ನಾಗಮಂಗಲದಲ್ಲಿ ಪ್ರಾಬಲ್ಯ ಹೆಚ್ಚಳಕ್ಕೆ ದಳಪತಿಗಳ ಪ್ಲ್ಯಾನ್‌


Team Udayavani, Mar 1, 2022, 1:21 PM IST

Untitled-1

ಮಂಡ್ಯ: ಜಿಲ್ಲೆಯಲ್ಲಿ ಹೆಚ್ಚು ಜೆಡಿಎಸ್‌ ಪ್ರಾಬಲ್ಯ ಹೊಂದಿರುವ ನಾಗಮಂಗಲ ವಿಧಾನಸಭಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಮೂಲಕ ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಕಟ್ಟಿ ಹಾಕಲು ದಳಪತಿಗಳು ಪ್ಲ್ಯಾನ್‌ ರೆಡಿ ಮಾಡುತ್ತಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿಮೈತ್ರಿ ಅಭ್ಯರ್ಥಿ ಯಾಗಿದ್ದ ನಿಖೀಲ್‌ಗೆ ಇಡೀ ಜಿಲ್ಲೆಯನಾಗಮಂಗಲದಲ್ಲಿ ಮುನ್ನಡೆ ತಂದು ಕೊಟ್ಟಿತ್ತು. ಅದೇಹಿನ್ನೆಲೆ 2023ರ ವಿಧಾನಸಭಾ ಚುನಾ ವಣೆ ಯಲ್ಲೂ ಕ್ಷೇತ್ರ ಕೈ ತಪ್ಪದಂತೆ ನೋಡಿಕೊಳ್ಳಲು ದಳಪತಿಗಳು ಸಜ್ಜಾಗಿದ್ದಾರೆ.

ಎಚ್‌ಡಿಡಿ ಪ್ರಾಬಲ್ಯ: ನಾಗಮಂಗಲದಲ್ಲಿ ಅತಿ ಹೆಚ್ಚು ಒಕ್ಕಲಿಗರಿ ರುವ ಕ್ಷೇತ್ರವಾಗಿರುವುದರಿಂದ ಮಾಜಿಪ್ರಧಾನಿ ಎಚ್‌.ಡಿ.ದೇವೇ ಗೌಡರ ಪ್ರಾಬಲ್ಯ ಹೆಚ್ಚಿದೆ.ದೇವೇಗೌಡರ ಹಿಡಿತ ಇರುವುದರಿಂದ ಜೆಡಿಎಸ್‌ಅಭ್ಯರ್ಥಿಗಳು ಸುಲಭವಾಗಿ ಗೆಲ್ಲಲಿದ್ದಾರೆ ಎಂಬಮಾತು ಕೇಳಿ ಬರುತ್ತಿವೆ. ದೇವೇಗೌಡರು ತನ್ನದೇ ಆದವೋಟ್‌ ಬ್ಯಾಂಕ್‌ ಹೊಂದಿದ್ದು, ಅಭ್ಯರ್ಥಿಗಳಿಗೆಸಹಕಾರಿಯಾಗಲಿದೆ ಎನ್ನಲಾಗುತ್ತಿದೆ. ಅದಕ್ಕಾಗಿ ಎಚ್‌.ಡಿ.ದೇವೇಗೌಡರು ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದಾರೆ.

ಚಲುವರಾಯಸ್ವಾಮಿ ಆ್ಯಕ್ಟಿವ್‌: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚಲುವರಾಯ ಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದು,ಅದಕ್ಕಾಗಿ ಕ್ಷೇತ್ರದಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಓಡಾಡುತ್ತಿದ್ದಾರೆ. ಕಳೆದ ಬಾರಿ ಸೋತ ಹಿನ್ನೆಲೆಯಲ್ಲಿ ದಳ ಪತಿಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಅದಕ್ಕಾಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಲುಮುಂದಾಗಿದ್ದಾರೆ. ಇದಕ್ಕೆ ಟಕ್ಕರ್‌ ನೀಡಲು ದಳಪತಿಗಳು ಕ್ಷೇತ್ರಕ್ಕೆ ಲಗ್ಗೆ ಇಡುತ್ತಿದ್ದಾರೆ.

ಸುರೇಶ್‌ಗೌಡಗೆ ಟಿಕೆಟ್‌?: ಜೆಡಿಎಸ್‌ ಟಿಕೆಟ್‌ಗಾಗಿ ಹಾಲಿ ಶಾಸಕ ಕೆ.ಸುರೇಶ್‌ಗೌಡ, ಮಾಜಿ ಸಂಸದ ಎಲ್‌. ಆರ್‌.ಶಿವರಾಮೇಗೌಡ ನಡುವೆ ಪೈಪೋಟಿ ನಡೆಯುತ್ತಿತ್ತು. ನಂತರ ಎಲ್‌.ಆರ್‌.ಶಿವರಾಮೇ ಗೌಡರನ್ನುಪಕ್ಷದಿಂದ ಉಚ್ಛಾಟನೆ ಮಾಡಿದ್ದರಿಂದ ಸುರೇಶ್‌ಗೌಡರಿಗೆ ದಾರಿ ಸುಗಮವಾಗಿದೆ. ಮುಂದಿನ ಚುನಾವಣೆಯಲ್ಲಿ ಸುರೇಶ್‌ಗೌಡರಿಗೆ ಟಿಕೆಟ್‌ ನೀಡು ವುದು ಬಹುತೇಕ ನಿಚ್ಚಳವಾಗಿದೆ ಎನ್ನಲಾಗುತ್ತಿದೆ. ಅಲ್ಲದೆ, ಮತ್ತೂಬ್ಬ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂಮನ್‌ಮುಲ್‌ ನಿರ್ದೇ ಶಕ ನೆಲ್ಲಿಗೆರೆ ಬಾಲು ಕೂಡ ರೇಸ್‌ನಲ್ಲಿರುವುದರಿಂದ ಮಾತುಕತೆ ಮೂಲಕ ಬಗೆಹರಿಸುವ ಸಾಧ್ಯತೆ ಇದೆ.

ಚಲುವರಾಯಸ್ವಾಮಿ ಕ್ಷೇತ್ರ ಬದಲಿಸುತ್ತಾರಾ? :

ನಾಗಮಂಗಲದಲ್ಲಿ ದಳಪತಿಗಳು ಹೆಣೆಯುತ್ತಿರುವ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿಮುಂದಾಗಿದ್ದಾರೆ. ಒಕ್ಕಲಿಗರ ಭದ್ರಕೋಟೆಯಾಗಿರುವ ನಾಗಮಂಗಲದಲ್ಲಿ ದೇವೇಗೌಡರ ಪ್ರಭಾವ ಹೆಚ್ಚಾಗಿರುವುದರಿಂದ ಚಲುವರಾಯಸ್ವಾಮಿಗೆ ಕ್ಷೇತ್ರ ಕಗ್ಗಂಟಾಗಲಿದೆಎಂಬ ಮಾತು ಕೇಳಿ ಬರುತ್ತಿವೆ. ಇದರಿಂದಚಲುವರಾಯಸ್ವಾಮಿ ಕ್ಷೇತ್ರ ಬದಲಿಸಬಹುದು ಎಂಬ ಚರ್ಚೆ ನಡೆಯುತ್ತಿವೆ.

ಎಚ್‌ಡಿಡಿ, ಎಚ್‌ಡಿಕೆ ನಿರಂತರ ಕ್ಷೇತ್ರ ಭೇಟಿ :  ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ 7ತಾಲೂಕುಗಳಲ್ಲಿ ಸಂಸದೆ ಸುಮಲತಾಅಂಬರೀಷ್‌ಗೆ ಮುನ್ನಡೆ ಇತ್ತು. ಆದರೆ, ನಾಗಮಂಗಲಕ್ಷೇತ್ರದಲ್ಲಿ ನಿಖೀಲ್‌ಕುಮಾರಸ್ವಾಮಿಗೆ 2 ಸಾವಿರ ಮತಗಳ ಮುನ್ನಡೆ ತಂದುಕೊಟ್ಟಿತ್ತು. ಇದರಿಂದ ಕ್ಷೇತ್ರವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೈತಪ್ಪದಂತೆ ನೋಡಿಕೊಳ್ಳಲು ದಳಪತಿಗಳು ಮುಂದಾಗುತ್ತಿದ್ದಾರೆ. ಅದಕ್ಕಾಗಿ ಕ್ಷೇತ್ರಕ್ಕೆ ನಿರಂತರವಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

 

ಎಚ್‌.ಶಿವರಾಜು

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.