ಮಂಡ್ಯದಲ್ಲಿ ರಾಜ್ಯದ ಮೊದಲ ಆಕ್ಸಿಜನ್ ಪ್ಲಾಂಟ್ ನಿರ್ಮಾಣ : ಸಚಿವ ನಾರಾಯಣ ಗೌಡ
Team Udayavani, May 12, 2021, 7:14 PM IST
ಮಂಡ್ಯ: ರಾಜ್ಯದಲ್ಲಿಯೇ ಮೊದಲ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಶಾಸಕರಾದ ಎಂ.ಶ್ರೀನಿವಾಸ್, ಕೆ.ಟಿ.ಶ್ರೀಕಂಠೇಗೌಡ ಅವರು ಚಾಲನೆ ನೀಡಿದರು.
ನಗರದ ಮಿಮ್ಸ್ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತಿದ್ದು, ರಾಜ್ಯದಲ್ಲಿಯೇ ಮೊದಲ ಪ್ಲಾಂಟ್ ಇದಾಗಿದ್ದು, ಗುದ್ದಲಿ ಪೂಜೆ ನೆರವೇರಿಸಲಾಯಿತು.
ಮೊಟ್ಟ ಮೊದಲ ಆಕ್ಸಿಜನ್ ಪ್ಲಾಂಟ್:
ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಂಡ್ಯದಲ್ಲಿ ಆಕ್ಸಿಜನ್ ಪ್ಲಾಂಟ್ಗೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಸರ್ಕಾರ ಮಂಡ್ಯ ಹಾಗೂ ಮಳವಳ್ಳಿಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಅವಕಾಶ ನೀಡಿದೆ ಎಂದರು.
ಎಲ್ಲ ತಾಲೂಕಿನಲ್ಲೂ ಪ್ಲಾಂಟ್:
ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣವಾಗಬೇಕು. ಆಕ್ಸಿಜನ್ ಸಮಸ್ಯೆಗಳ ಸರಿದೂಗಿಸಬೇಕು. ಆಕ್ಸಿಜನ್ ಬೆಡ್ ಸಮಸ್ಯೆ ಉಂಟಾದಲ್ಲಿ ಬಸ್ನಲ್ಲಿ ೬ರಿಂದ ೮ ಜನಕ್ಕೆ ಆಕ್ಸಿಜನ್ ಕೊಡುವ ಹೊಸ ಪ್ಲಾನ್ ಮಾಡಲಾಗುತ್ತಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಯಾರೂ ಸೋಂಕಿಗೆ ಒಳಗಾಗಿ ತುರ್ತು ಪರಿಸ್ಥಿತಿ ಇರುತ್ತದೆಯೋ ಅಂಥ ಸೋಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಉದ್ದೇಶವಿದೆ. ಇದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಮಾತನಾಡಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ :ಕೊರೊನಾ ಕರ್ಫ್ಯೂ: ಎರಡನೇ ದಿನ ಕಟ್ಟುನಿಟ್ಟಿನ ಅನುಷ್ಠಾನ
ನಿಯಮ ಪಾಲನೆ ಮಾಡಿ:
ಶೀಘ್ರವಾಗಿ ಈ ಯೋಜನೆ ಜಾರಿಗೆ ಬರುತ್ತದೆ. ನಮ್ಮಲ್ಲಿ ಆಕ್ಸಿಜನ್ ಪ್ಲಾಂಟ್ ಇರಲಿಲ್ಲ. ಬೇರೆ ಕಡೆಯಿಂದ ಆಕ್ಸಿಜನ್ ತರಿಸಬೇಕಾದ ಸಂಕಷ್ಟ ಇತ್ತು. ದಾನಿಗಳು ಸಹ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದನ್ನು ಉಪಯೋಗಿಸಿಕೊಂಡು ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುವುದು. ಎಲ್ಲರೂ ಸಹ ಕಡ್ಡಾಯವಾಗಿ ಕೊರೊನಾ ನಿಯಮ ಪಾಲನೆ ಮಾಡಿ ಎಂದು ಮನವಿ ಮಾಡಿ ಎಂದು ಸಚಿವರು ತಿಳಿಸಿದರು.
ಚಾಮರಾಜನಗರ ದುರಂತ ಆಗಬಾರದು:
ಶಾಸಕ ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗಿದೆ. ಆಕ್ಸಿಜನ್ ಕೊರತೆ ಇದೆ. ಮುಖ್ಯಮಂತ್ರಿಗಳು ಆಕ್ಸಿಜನ್ ಪ್ಲಾಂಟ್ ಮಂಜೂರು ಮಾಡುವ ಮೂಲಕ ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಕಳೆದ ರಾತ್ರಿ 10.30ರಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಇದರಿಂದ ನನಗೂ ನಿದ್ರೆ ಬಂದಿರಲಿಲ್ಲ. 10.30ರಲ್ಲಿ ಬೇರೆ ಕಡೆಯಿಂದ ಆಕ್ಸಿಜನ್ ಬರದಿದ್ದರೆ ಚಾಮರಾಜನಗರ ದುರಂತ ಮಂಡ್ಯದಲ್ಲೂ ಸಂಭವಿಸುವ ಸಾಧ್ಯತೆ ಇತ್ತು. ಆದ್ದರಿಂದ ಆಕ್ಸಿಜನ್ ಅಗತ್ಯವಿರುವ ಸೋಂಕಿತರಿಗೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹಿಂದೆಯೇ ಆಗಬೇಕಿತ್ತು. ಆದರೆ ಆಗಿರಲಿಲ್ಲ. ಆದರೂ ಸಾರ್ವಜನಿಕರು ಶಾಂತ ರೀತಿಯಿಂದ ಕೊರೊನಾ ನಿಯಮಗಳನ್ನು ಪಾಲಿಸುವ ಮೂಲಕ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಮಿಮ್ಸ್ ನಿರ್ದೇಶಕ ಡಾ.ಎಂ.ಆರ್.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್ ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ