ನಾಲಾ ಆಧುನೀಕರಣಕ್ಕೆ ಅಗತ್ಯ ಕ್ರಮ
Team Udayavani, Jul 19, 2018, 3:40 PM IST
ಮದ್ದೂರು: ಸರ್ಕಾರದಿಂದ ಬಿಡುಗಡೆಗೊಂಡಿರುವ ಕೋಟ್ಯಂತರ ರೂ. ವೆಚ್ಚದಲ್ಲಿ ನಾಲಾ ಆಧುನೀಕರಣಕ್ಕೆ ಅಗತ್ಯ ಕ್ರಮವಹಿಸುವುದಾಗಿ ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ತಿಳಿಸಿದರು.
ತಾಲೂಕಿನ ಕೊಪ್ಪ ಕೆರೆ ತುಂಬಿದ ಹಿನ್ನೆಲೆಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೊಪ್ಪ ಜಿಪಂ ವ್ಯಾಪ್ತಿಯ ಎಲ್ಲಾ ಕೆರೆಗಳು ತುಂಬಿದ್ದು ಬೆಕ್ಕಳಲೆ, ಕಿರಂಗೂರು ಹಾಗೂ ಹಳೇಹಳ್ಳಿಯ ಕೆರೆ ತುಂಬಿಸಲು ಅಗತ್ಯ ಕ್ರಮವಹಿಸುವುದಾಗಿ ತಿಳಿಸಿದರು.
ಕೆರೆಗಳ ಹೂಳು ತೆಗೆಸುವುದು, ಗಿಡಗಂಟಿ ಸ್ವತ್ಛಗೊಳಿಸಿ ಕೆರೆಯಲ್ಲಿ ಹೆಚ್ಚಿನ ನೀರು ಸಂರಕ್ಷಿಸಿ ರೈತರು ಬೆಳೆಗಳನ್ನು ಬೆಳೆಯಲು ಅವಕಾಶ ಕಲ್ಪಿಸುವುದಾಗಿ ತಿಳಿಸಿದರು. ಈಗಾಗಲೇ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ಕರೆದು ರೈತರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಸಕಾಲದಲ್ಲಿ ನೀರು ಹರಿಸಿ ಬೆಳೆ ಬೆಳೆಯಲು ಅವಕಾಶ ಕಲ್ಪಿಸಬೇಕೆಂದರು.
ಸರ್ಕಾರದಿಂದ 1,150 ಕೋಟಿ.ರೂ. ನಾಲಾ ಆಧುನೀಕರಣಕ್ಕೆ ಬಿಡುಗಡೆಗೊಂಡಿದೆ. ಕೌಡ್ಲೆ ಹಾಗೂ ಕೆರಗೋಡು ನಾಲಾ ಆಧುನೀಕರಣಕ್ಕೆ ಮುಂದಾಗಿದ್ದು, ಕೊಪ್ಪ ಕೆರೆ ತುಂಬಿದ ಹಿನ್ನೆಲೆಯಲ್ಲಿ 2 ಸಾವಿರ ಎಕರೆಗೂ ಹೆಚ್ಚು ಬೆಳೆ ಬೆಳೆಯಲು ರೈತರು ಮುಂದಾಗಿದ್ದಾರೆಂದರು. ಶಾಸಕ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ 43 ಸಾವಿರ ಕೋಟಿ ರೈತರ ಸಾಲಮನ್ನಾ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಜಿಲ್ಲೆಯಲ್ಲಿ 3900 ಕೋಟಿ ಸಾಲ ಮನ್ನಾ ಆಗಲಿದ್ದು, 1.20 ಲಕ್ಷ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆಂದು ತಿಳಿಸಿದರು.
ತಮಿಳುನಾಡಿಗೆ ನೀರು: ಜುಲೈ ತಿಂಗಳಲ್ಲೇ ಕೆಆರ್ಎಸ್ ಅಣೆಕಟ್ಟೆ ತುಂಬಿ ಇತಿಹಾಸ ಬರೆದಿದ್ದು, ಮುಖ್ಯಮಂತ್ರಿಯಾಗಿ
ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಮಳೆ ಆರಂಭಗೊಂಡು ಕಬಿನಿ, ಹಾರಂಗಿ, ಕಾವೇರಿ ಹಾಗೂ ಹೇಮಾವತಿ ಅಣೆಕಟ್ಟೆಗಳು ತುಂಬಿ ಸಮೃದ್ಧಿ ಯಾಗಿ ರೈತರ ಜಮೀನುಗಳಿಗೆ ನೀರು ಹರಿಸುತ್ತಿದ್ದು ಜತೆಗೆ 1 ಲಕ್ಷ ಕ್ಯುಸೆಕ್ ತಮಿಳುನಾಡಿಗೆ ಹರಿಯುತ್ತಿರುವುದಾಗಿ ಹೇಳಿದರು.
ಪ್ರವಾಸಿ ತಾಣ: ವಿಸಿ ನಾಲೆಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಿದ್ದು, ನಾಲಾ ಆಧುನೀಕರಣಕ್ಕೆ ಬಿಡುಗಡೆಗೊಂಡು ನನೆಗುದಿಗೆ ಬಿದ್ದಿರುವ 2 ಕೋಟಿ ರೂ.ಗಳ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದಾಗಿ ತಿಳಿಸಿದರಲ್ಲದೇ, ಕೊಪ್ಪ ಕೆರೆ ಬಳಿ ಸಮುದಾಯ ಭವನ ನಿರ್ಮಿಸಿ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿಸಲು ಈಗಾಗಲೇ ಸಚಿವರೊಂದಿಗೆ ಮಾತುಕತೆ ನಡೆಸಿರುವುದಾಗಿ ಹೇಳಿದರು.
ಕಾರ್ಯಕರ್ತರ ಸಭೆ: ತಾಲೂಕಿನ ಕೊಪ್ಪ ಶಾಶ್ವತಿ ಸಮುದಾಯ ಭವನದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಶುಕ್ರವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲೆಗೆ ಭೇಟಿ ನೀಡಲಿದ್ದು, ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಬಳಿಕ ಮಂಡ್ಯದ ಸರಕಾರಿ ಕ್ರೀಡಾಂಗಣದಲ್ಲಿ ಕೃತಜ್ಞತಾ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದು,ª ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಈ ವೇಳೆ ತಾಪಂ ಅಧ್ಯಕ್ಷೆ ಜಯಲಕ್ಷಮ್ಮ, ಜಿಪಂ ಸದಸ್ಯರಾದ ರೇಣುಕಮ್ಮ, ಮರಿಹೆಗಡೆ, ತಾಪಂ ಸದಸ್ಯ ಮನೋಹರ್,
ಮಾಜಿ ಉಪಾಧ್ಯಕ್ಷ ಎಚ್.ಜಿ. ರಾಮಚಂದ್ರು, ಮುಖಂಡರಾದ ಮಹದೇವು, ಚಿಕ್ಕೋನಹಳ್ಳಿ ತಮ್ಮಯ್ಯ, ಜಯರಾಂ, ಸುರೇಶ್, ಎಇಇ ಮಹದೇವು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ