ಗೋವುಗಳ ರಕ್ಷಣೆ ಮಾಡದೆ ಪೊಲೀಸರ ನಿರ್ಲಕ್ಷ್ಯ: ಗಂಭೀರ ಆರೋಪ
Team Udayavani, Jan 4, 2021, 10:22 PM IST
ಮಂಡ್ಯ: ಮಾಂಸಕ್ಕಾಗಿ ಹತ್ಯೆ ಮಾಡಲು ಕಸಾಯಿ ಖಾನೆಯಲ್ಲಿ ಕೂಡಿ ಹಾಕಲಾಗಿದ್ದ ಗೋವುಗಳನ್ನು ರಕ್ಷಣೆ ಮಾಡುವಂತೆ ಮಾಹಿತಿ ನೀಡಿದರೂ ಪೊಲೀಸರು ಸರಿಯಾಗಿ ಪರಿಶೀಲನೆ ಮಾಡದೆ ಅವರೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಹಿಂದೂಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೋಮವಾರ ಸಂಜೆ 7.30ರ ಸಮಯದಲ್ಲಿ ನಗರದ ಪೂರ್ವ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು ಕೂಡಲೇ ಗೋಹತ್ಯೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರದ ಗುತ್ತಲು ಬಡಾವಣೆಯ ಕಾಂಗ್ರೆಸ್ ಮುಖಂಡನಿಗೆ ಸೇರಿದ್ದ ಕಸಾಯಿ ಖಾನೆಯಲ್ಲಿ ಗೋವುಗಳನ್ನು ಕೂಡಿ ಹಾಕಲಾಗಿತ್ತು. ಇವುಗಳಲ್ಲಿ ದೇವರ ಬಸವಗಳು, ದೇಸಿ ಗೋವು, ಎಮ್ಮೆಗಳು ಸೇರಿದಂತೆ ಒಟ್ಟು ೩೮ ಜಾನುವಾರುಗಳಿದ್ದವು. ಇದರ ಬಗ್ಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಸಂಪೂರ್ಣ ಮಾಹಿತಿ ನೀಡಲಾಗಿತ್ತು.
ಮಾಹಿತಿ ಆಧರಿಸಿ ಪೊಲೀಸರು ಸೋಮವಾರ ಸಂಜೆ ದಾಳಿ ಮಾಡಿ ಮೂರು ಕ್ಯಾಂಟರ್ಗಳಲ್ಲಿ 2 ಹಸು ಹಾಗೂ ಎಮ್ಮೆಗಳು ಸೇರಿದಂತೆ 28 ಜಾನುವಾರುಗಳನ್ನು ರಕ್ಷಣೆ ಮಾಡಿದ್ದರು. ಅಲ್ಲದೆ, ದಾಳಿ ಮಾಡಿದ ಸಂದರ್ಭದಲ್ಲಿ ಸ್ಥಳ ಮಹಜರು ಮಾಡುವ ಉದ್ದೇಶದಿಂದ ಸಾರ್ವಜನಿಕರನ್ನು ದೂರ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿ ದೇವರ ಬಸವಗಳನ್ನು ಬಿಟ್ಟು, ಕೇವಲ ಎಮ್ಮೆ ಹಾಗೂ ಕರುಗಳನ್ನು ಮಾತ್ರ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪರ ಪೊಲೀಸರು ನಿಂತಿದ್ದಾರೆ ಎಂದು ಹಿಂದೂಪರ ಕಾರ್ಯಕರ್ತರು ಗಂಭೀರ ಆರೋಪ ಮಾಡಿದರು.
ಕಾಟಾಚಾರಕ್ಕೆ ಎಮ್ಮೆ ಕರುಗಳನ್ನು ವಶಪಡಿಸಿಕೊಂಡು ದೊಡ್ಡ ಗೂಳಿ, ದೇವರ ಬಸವಗಳನ್ನು ಬಿಟ್ಟು ಬಂದಿದ್ದಾರೆ. ಮತ್ತೆ ಸ್ಥಳ ಮಹಜರು ಮಾಡಿ ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು ಮತ್ತೊಮ್ಮೆ ಸ್ಥಳ ಮಹಜರು ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’