ಮಾರ್ಗೋನಹಳ್ಳಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ
ಶಾಲಾ ಆವರಣವೇ ದನದ ಕೊಟ್ಟಿಗೆ, ವಾಹನ ನಿಲ್ದಾಣ • ಕುಸಿಯುವ ಹಂತದಲ್ಲಿ ಶಾಲಾ ಕಟ್ಟಡ
Team Udayavani, Jun 24, 2019, 11:47 AM IST
ಕೆ.ಆರ್.ಪೇಟೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ದನಗಳನ್ನು ಕಟ್ಟಿ ಹಾಕಿರುವುದು.
ಕೆ.ಆರ್.ಪೇಟೆ: ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಗಮನಕ್ಕೆ ಅಧಿಕಾರಿಗಳು, ಶಾಸಕರು ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯಗಳಲ್ಲದೆ ಇರುವ ಬಗ್ಗೆ ಮಾಹಿತಿ ನೀಡಿ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಕೈಜೊಡಿಸಬೇಕಿದೆ.
ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದು ಒಂದು ಆರೋಪವಾದರೆ, ಬಹುತೇಕ ಸರ್ಕಾರಿ ಶಾಲಾ ಕಟ್ಟಡಗಳು ಯಾವಾಗಬೇಕಾದರೂ ಕುಸಿದು ಬೀಳುವ ಆತಂಕದಲ್ಲಿದೆ. ಇದಕ್ಕೆ ಉದಾರಹಣೆ ಎಂಬಂತೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಕುಸಿದು ಬಿದ್ದಿದ್ದು, ದಶಕಗಳೆ ಕಳೆದಿದೆ. ಶಾಲಾ ಆವರಣವನ್ನು ದನದ ಕೊಟ್ಟಿಗೆ, ವಾಹನಗಳನ್ನು ನಿಲ್ಲಿಸುವ ನಿಲ್ದಾಣವಾಗಿ ಬಳಕೆಯಾಗುತ್ತಿದ್ದು ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಲು ಸಾಧ್ಯವಿಲ್ಲಾ ಎಂಬ ಸ್ಥಿತಿ ನಿರ್ಮಾಣವಾಗಿದೆ.
ಪಾಠ ಮಾಡಲು ಸಮಯ ಕೊಡಿ? : ಸರ್ಕಾರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶಾಲೆಯನ್ನು ತೆರೆದಿದೆ ಇಲ್ಲಿ ಈಗ ಮುಖ್ಯವಾಗಿ ಮಕ್ಕಳ ಕೊರತೆ ಕಂಡುಬರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಗ್ರಾಮೀಣ ಭಾಗದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳು ಸಿಗದಿರುವುದು. ಒಂದರಿಂದ ಐದನೆ ತರಗತಿ ಇರುವ ಶಾಲೆಯಲ್ಲಿ 12 ರಿಂದ 30 ಮಕ್ಕಳು ಇರುವುದನ್ನು ನಾವು ತಾಲೂಕಿನಲ್ಲಿ ಕಾಣಬಹುದಾಗಿದೆ. ಇಲ್ಲಿಗೆ ಸರ್ಕಾರ ಇಬ್ಬರು ಶಿಕ್ಷಕರನ್ನು ನೇಮಕ ಮಾಡುತ್ತಾರೆ. ಇದರಲ್ಲಿ ಒಬ್ಬರು ಮಕ್ಕಳಿಗೆ ಬಿಸಿಯೂಟದ ಸಿದ್ಧತೆ ಹಾಗೂ ಪ್ರತಿದಿನ ದಾಖಲು ಮಾಡಬೇಕಾಗಿರುವ ಸುಮಾರು 17 ವಿಷಯಗಳನ್ನು ಕಡತಗಳಿಗೆ ನಮೂದಿಸುವುದರಲ್ಲಿ ಸಮಯ ಮುಗಿದು ಹೋಗುತ್ತದೆ. ಇನ್ನುಳಿದ ಒಬ್ಬ ಶಿಕ್ಷಕರು ಐದು ತರಗತಿ ಮಕ್ಕಳಿಗೆ ಎಷ್ಟು ಪಾಠ ಮಾಡಲು ಸಾಧ್ಯ ಎಂಬುದನ್ನು ಬಿಡಿಸಿ ಹೇಳುವ ಅವಶ್ಯಕತೆಯಿಲ್ಲ.
ಮುರಿದು ಬಿದ್ದಿರುವ ಶಾಲಾ ಕಟ್ಟಡ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡ ಅರ್ಧಭಾಗಕ್ಕೆ ಕುಸಿದು ಬಿದ್ದು ದಶಕಗಳೆ ಕಳೆದಿದ್ದರೂ ಅದನ್ನು ಸರಿಪಡಿಸುವ ಬದಲು ಬದಲಿ ಕೊಠಡಿ ವ್ಯವಸ್ಥೆ ಮಾಡಿಕೊಂಡು ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕೇವಲ ನಾಮಫಲಕ ಮಾತ್ರ ಉಳಿದುಕೊಂಡಿದೆ. ಶಾಲಾ ಕಟ್ಟಡ ಅರ್ಧ ಭಾಗ ಕುಸಿದು ಬಿದ್ದಿದೆ. ಇದನ್ನು ಗ್ರಾಮಕ್ಕೆ ಮೊದಲ ಸಾರಿ ಭೇಟಿ ನೀಡುವವರು ಗಮನಿಸಿದರೆ ಯಾವುದೋ ಸ್ಮಾರಕದಂತೆ ಭಾಸವಾಗುತ್ತದೆ. ಆದರೆ ವಾಸ್ತವವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನ ಪತ್ರತಿನಿಧಿಗಳ ನಿರ್ಲಕ್ಷ್ಯದಿಂದ ಶಾಲಾ ಕಟ್ಟಡ ದುರಸ್ತಿಯಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ