ಕ್ವಾರಂಟೈನಲ್ಲಿದ್ದ ನಾಲ್ವರಲ್ಲಿ ನೆಗೆಟಿವ್
Team Udayavani, Apr 10, 2020, 5:49 PM IST
ಶ್ರೀರಂಗಪಟ್ಟಣ: ಕೋವಿಡ್ 19 ಸೋಂಕು ಶಂಕಿತರೆಂದು ಕ್ವಾರಂಟೈನಲ್ಲಿದ್ದ ನಾಲ್ವರಲ್ಲಿ ನೆಗೆಟಿವ್ ಕಂಡುಬಂದಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆಯಿಂದ ಒಟ್ಟು 8 ಮಂದಿಯನ್ನು ಕೋವಿಡ್ 19 ಶಂಕಿತರೆಂದು ಪರಿಗಣಿಸಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಆಸ್ಪತ್ರೆಯಲ್ಲಿ 4 ಮಂದಿ ಹಾಗೂ ಸೋಂಕು ಶಂಕಿತರ ಮನೆಯಲ್ಲೇ 4 ಮಂದಿಯನ್ನಿರಿಸಿ ಅವರ ಮೇಲೆ 14 ದಿನ ಆಸ್ಪತ್ರೆಯ ಸಿಬ್ಬಂದಿ ನಿಗಾವಹಿಸಿದ್ದರು. ಅವರೆಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಸೋಂಕು ಇಲ್ಲದಿರುವ ಬಗ್ಗೆ ವೈದ್ಯರು ದೃಢಪಡಿಸಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರನ್ನು ತಹಶೀಲ್ದಾರ್ ರೂಪಾ ನೇತೃತ್ವದಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.
ನಂಜನಗೂಡು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್, ವಿನಯ್ ಕುಮಾರ್, ಪಂಪ್ ಹೌಸ್ ನಿವಾಸಿ ಕೃಷ್ಣಕುಮಾರ್, ಬಳ್ಳೆಕೆರೆ ಆಕಾಶ್ ನನ್ನು ಮಾರ್ಚ್ 26ರಿಂದ ಸಾರ್ವಜನಿಕ ಆಸ್ಪತ್ರೆಯ ನಿಗಾ ಘಟಕದಲ್ಲಿರಿಸಿ ನಿಗಾ ವಹಿಸಲಾಗಿತ್ತು. ಇನ್ನು 14 ದಿನ ಹೊರಗೆ ಹೋಗದಂತೆ ಎಚ್ಚರಿಸಲಾಗಿದೆ. ಪ್ರತಿದಿನ ನಮ್ಮ ಸಿಬ್ಬಂದಿ ಅವರ ಮನೆಗಳಿಗೆ ಭೇಟಿ ನೀಡಿ ತಪಾಸಣೆಗೆ ಮಾಡಲಿದ್ದಾರೆ ಎಂದು ಡಾ ವೆಂಕಟೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ