ನರೇಗಾದಡಿ ಉದ್ಯೋಗ ನೀಡಿ ವಲಸೆ ತಪ್ಪಿಸಿ


Team Udayavani, Jan 26, 2019, 9:45 AM IST

krishna.jpg

ಮೈಸೂರು: ಬೇಸಿಗೆ ತೀವ್ರವಾದಂತೆ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳ ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಜಾಗೃತೆವಹಿಸಿ, ಎರಡೂ ಜಿಲ್ಲೆಗಳಲ್ಲಿ ನರೇಗಾ ಕಾರ್ಯಕ್ರಮದಲ್ಲಿ ಹೆಚ್ಚು ಅನುದಾನ ಬಳಸಿಕೊಂಡು ಜನರಿಗೆ ಉದ್ಯೋಗ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಮೈಸೂರು ಜಿಪಂ ಸಭಾಂಗಣದಲ್ಲಿ ಶುಕ್ರವಾರ ಎರಡೂ ಜಿಲ್ಲೆಗಳ ಬರ ಪರಿಸ್ಥಿತಿ ಕುರಿತು ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ಸದ್ಯಕ್ಕೆ ಬರ ಮತ್ತು ಕುಡಿಯುವ ನೀರಿಗೆ ಅಂತಹ ಸಮಸ್ಯೆ ಇಲ್ಲ. ಆದರೆ, ನರೇಗಾ ಕಾರ್ಯಕ್ರಮದಲ್ಲಿ ಎರಡೂ ಜಿಲ್ಲೆಗಳಲ್ಲಿ ಮಾನವ ದಿನಗಳ ಸೃಜನೆ ತೃಪ್ತಿಕರವಾಗಿಲ್ಲ. ಹೆಚ್ಚು ಹಣ ಬಳಸಿಕೊಳ್ಳುವ ಅವಕಾಶವಿದೆ. ಇದರ ಸದುಪಯೋಗಪಡೆದುಕೊಂಡು ಬಡಜನರಿಗೆ ಉದ್ಯೋಗ ಒದಗಿಸಿಕೊಡಿ ಎಂದು ಸೂಚಿಸಿದರು.

50 ಲಕ್ಷ ರೂ.ಬಿಡುಗಡೆ: ಹಿಂಗಾರು ಹಂಗಾಮಿನಲ್ಲಿ ಬರ ಘೋಷಣೆ ಮಾಡಿರುವ ಮೊದಲ ಹಂತದ 100 ತಾಲೂಕುಗಳಿಗೆ ಎರಡು ಕಂತುಗಳಲ್ಲಿ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿದೆ. ಅದರಂತೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕುಗಳಿಗೆ ಎರಡು ಕಂತುಗಳಲ್ಲಿ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

ಮುಂಗಾರು ಹಂಗಾಮಿನ ಬರ ಘೋಷಣೆ ಮಾಡಿದ ತಾಲೂಕುಗಳಿಗೆ ತಲಾ 1 ಕೋಟಿ ರೂ. ನೀಡಲಾಗಿದೆ. ಬರ ಘೋಷಣೆಯಾಗದ ತಾಲೂಕುಗಳಿಗೆ 25 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದರು. ಚಾಮರಾಜ ನಗರ ಜಿಲ್ಲೆಯಲ್ಲಿ ನರೇಗಾದಡಿ 29 ಸಾವಿರ ಜನರಿಗೆ ಉದ್ಯೋಗ ನೀಡಿ, 16 ಲಕ್ಷ ಮಾನವ ದಿನ ಸೃಜಿಸಲಾಗಿದೆ. ಬರದ ಕಾರಣಕ್ಕೆ ಹೆಚ್ಚುವರಿಯಾಗಿ 3.50 ಲಕ್ಷ ಮಾನವ ದಿನಗಳನ್ನು ಕೊಡಲಾಗಿದ್ದು, ಅದನ್ನು ಬಳಸಿಕೊಳ್ಳಿ. ಜನರು ವಲಸೆ ಹೋಗಲು ಬಿಡಬೇಡಿ ಎಂದು ತಾಕೀತು ಮಾಡಿದರು.

2 ಕೋಟಿ ರೂ.: ನರೇಗಾದಲ್ಲಿ ಸಮುದಾಯ ಆಧಾರಿತ ಕೆಲಸಗಳನ್ನು ಹೆಚ್ಚು ಮಾಡಿ, ಚಾಮರಾಜ ನಗರ ಜಿಲ್ಲೆಯ ನೀರಿನ ಅಭಾವ ಇರುವ 16 ಗ್ರಾಮಗಳಿಗೆ 2 ದಿನಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ಕ್ರಮಕೈಗೊಳ್ಳಿ, ಅವಶ್ಯಕತೆ ಇರುವ ಕಡೆಗಳಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಪ್ರಯತ್ನ ಮಾಡಿ, ಟಾಸ್ಕ್ಫೋರ್ಸ್‌ನಲ್ಲಿರುವ 2 ಕೋಟಿ ರೂ. ಬಳಸಿಕೊಳ್ಳಿ ಎಂದರು.

ಬೆಂಬಲ ಬೆಲೆಯಡಿ ಭತ್ತ ಖರೀದಿಸುವ ವಿಚಾರದಲ್ಲಿ ರೈಸ್‌ ಮಿಲ್‌ಗ‌ಳ ಮೇಲೆ ಸರ್ಕಾರ ಸಂಪೂರ್ಣವಾಗಿ ಅವಲಂಬನೆಯಾಗುವುದು ಸರಿಯಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ. ಪರ್ಯಾಯ ಕ್ರಮಗಳ ಸಾಧ್ಯತೆ ಬಗ್ಗೆ ಆಹಾರ ಇಲಾಖೆ ಕಾರ್ಯದರ್ಶಿ ಜೊತೆಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಹಣ ಬಿಡುಗಡೆ: ಕುಡಿಯುವ ನೀರು ಸರಬರಾಜಿಗಾಗಿ ನಗರಪ್ರದೇಶಗಳಿಗೆ ಒಂದು ವಾರದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಶಾಸಕರ ಅಧ್ಯಕ್ಷತೆಯ ಟಾಸ್ಕ್ಫೋರ್ಸ್‌ ಮಾದರಿಯಲ್ಲೇ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೂ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ತನ್ವೀರ್‌ಸೇs್, ಅಶ್ವಿ‌ನ್‌ಕುಮಾರ್‌, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್‌ ಚಿಕ್ಕಮಾದು, ಬಿ.ಹರ್ಷ ವರ್ಧನ, ಸಂಸದ ಪ್ರತಾಪ್‌ ಸಿಂಹ, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಮೈಸೂರು ಜಿಪಂ ಅಧ್ಯಕ್ಷ ಸಾ.ರಾ.ನಂದೀಶ್‌, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಬರ ಪರಿಸ್ಥಿತಿ ವರದಿ ಬೇಗ ಕಳುಹಿಸಲು ಸೂಚನೆ

ಮೈಸೂರು: ಮುಂಗಾರು ಹಂಗಾಮಿನಲ್ಲಿ ಘೋಷಣೆಯಾದ ಬರ ಪ್ರದೇಶಗಳನ್ನು ಮುಂದಿನ 6 ತಿಂಗಳ ತನಕ ಬರ ಎಂದೇ ಪರಿಗಣಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಎರಡೂ ಜಿಲ್ಲೆಗಳ ಬರ ಪರಿಸ್ಥಿತಿ ಕುರಿತು ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.ಜನವರಿ ಕೊನೆ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಕೊಡಲು ತೀರ್ಮಾನಿಸಲಾಗಿತ್ತು. ಆದರೆ, ಜಿಲ್ಲಾಧಿಕಾರಿಗಳಿಂದ ವರದಿ ಬರುವುದು ತಡವಾದ್ದರಿಂದ ಕೊಡಲಾಗಿಲ್ಲ. ರಾಜ್ಯದ ಬರಪೀಡಿತ 15 ಜಿಲ್ಲೆಗಳ ಪೈಕಿ 13 ಜಿಲ್ಲೆಗಳ ಸರ್ವೆ ಮುಗಿದಿದೆ. ಮೈಸೂರು-ಚಾಮರಾಜನಗರ ಬಾಕಿ ಇದ್ದು, ಬೇಗ ಸರ್ವೆ ಕಾರ್ಯ ಮುಗಿಸಿ ವರದಿ ಕೊಡಿ. ಜಂಟಿ ಕೃಷಿ ನಿರ್ದೇಶಕರು ಕೊಟ್ಟಿರುವ ವರದಿಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳೇ ವರದಿ ಕಳುಹಿಸಿಕೊಡಿ ಎಂದರು.

ಮೇವು ಶೇಖರಣೆ ಮಾಡಿ: ಸದ್ಯ ಮೇವಿಗೆ ತೊಂದರೆ ಇಲ್ಲದಿದ್ದರೂ ಮುಂಬರುವ ದಿನಗಳನ್ನು ಗಮನದಲ್ಲಿಟ್ಟುಕೊಂಡು ಮೇವು ಶೇಖರಣೆಗೆ ಆದ್ಯತೆ ನೀಡಿ, ಕೆಲವು ರೈತರು ಗದ್ದೆಯಲ್ಲೇ ಭತ್ತದ ಹುಲ್ಲಿಗೆ ಬೆಂಕಿ ಹಾಕುತ್ತಾರೆ. ಇದರಿಂದ ಮೇವಿನ ಸಮಸ್ಯೆ ಹೆಚ್ಚಾಗುತ್ತದೆ. ಹೀಗಾಗಿ ಅದನ್ನು ಖರೀದಿ ಮಾಡಿ ಶೇಖರಣೆ ಮಾಡಬೇಕು ಎಂದರು. ಮೈಸೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ವಿಜಯನಗರ 4ನೇ ಹಂತದಲ್ಲಿ ನಿರ್ಮಿಸಿರುವ ಟ್ಯಾಂಕ್‌ಗೆ ನೀರನ್ನು ತುಂಬಿಸುವ ಕಾರ್ಯ 15 ದಿನದ ಒಳಗೆ ಆಗಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ , ಸಂಬಂಧಿಸಿದ ಇಂಜಿನಿಯರ್‌ಗೆ ಸೂಚಿಸಿದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.