ನಿರಾಣಿ ತೆಕ್ಕೆಗೆ ಪಿಎಸ್‌ಎಸ್‌ಕೆ ಕಾರ್ಖಾನೆ


Team Udayavani, Jun 7, 2020, 5:09 AM IST

irani-tekke

ಮಂಡ್ಯ: 3 ವರ್ಷಗಳಿಂದ ಕಬ್ಬು ಅರೆಯುವಿಕೆ ಕಾರ್ಯ ಸ್ಥಗಿತಗೊಳಿಸಿದ್ದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಅಂತಿಮವಾಗಿ ನಿರಾಣಿ ಕಂಪನಿ ತೆಕ್ಕೆಗೆ ಸೇರಿಕೊಂಡಿದೆ. ರಾಜ್ಯಸರ್ಕಾರ 40 ವರ್ಷ ಕಾಲ ಕಂಪನಿಯನ್ನು ಗುತ್ತಿಗೆ  ನೀಡಲು ತೀರ್ಮಾನಿಸಿದೆ. ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಗುತ್ತಿಗೆ ಪಡೆಯಲು ನಿರಾಣಿ ಕಂಪನಿ ಹಾಗೂ ಎನ್‌ಎಸ್‌ಎಲ್‌ ಕಂಪನಿಗಳು ಟೆಂಡರ್‌ ಹಾಕಿದ್ದವು. ಹಣಕಾಸು ಟೆಂಡರ್‌ ಪ್ರಕ್ರಿಯೆಯಲ್ಲಿ ಎನ್‌ಎಸ್‌ ಎಲ್‌ ಕಂಪನಿ  ತಿರಸ್ಕೃತಗೊಂಡಿದ್ದರಿಂದ ಅಂತಿಮವಾಗಿ ನಿರಾಣಿ  ಕಂಪನಿಗೆ ಟೆಂಡರ್‌ ದೊರಕಿದೆ.

ಕಂಪನಿಗೆ ಸರ್ಕಾರ ವಿಧಿಸುವ ಷರತ್ತು, ಆರ್ಥಿಕ ವ್ಯವಹಾರಗಳ ಕುರಿತ ಪ್ರಕ್ರಿಯೆಗಳು ಮುಂದುವ ರೆದಿವೆ ಎಂದು ತಿಳಿದು ಬಂದಿದೆ. ದುಡಿಯುವ  ಬಂಡವಾಳದ ಕೊರತೆಯಿಂದ ಕಾರ್ಖಾನೆ ಯನ್ನು ಈವರೆಗೆ ಆರಂಭಿಸಲು ಸಾಧ್ಯವಾಗಿಲ್ಲ. ಪಿಎಸ್‌ಎಸ್‌ಕೆ ಆಡಳಿತ ಮಂಡಳಿ ಸರ್ವ ಸದಸ್ಯರ ವಿಶೇಷ ಮಹಾಸಭೆಯಲ್ಲಿ ಕಂಪನಿಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡಲು ನಿರ್ಣಯ  ಕೈಗೊಂಡಿತ್ತು. ಸರ್ಕಾರವೂ ಅದಕ್ಕೆ ಸಹಮತ ವ್ಯಕ್ತಪಡಿಸಿ ನಿರಾಣಿ ಕಂಪನಿಗೆ ಗುತ್ತಿಗೆ ನೀಡುವ ನಿರ್ಧಾರ ಕೈಗೊಂಡಿದೆ.

ನಿರಾಣಿ ಕಂಪನಿ ಹೊಣೆಗಾರಿಕೆ: ಕಬ್ಬು ಅರೆಯುವಿಕೆ ಕಾರ್ಯ ಸ್ಥಗಿತದಿಂದ ಪಿಎಸ್‌ಎಸ್‌ಕೆ ವ್ಯಾಪ್ತಿಯ 7.50 ಲಕ್ಷ ಟನ್‌ ಕಬ್ಬನ್ನು ಸಾಗಣೆ ಮಾಡುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿತ್ತು. ಸರ್ಕಾರಿ ಸ್ವಾಮ್ಯದಡಿ ಕಂಪನಿ  ಮುನ್ನಡೆಸುವುದು ಸಾಧ್ಯವಿಲ್ಲದಿರುವುದನ್ನು ಮನಗಂಡು ಖಾಸಗಿ ಕಂಪನಿಗೆ ಗುತ್ತಿಗೆ ನೀಡಲು ಸರ್ಕಾರ ತೀರ್ಮಾನಿಸಿ ನಿರಾಣಿ ಕಂಪನಿ ಹೊಣೆಗಾರಿಕೆ ವಹಿಸಿದೆ.

ಕಬ್ಬಿನ ಸಕ್ಕರೆ ಇಳುವರಿಯ ಶೇಕಡಾವಾರು ಪ್ರಮಾಣ 1995-96 ಹಾಗೂ  1996-97ನೇ ಸಾಲನ್ನು ಹೊರತುಪಡಿಸಿ ದರೆ ಬೇರಾವುದೇ ವರ್ಷದಲ್ಲಿ ಶೇ.9ರ ಪ್ರಮಾಣಕ್ಕೆ ವೃದಿಯಾಗಲಿಲ್ಲ. 31.3.2019ರ ಅಂತ್ಯಕ್ಕೆ ಒಟ್ಟಾರೆ 353.34 ಕೋಟಿ ರೂ. ನಷ್ಟ ಅನುಭವಿಸಿದ್ದ ಕಾರ್ಖಾನೆ 157.225 ಎಕರೆ ಭೂಮಿಯೊಂದಿಗೆ 110.94 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹೊಂದಿದೆ. 2010ರಿಂದ 2018ರವರೆಗೆ ಸರ್ಕಾರಗಳು 103.46 ಕೋಟಿ ರೂ. ಹಣವನ್ನು ಕಾರ್ಖಾನೆಗೆ ದುಡಿಯುವ ಬಂಡವಾಳ ನೀಡಿ ದ್ದರೂ ಕಾರ್ಖಾನೆ ಪ್ರಗತಿಯತ್ತ  ಮುನ್ನಡೆಯಲೇ ಇಲ್ಲ.

ವಿಧಿ-ವಿಧಾನಗಳ ರೂಪು-ರೇಷೆ ಕ್ರಮಬದತೆಯಿಂದ ಕೂಡಿರದ ಕಾರಣ ಕಬ್ಬು ಅರೆಯುವಿಕೆ ಪರಿಪೂರ್ಣಗೊಳ್ಳಲಿಲ್ಲ. ಕಬ್ಬು ಅರೆ ಯುವಿಕೆ ಸಾಮರ್ಥ್ಯವನ್ನು ಪೂರ್ಣವಾಗಿ ಬಳಕೆ ಮಾಡದಿರುವು ದು ಕಾರ್ಖಾನೆ  ನಷ್ಟದ ಹಾದಿ ಹಿಡಿಯಲು ಕಾರಣವಾಯಿತು. ಕಾರ್ಖಾನೆಯಲ್ಲಿ 31.8.2019ರ ಅಂತ್ಯಕ್ಕೆ 144 ನೌಕರರಿದ್ದು,  ಅವರ 27 ತಿಂಗಳ ವೇತನ, ಸ್ವಯಂ ನಿವೃತ್ತಿ ಹಾಗೂ ಇತರೆ ಶಾಸನಬದಟಛಿ ಪಾವತಿಗಳಿಗೆ 20 ಕೋಟಿ ರೂ.  ಅಗತ್ಯವಿದ್ದು, ಈ ಹಣ ನೀಡಿದರೆ ನೌಕರರ ಸಮಸ್ಯೆ ಬಗೆಹರಿಯಲಿದೆ.

ಹಿಂದೆಯೂ ಕೊಠಾರಿ ಕಾರ್ಖಾನೆಗೆ ಗುತ್ತಿಗೆ: 2004ರಲ್ಲಿ ಪಿಎಸ್‌ ಎಸ್‌ಕೆ ಕಾರ್ಖಾನೆಯನ್ನು ಕೊಠಾರಿ ಷುಗರ್ನವರಿಗೆ 7 ವರ್ಷ ಗುತ್ತಿಗೆ ನೀಡಲಾಗಿತ್ತು. ಆ ವೇಳೆ 2 ಕೋಟಿ ರೂ. ಠೇವಣಿ ಇರಿಸಿಕೊಳ್ಳಲಾಗಿತ್ತು. ಆ ವೇಳೆ ಗುತ್ತಿಗೆ ಅವಧಿ ವಿಸ್ತರಣೆ  ಮಾಡುವಂತೆ  ಸರ್ಕಾರದ ಮೇಲೆ ಕೊಠಾರಿ ಷುಗರ್ ಆಡಳಿತ ಮಂಡಳಿ ಒತ್ತಡ ಹೇರುತ್ತಲೇ ಇತ್ತು. ಇದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿರಲಿಲ್ಲ.ಕೊನೆಗೆ 2 ವರ್ಷದಲ್ಲಿ 3.5 ಲಕ್ಷ ಟನ್‌ ಕಬ್ಬು ಅರೆದು ಗುತ್ತಿ  ಗೆ ಕೈಬಿಟ್ಟಿತು. ಕೊಠಾರಿ ಕಾರ್ಖಾನೆ  ಗುತ್ತಿಗೆ ಕೊನೆಗೊಳಿಸಿಕೊಂಡರೂ ಅವರು ಇಟ್ಟಿದ್ದ 2 ಕೋಟಿ ರೂ. ಠೇವಣಿಯನ್ನು ವಾಪಸ್‌ ನೀಡಿದರು. 2 ವರ್ಷದಲ್ಲಿ ಸರ್ಕಾರಕ್ಕೆ ನೀಡಬೇಕಾದ ಹಣದ ಮೇಲೆ ಬಡ್ಡಿ ರಿಯಾಯಿತಿಯನ್ನೂ ನೀಡಿ ಗೌರವದಿಂದ ಕಳುಹಿಸಿಕೊಟ್ಟಿತ್ತು  ಎಂದು ಪಿಎಸ್‌ಎಸ್‌ಕೆ ಮಾಜಿ ಅಧ್ಯಕ್ಷ ಕೆ.ಎಸ್‌. ನಂಜುಂಡೇಗೌಡ ನೆನೆದರು.

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆಯಲು ನಿರಾಣಿ ಕಂಪನಿಗಳು ಟೆಂಡರ್‌ ಹಾಕಿದ್ದವು. ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಫೈನಾನ್ಷಿಯಲ್‌ ಬಿಡ್‌ನಲ್ಲಿ ಹೊರ  ಬಿದ್ದಿದ್ದರಿಂದ ನಿರಾಣಿ ಕಂಪನಿಗೆ ಗುತ್ತಿಗೆ ದೊರಕಿದೆ. 
-ಡಾ.ಖಂಡಗಾವಿ, ವ್ಯವಸ್ಥಾಪಕ ನಿರ್ದೇಶಕ, ಪಿಎಸ್‌ಎಸ್‌ಕೆ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.