ನೀರಾ ಮಾರುತ್ತಿದ್ದ ರೈತನ ಬಂಧನ ಖಂಡಿಸಿ ಪ್ರತಿಭಟನೆ
Team Udayavani, Dec 4, 2019, 3:27 PM IST
ಶ್ರೀರಂಗಪಟ್ಟಣ: ತಾಲೂಕು ಮೇಳಾಪುರ ಗ್ರಾಮದಲ್ಲಿ ನೀರಾ ಮಾರುತ್ತಿದ್ದ ರೈತನನ್ನು ಬಂಧಿಸಿರುವ ಕ್ರಮ ಖಂಡಿಸಿ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ತಾಲೂಕು ಅಬಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶೀ ಮಂಜೇಶ್ಗೌಡ ನೇತೃತ್ವದಲ್ಲಿ ಪ್ರತಿಭಟನಾಕಾರರು ಜಮಾಯಿಸಿ ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ನಷ್ಟ ಅನುಭವಿಸಿದ ರೈತ ಲೋಕೇಶ್ ತೆಂಗಿನ ಮರದಿಂದ ನೀರಾ ಇಳಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದ. ಅಬಕಾರಿ ಇಲಾಖೆ ಅಧಿಕಾರಿಗಳು ಅಮಾಯಕ ರೈತನ ಮೇಲೆ ದೌರ್ಜನ್ಯ ನಡೆಸಿ ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ, ಹೆದ್ದಾರಿ ರಸ್ತೆ ಬದಿ ಡಾಬಾಗಳಲ್ಲಿ, ಪೆಟ್ಟಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರೂ, ಅದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ. ಬಡ ರೈತನ ಮೇಲೆ ನೀರಾ ಮಾರಾಟದ ಪ್ರಕರಣ ದಾಖಲಿಸಿದ್ದಾರೆ ಎಂದು ರೈತ ಮುಖಂಡ ಮಂಜೇಶ್ಗೌಡ ಆರೋಪಿಸಿದರು.
ದಲಿತ ಕುಟುಂಬದ ರೈತನ ಮೇಲಿನ ಪ್ರಕರಣ ರದ್ದು ಮಾಡಿ, ಆತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ರವಿಚಂದ್ರ ಒತ್ತಾಯಿಸಿದರು.
ಅಬಕಾರಿ ಇನ್ಸ್ಪೆಕ್ಟರ್ ಉಮ್ಮೆ ರುಬಾಬ್ ಮಾತನಾಡಿ, ಕಾನೂನಿನ ನಿಯಮಾನುಸಾರ ನೀರಾ ಮಾರಾಟದ ಕ್ರಮ ಕೈಗೊಳ್ಳಲಾಗಿದೆ. ಮೇಲಧಿಕಾರಿಗಳ ಜತೆ ಚರ್ಚಿಸಿ ರೈತರಿಗೆ ಆಗುವ ತೊಂದರೆ ತಪ್ಪಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಶ್ರೀಕಂಠಯ್ಯ, ಜಿಲ್ಲಾ ಸಂಚಾಲಕ ಕುಬೇರ, ಜಿಲ್ಲಾ ರೈತ
ಸಂಘದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಸಿದ್ದೇಗೌಡ, ಮುಂಡುಗದೊರೆ ಮೋಹನ್, ಕೃಷ್ಣೇಗೌಡ, ಪುಟ್ಟಸ್ವಾಮಿ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿ ಅಬಕಾರಿ ಇನ್ಸ್ ಪೆಕ್ಟರ್ ಉಮ್ಮೆ ರುಬಾಬ್ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್