂದು ಹೇಳುತ್ತಾರೆಂದು ನೌಕರರು ಆರೋಪಿಸಿದ್ದಾರೆ.

ಅಧಿಕಾರಿಗಳಿಂದ ನೌಕರರಿಗೆ ಬೆದರಿಕೆ ತಂತ್ರ :  ವಿಆರ್‌ಎಸ್‌ ಪಡೆಯದ ನೌಕರರಲ್ಲಿ ಈಗಾಗಲೇ 35 ಮಂದಿಯನ್ನು ಭದ್ರತೆಗೆ ನಿಯೋಜಿಸಿಕೊಳ್ಳಲಾಗಿದೆ. ಸ್ವಯಂ ನಿವೃತ್ತಿಗೆ ಸಹಿ ಹಾಕದಿದ್ದರೆ ಬೆಂಗಳೂರಿನ ಪ್ರಧಾನ ಕಚೇರಿ ಸೇರಿದಂತೆ ಕಾರ್ಖಾನೆಯ ವಿವಿಧ ವಿಭಾಗಗಳಿಗೆ ನಿಯೋಜಿಸಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ. ಕಾರ್ಖಾನೆಯ ಯಾವ ವಿಭಾಗಕ್ಕೂ ಹಾಕಿದರೂ ನಾವು ಕೆಲಸ ಮಾಡಲು ಸಿದ್ಧರಿದ್ದೇವೆ. ಆದರೆ ವಿಆರ್‌ಎಸ್‌ಗೆ ಸಹಿ ಹಾಕಿಸಿಕೊಳ್ಳಲು ಇನ್ನಿಲ್ಲದ ತೊಂದರೆ ನೀಡುತ್ತಿದ್ದಾರೆ ಎಂದು ಹೆಸರೇಳದ ನೌಕರರೊಬ್ಬರು ಅಳಲು ತೋಡಿಕೊಂಡರು.

ಬೇರೆ ನಿಗಮಗಳಿಗೆ ವಿಲೀನಗೊಳಿಸಿ :  ಕಾರ್ಖಾನೆಯಲ್ಲಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ನಾನು ಇನ್ನೂ ಕೆಲಸ ಮಾಡಲು ಸಶಕ್ತನಾಗಿದ್ದೇನೆ. ಆದರೆ, ಅಧಿಕಾರಿಗಳು ವಿಆರ್‌ಎಸ್‌ಗೆ ಸಹಿ ಹಾಕುವಂತೆ ಒತ್ತಡ ಹಾಕುತ್ತಿದ್ದಾರೆ. ಈಗಾಗಲೇ ಸರಿಯಾಗಿ ವೇತನವಿಲ್ಲದೆ ಸಾಲ ಮಾಡಿಕೊಂಡಿರುವ ನಾನು. ವಿಆರ್‌ಎಸ್‌ನಿಂದ ಬರುವ ಹಣ ಸಾಲ ತೀರಿಸಬೇಕಾಗಿದೆ. ಇದರಿಂದ ಜೀವನಕ್ಕೆ ಏನೂ ಉಳಿಯುವು ಲ್ಲ. ಅಲ್ಲದೆ, ಉದ್ಯೋಗವಿಲ್ಲದೆ ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಸರ್ಕಾರ ನಮ್ಮನ್ನು ಬೇರೆ ನಿಗಮ ಮಂಡ ಳಿಗಳಿಗೆ ವಿಲೀನಗೊಳಿಸಿದರೆ ಅನುಕೂಲವಾ ಗಲಿದೆ ಎಂದು ಹೆಸರು ಹೇಳದ ನೌಕರ ಮನವಿ ಮಾಡಿದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.