ಜಿಪಂ, 3 ಗ್ರಾಪಂಗಳಿಗೆ ರಾಷ್ಟ್ರೀಯ ಪ್ರಶಸ್ತಿ


Team Udayavani, Jun 20, 2020, 5:25 AM IST

jilla-panchayat

ಮಂಡ್ಯ: 2018-19ನೇ ಸಾಲಿನಲ್ಲಿ ಕಾರ್ಯಕ್ಷಮತೆ ಮತ್ತು ಪ್ರಗತಿಯನ್ನಾಧರಿಸಿ ಭಾರತ ಸರ್ಕಾರ ನೀಡುವ ಪಂಚಾಯತ್‌ರಾಜ್‌ ಪುರಸ್ಕಾರ ದ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು ಜಿಪಂಗೆ ಲಭಿಸಿದೆ ಎಂದು ಜಿಪಂ ಸಿಇಒ ಕೆ.ಯಾಲಕ್ಕೀ ಗೌಡ  ಹೇಳಿದರು. ಮಂಡ್ಯ ಜಿಪಂ, ಮದ್ದೂರಿನ ಅಣ್ಣೂರು, ಹೆಮ್ಮನಹಳ್ಳಿ ಹಾಗೂ ಶ್ರೀರಂಗಪಟ್ಟಣದ ನಗುವ ನಹಳ್ಳಿ ಗ್ರಾಪಂ ಪ್ರಶಸ್ತಿಗೆ ಪಾತ್ರವಾಗಿವೆ ಎಂದು ಗ್ರಾಪಂ ಪಿಡಿಒಗಳ ಜೊತೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜಿಪಂಗೆ ಸಶಕ್ತೀಕರಣ ಪುರಸ್ಕಾರ: ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಎಲ್ಲಾ ಗ್ರಾಪಂಗಳಲ್ಲಿ ಪ್ಲಾಸ್ಟಿಕ್‌ ನಿಷೇಧ. ನರೇಗಾಯಡಿ ಕಾಮ ಗಾರಿಗಳಿಗೆ ಆದ್ಯತೆ, ಗ್ರಾಪಂ ಸ್ವಂತ ಸಂಪನ್ಮೂಲ ಕ್ರೋಢೀಕರಣಕ್ಕೆ ಆದ್ಯತೆ, ವಿದ್ಯುತ್‌ ಬಿಲ್‌ ಮರು ಹೊಂದಾಣಿಕೆ ಮತ್ತು ಬಾಕಿ ಬಿಲ್‌ ಪಾವ  ತಿಗೆ ಒತ್ತು. ಶೈಕ್ಷಣಿಕ ಚಟುವಟಿಕೆಗಳಿಗೆ ಗ್ರಾಪಂನಿಂದ 5 ಸಾವಿರ ರೂ. ಸಹಾಯಧನ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫ‌ಲಿತಾಂಶ ಉತ್ತಮಗೊಳಿಸಲು ಕ್ರಮ ವಹಿಸಲಾಗಿದೆ. ಜಿಪಂಗೆ ದೀನ್‌ ದಯಾಳ್‌  ಉಪಾಧ್ಯಾಯ ಪಂಚಾಯತ್‌ ಸಶ ಕ್ತೀಕರಣ ಪುರಸ್ಕಾರದಡಿ 50 ಲಕ್ಷ ರೂ. ನಗದು ಪುರಸ್ಕಾರ ದೊರಕಿದೆ ಎಂದರು.

ಅಣ್ಣೂರಿಗೆ 10 ಲಕ್ಷ ಬಹುಮಾನ: ಅಣ್ಣೂರು ಗ್ರಾಪಂ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತ ಪುರಸ್ಕಾರ (ನೈರ್ಮಲ್ಯ ವಿಭಾಗ) ದೊಂದಿಗೆ 10 ಲಕ್ಷ ರೂ.ನಗದು ಬಹುಮಾನ ಪಡೆದುಕೊಂಡಿದೆ ಎಂದು ಪಿಡಿಒ ಅಶ್ವಿ‌ನಿ  ಹೇಳಿದರು. ಗ್ರಾಪಂನ ಎಲ್ಲಾ ಕುಟುಂಬಗಳಿಗೂ ಶೌಚಾಲ ಯ ನಿರ್ಮಿಸಲಾಗಿದೆ. ಮನೆಯಲ್ಲೇ ಹಸಿ ಮತ್ತು ಒಣ ಕಸ ವಿಂಗಡಿಸಲು 2 ಕಸದ ಬುಟ್ಟಿ ವಿತರಿಸಲಾಗಿದೆ. ಮನೆ ಮನೆಯಿಂದ ಕಸ ಸಂಗ್ರಹಿ ಸಲು ಟ್ರ್ಯಾಕ್ಟರ್‌, ಆಟೋ ಮೂಲಕ  ನೈರ್ಮಲ್ಯ ಸುಸ್ಥಿತರತೆಗೆ ಆದ್ಯತೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲೇ ಪ್ರಥಮ ದ್ರವ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣ, ಸಮುದಾಯ ಗೊಬ್ಬರ ಘಟಕ ನಿರ್ಮಿಸಿದ ಪ್ರಥಮ ಗ್ರಾಪಂ ಆಗಿದೆ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಕೊಂಡು ಗೊಬ್ಬರ ಘಟಕ ನಿರ್ಮಾಣ ಮಾಡಲಾಗಿದೆ.  ಗ್ರಾಪಂನಲ್ಲಿ ಸರ್ಕಾರಿ ಯೋಜ ನೆಗಳ ಬಗ್ಗೆ ಮಾಹಿತಿಗಾಗಿ ಡಿಜಿಟಲ್‌ ಬೋರ್ಡ್‌ ಅಳವಡಿಸಲಾಗಿದೆ. ಡಿಜಿಟಲ್‌ ಲೈಬ್ರರಿಯನ್ನು ತೆರೆದು ವಿದ್ಯಾರ್ಥಿಗಳಿಗೆ ಅನು ಕೂಲ ಕಲ್ಪಿಸಿದೆ ಎಂದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ: ಹೆಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಪ್ರತಿ ಶಾಲೆಗಳಲ್ಲಿ ಗಂಡು-ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲ ಯ, ಕಾಪೌಂಡ್‌ ನಿರ್ಮಾಣ, ಅಂಗನವಾಡಿ ಗಳಲ್ಲಿ ಕಾನ್ವೆಂಟ್‌ ಮಾದರಿಯಲ್ಲಿ ಮಕ್ಕಳಿಗೆ ಶಿಕ್ಷಣ ವ್ಯವಸ್ಥೆ  ಕಲ್ಪಿಸಿಕೊಡಲಾಗಿದೆ ಎಂದು ಗ್ರಾಪಂ ಪಿಡಿಒ ಲೀಲಾವತಿ ತಿಳಿಸಿದರು. ಗ್ರಾಪಂ ಕಚೇರಿಗೆ ಕೇಂದ್ರೀಕೃತ ಸೋಲಾರ್‌ ಘಟಕ ಅಳವಡಿಸಿ ವಿದ್ಯುತ್‌ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಕದಲೀಪುರ, ಯರಗ ನಹಳ್ಳಿ,  ಹೆಮ್ಮನಹಳ್ಳಿಯಲ್ಲಿ ಸೋಲಾರ್‌ ಘಟಕ ಅಳವಡಿಸಿ ಬೀದಿ ದೀಪಗಳಿಗೆ ಸಂಪರ್ಕ ಕಲ್ಪಿಸಲಾ ಗಿದೆ. ಸರ್ಕಾರಿ ಶಾಲೆಗಳಿಗೆ ಸದಸ್ಯರ ಗೌರವ ಧನದಲ್ಲಿ ಉಚಿತ ಕಂಪ್ಯೂಟರ್‌, ವಿವಿಧ ಯೋಜನೆಗಳನ್ನು ಒಗ್ಗೂಡಿಸಿ ಚರಂಡಿ, ರಸ್ತೆ, ಸ್ಮಶಾನ  ಅಭಿವೃದಿಟಛಿ ಮಾಡಲಾಗಿದೆ. ಈ ಪಂಚಾಯ್ತಿ ಗೆ ಅತ್ಯುತ್ತಮ ಮಕ್ಕಳ ಸ್ನೇಹಿ ರಾಷ್ಟ್ರೀಯ ಪುರಸ್ಕಾರ ದೊರಕಿದ್ದು, ಪ್ರಶಸ್ತಿಯು 5 ಲಕ್ಷ ರೂ. ನಗದನ್ನು ಒಳಗೊಂಡಿದೆ ಎಂದು ಹೇಳಿದರು.

ಸೋಲಾರ್‌ ದೀಪ ಅಳವಡಿಕೆ: ನಮ್ಮ ಗ್ರಾಮ ನಮ್ಮ ಯೋಜನೆಯಡಿ ನಗುವನಹಳ್ಳಿ ಗ್ರಾಪಂಗೆ 5 ಲಕ್ಷ ರೂ. ನಗದು ಪುರಸ್ಕಾರ ದೊರ ಕಿದೆ. ಗ್ರಾಪಂ ವ್ಯಾಪ್ತಿ 9 ಅಂಗನವಾಡಿಗಳಲ್ಲಿ ಸೋಲಾರ್‌ ವಿದ್ಯುತ್‌ ದೀಪ ಅಳವಡಿಸಲಾ ಗಿದೆ. ಎಸ್ಸಿ,  ಎಸ್ಟಿ ಕಾಲೋನಿಗಳಿಗೂ ಸೋಲಾರ್‌ ವಿದ್ಯುತ್‌ ದೀಪ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂ ದ 2ರಿಂದ 3 ಲಕ್ಷ ರೂ. ವಿದ್ಯುತ್‌ ಉಳಿತಾ ಯವಾಗುತ್ತಿದೆ ಎಂದು ಪಿಡಿಒ ಯೋಗೇಶ್‌ ತಿಳಿಸಿದರು. 3 ಶುದಟಛಿ ನೀರಿನ ಘಟಕ ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲೇ ಮೊದಲ ವೆಬ್‌ಸೈಟ್‌ ಆರಂಭಿಸಿದ ಕೀರ್ತಿ ನಮ್ಮ ಗ್ರಾಪಂದ್ದಾಗಿದೆ. ಡಿಜಿಟಲ್‌ ಲೈಬ್ರರಿ ಆರಂಭಕ್ಕೆ ಸಿದ್ಧತೆ ನಡೆಸಿದ್ದು, ಪ್ಲಾಸ್ಟಿಕ್‌ ನಿಷೇಧಿಸಿ 1600 ಕುಟುಂಬಗಳಿಗೆ ಬಟ್ಟೆ ಹಾಗೂ ಸೆಣಬಿನ ಬ್ಯಾಗ್‌ ವಿತರಿಸಲಾಗಿದೆ ಎಂದರು

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.