ರಸ್ತೆ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ: ಪ್ರತಿಭಟನೆ
ಕೆಸರು ತುಂಬಿದ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಧರಣಿ
Team Udayavani, Aug 19, 2019, 4:22 PM IST
ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಕೊಪ್ಪ ಗ್ರಾಮಸ್ಥರು ರಸ್ತೆಯಲ್ಲೇ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಮದ್ದೂರು: ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದ ಸ್ಥಳೀಯ ಶಾಸಕರು ಹಾಗೂ ಗ್ರಾ.ಪಂ. ಆಡಳಿತದ ವಿರುದ್ಧ ಕೊಪ್ಪ ಗ್ರಾಮ ದಲ್ಲಿ ಸ್ಥಳೀಯರು ಕೆಸರು ತುಂಬಿದ ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಹೋಬಳಿ ಕೇಂದ್ರ ಕೊಪ್ಪ ಗ್ರಾಮದ ಸಂತೆ ಮೈದಾನದ ಬಳಿ ಹಾದುಹೋಗಿರುವ ಮುಖ್ಯರಸ್ತೆಯು ಕಳೆದ ವರ್ಷದಿಂದೀಚೆಗೆ ಕಿತ್ತು ನಿಂತಿದ್ದು, ಮಳೆ ಸುರಿದ ಹಿನ್ನೆಲೆಯಲ್ಲಿ ಕೆಸರುಗದ್ದೆಯಂತಾಗಿ ಸಂಚಾರಕ್ಕೆ ತೊಡಕುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು.
ತಾಲೂಕಿನ ಕೊಪ್ಪ ಗ್ರಾಪಂ ಕಚೇರಿ ಬಳಿ ಜಮಾಯಿಸಿದ ಸ್ಥಳೀಯರು ಆಡಳಿತ ಮಂಡಳಿ ಹಾಗೂ ಚುನಾಯಿತ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಒತ್ತಾಯಿಸಿದರು.ಸದರಿ ರಸ್ತೆಯಲ್ಲಿ ಸಂತೆ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ, ದೇವಾಲಯ, ಗ್ರಾಪಂ ಕಚೇರಿ ಪೊಲೀಸ್ ಠಾಣೆ ಸೇರಿದಂತೆ ನಿತ್ಯ ಸಾವಿರಾರು ಮಂದಿ ಸಂಚರಿಸುವ ಪ್ರಮುಖ ರಸ್ತೆಯಾಗಿದ್ದು, ಪಿಡಿಒಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರಿದರು.
ಸ್ಥಳೀಯ ಗ್ರಾಪಂ ಕಚೇರಿಗೆ ಪ್ರತಿನಿತ್ಯ ನೂರಾರು ಮಂದಿ ಸಾರ್ವಜನಿಕರು ಬಂದು ಹೋಗುತ್ತಿದ್ದು ಕಚೇರಿ ಆವರಣದಲ್ಲಿ ಅಶುಚಿತ್ವ ತಾಂಡವವಾಡುವ ಜತೆಗೆ ವಿಷ ಜಂತುಗಳ ವಾಸಸ್ಥಾನವಾಗಿ ನಿರ್ಮಾಣಗೊಂಡಿದ್ದರೂ ಚುನಾಯಿತ ಪ್ರತಿನಿಧಿಗಳು ಇತ್ತ ಗಮನಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಸ್ತೆ ದುರಸ್ತಿಗೊಳಿಸುವ ಜತೆಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡದಿದ್ದಲ್ಲಿ ಗ್ರಾಪಂ ಕಚೇರಿ ಬಳಿ ನಿರಂತರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆ ವೇಳೆ ಮುಖಂಡರಾದ ಕುಮಾರ್, ಪ್ರವೀಣ್, ನವೀನ್, ನಾಗೇಶ್, ರಾಘವಾ, ವೆಂಕಟೇಶ್, ಲಿಂಗೇಗೌಡ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ