ಪಠ್ಯಪುಸ್ತಕ ಪರಿಷ್ಕರಣೆ ಅವೈಜ್ಞಾನಿಕ: ನಾಗತೀಹಳ್ಳಿ
Team Udayavani, May 29, 2022, 1:37 PM IST
ಮಂಡ್ಯ: ಪಠ್ಯಪುಸ್ತಕ ಪರಿಷ್ಕರಣೆ ಕಾಲ ಕಾಲಕ್ಕೆ ಬದಲಾವಣೆ ಅಗತ್ಯ. ಇಲ್ಲದಿದ್ದರೆ ಅದು ಅವೈಜ್ಞಾನಿಕ ವಾಗುತ್ತದೆ. ಆದರೆ, ಈಗ ನಡೆಸಿರುವ ಪಠ್ಯಪುಸ್ತಕ ಪರಿಷ್ಕರಣೆ ಕ್ರಮ ಸರಿಯಾಗಿಲ್ಲ. ಸಂಪೂರ್ಣ ಅವೈಜ್ಞಾನಿಕ ಹಾಗೂ ಅಕಾಲಿಕವಾಗಿದೆ ಎಂದು ಸಾಹಿತಿ ನಾಗತೀಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು.
“ಉದಯವಾಣಿ’ಯೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ತಮ್ಮ ಪಕ್ಷದ ತತ್ವ-ಸಿದ್ಧಾಂತ ಏನೇ ಇರಲಿ. ಅವುಗಳನ್ನು ನಿಮ್ಮ ಕಚೇರಿಯೊಳಗಿಟ್ಟುಕೊಳ್ಳಬೇಕು. ವಿದ್ಯಾರ್ಥಿಗಳ ಮೇಲೆಹೇರುವ ಪ್ರಯತ್ನ ಮಾಡಬಾರದು. ಸರ್ವ ಜನಗಳಿಗೆಬೇಕಾಗುವ , ಎಲ್ಲರ ಹಿತ ಕಾಪಾಡುವ ತತ್ವಗಳನ್ನು ಪಠ್ಯದಲ್ಲಿ ಅಳವಡಿಸುವ ವಿಶಾಲ ಮನೋಭಾವ ಇದ್ದಾಗ ಇಂತಹ ತಪ್ಪುಗಳಾಗುವುದಿಲ್ಲ ಎಂದರು.
ನಾನು ಯಾವ ಪಕ್ಷದ ಪರ ಮಾತನಾಡುತ್ತಿಲ್ಲ. ಮಕ್ಕಳ ಪರ ಇದ್ದೇನೆ. ಎಲ್ಲ ಪಕ್ಷಗಳಸರ್ಕಾರ ಇದ್ದಾಗಲೂ ಅವರ ವಿರುದ್ಧವೂ ಮಾತನಾಡಿದ್ದೇನೆ.ನಾನೊಬ್ಬ ಶಿಕ್ಷಕನಾಗಿ ಮಾತನಾಡುತ್ತಿದ್ದೇನೆ. ಯಾರನ್ನೋ ಮೆಚ್ಚಿಸುವ ಕೆಲಸ ಮಾಡುವವರನ್ನು ಸಮಿತಿಗೆ ನೇಮಿಸಬಾರದು ಎಂದು ಹೇಳಿದರು.
ಈಗಿನ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿರುವ ಕ್ರಮ ಸರಿಯಲ್ಲ. ಪಠ್ಯಪುಸ್ತಕಪರಿಷ್ಕರಣೆ ವಿಧಾನವೂ ಸರಿಯಾಗಿಲ್ಲ. ಸರಿಯಾದಕಾಲದಲ್ಲೂ ಪರಿಷ್ಕರಣೆ ನಡೆಯುತ್ತಿಲ್ಲ. ಇದು ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಬಹಳ ಅಪಾಯಕಾರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ