ಸ್ವಚ್ಛತೆ ಕಾಣದ ಮಿನಿ ವಿಧಾನಸೌಧದ ಆವರಣ

ಕಚೇರಿ ಬಳಿಯೇ ಕಸ ರಾಶಿ, ಆವರಣದಲ್ಲಿ ಬೆಳೆದು ನಿಂತ ತ್ಯಾಜ್ಯ ಗಿಡ • ನಾಗರಿಕರ ಅಸಮಾಧಾನ

Team Udayavani, Jul 14, 2019, 12:56 PM IST

mandya-tdy-2..

ಮಿನಿ ವಿಧಾನಸೌಧದ ಒಳಗೆ ಬಿದ್ದಿರುವ ಕಸದ ರಾಶಿ.

ಶ್ರೀರಂಗಪಟ್ಟಣ: ನಮ್ಮ ಮನೆಯ ಮುಂಭಾಗ ಕಸದ ರಾಶಿ ಬಿದ್ದಿದೆ ವಿಲೇವಾರಿ ಮಾಡಿ. ಬಡಾವಣೆ ಖಾಲಿ ಜಾಗದಲ್ಲಿ ಗಿಡಗಂಟಿಗಳು ಬೆಳೆದಿವೆ ತೆರವುಗೊಳಿಸಿ ಎಂದು ಜನಸಾಮಾನ್ಯರು ಅಧಿಕಾರಿಗಳಿಗೆ ಮನವಿ ಮಾಡುವುದು ಸಾಮಾನ್ಯ. ಆದರೆ, ಪಟ್ಟಣದ ಮಿನಿ ವಿಧಾನಸೌಧದ ಅಧಿಕಾರಿಗಳು ಇದಕ್ಕೆ ತದ್ವಿರುದ್ಧ ಎಂಬಂತಾಗಿದೆ.

ಇಲ್ಲಿನ ಮಿನಿ ವಿಧಾನಸೌಧದ ಒಳಾವರಣದಲ್ಲೇ ಕಸದ ರಾಶಿ ಬಿದ್ದಿದ್ದು ಕೊಠಡಿ ಕಿಟಕಿ ಪಕ್ಕದಲ್ಲೇ ಗೋಚರವಾಗುತ್ತಿದ್ದರೂ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಅಲ್ಲದೇ, ತಾಲೂಕು ಕಚೇರಿ ಆವರಣದ ಸುತ್ತಲೂ ಹುಲ್ಲು ಗಿಡ ಗಂಟಿಗಳು ಬೆಳೆದರೂ ತಮಗೆ ಸಂಬಂಧವೇ ಇಲ್ಲದಂತೆ ನಿರ್ಲಕ್ಷ್ಯಿಸುತ್ತಿದ್ದಾರೆ.

ಇದರಿಂದಾಗಿ ನಾಗರಿಕರು ಕಚೇರಿ ಒಳಗೆ ಬರಲು ಭಯದಿಂದಲೇ ಆಗಮಿಸಿ ತಮ್ಮ ತಮ್ಮ ಕೆಲಸ- ಕಾರ್ಯಗಳನ್ನು ಮುಗಿಸಿಕೊಂಡು ತೆರಳುತ್ತಿದ್ದಾರೆ. ಮಿನಿ ವಿಧಾನಸೌಧದಲ್ಲಿ ಜಮೀನಿನ ಪಹಣಿ ಪತ್ರ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನೀಡುವ ಜಾಗದಲ್ಲಿ ಅಪಾರ ಪ್ರಮಾಣದ ಹುಲ್ಲು ಗಿಡ ಬೆಳೆದು ನಿಂತಿವೆ. ಇದರ ಪಕ್ಕದಲ್ಲೇ ತ್ಯಾಜ್ಯ ಬಿದ್ದಿದೆ. ಉಪ ಖಜಾನೆ ಪಕ್ಕದ ಜಾಗವೂ ಕಸದ ತೊಟ್ಟಿಯಾಗಿದೆ.

ನೆಲ ಮಹಡಿಯಲ್ಲಿ ಮಳೆ ನೀರು: ಕಚೇರಿ ಸುತ್ತಲೂ ಇರುವ ಪ್ರದೇಶದಲ್ಲಿ ಗಿಡ, ಗಂಟಿಗಳು ಬೆಳೆದಿದ್ದು ಹಾವು, ಚೇಳು, ಹಲ್ಲಿಗಳು ಕಾಣಿಸಿಕೊಳ್ಳುತ್ತಿವೆ. ಸ್ವಲ್ಪ ಮಳೆ ಬಿದ್ದರೂ ಕಂದಾಯ ನಿರೀಕ್ಷಕರ ಕಚೇರಿ ಇರುವ ನೆಲ ಮಹಡಿಯಲ್ಲಿ ನೀರು ಮಡುಗಟ್ಟಿ ನಿಲ್ಲುತ್ತದೆ.

ಬೇಸರ: ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್‌ ಕಚೇರಿ ಮಾತ್ರವಲ್ಲದೆ ಉಪ ನೋಂದಣಿ, ಶಿಶು ಅಭಿವೃದ್ಧಿ ಇಲಾಖೆ, ಚುನಾವಣಾ ಶಾಖೆ, ಸರ್ವೆ ಇಲಾಖೆ, ಆಹಾರ ನಿರೀಕ್ಷಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೇರಿ 7-8 ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಪ್ರತಿ ದಿನ ನೂರಾರು ಮಂದಿ ತಮ್ಮ ಕೆಲಸಗಳಿಗೆ ಇಲ್ಲಿಗೆ ಬರುತ್ತಾರೆ. ಹಾಗೆಯೇ ಬರುವವರು ಅವ್ಯವಸ್ಥೆ ಕಂಡು ಬೇಸರ ಪಟ್ಟುಕೊಳ್ಳುತ್ತಿದ್ದಾರೆ.

ಕಾಲಿಡಲು ಆಗುತ್ತಿಲ್ಲ: ಕಳೆದ 10 ವರ್ಷಗಳ ಹಿಂದೆ 6 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಿಸಲಾಗಿದೆ. ಇತಿಹಾಸ ಪ್ರಸಿದ್ಧ ಶ್ರೀರಂಗಪಟ್ಟಣಕ್ಕೆ ಬರುವ ಪ್ರವಾಸಿಗರು, ಇತರೆ ಸಾರ್ವಜನಿಕರು ಹೊರ ನಿಂತು ನೋಡಿದರೆ ಭವ್ಯ ಕಟ್ಟಡದಂತೆ ಕಂಡರೂ ಒಳಗೆ ಕಸದ ರಾಶಿ ಬಿದ್ದಿದೆ. ಕಚೇರಿ ಹಿಂದೆ ಮತ್ತು ಎಡ ಬಲದಲ್ಲಿ ಕಾಲಿಡಲು ಆಗದಂತೆ ದಟ್ಟ ಪೊದೆಗಳು ಬೆಳೆದು ನಿಂತಿವೆ.

ಕುಳಿತುಕೊಳ್ಳಲು ಮಿನಿ ವಿಧಾನ ಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಕೂರುವ ಸ್ಥಿತಿ ಇದೆ. ಕೂಡಲೇ ತಹಶೀಲ್ದಾರರು ಕಚೇರಿ ಅವ್ಯವಸ್ಥೆ ಸರಿಪಡಿಸಬೇಕು, ಬರುವ ಸಾರ್ವಜನಿಕರಿಗೆ ಮೂಲ ಭೂತ ಸೌಕರ್ಯ ಒದಗಿಸಬೇಕು ಎಂದು ಕಸಾಪ ಮಾಜಿ ಕಾರ್ಯದರ್ಶಿ ಉಮಾಶಂಕರ್‌, ಪುರಸಭೆ ಸದಸ್ಯ ಎಂ.ನಂದೀಶ್‌, ಕರವೇ ಅಧ್ಯಕ್ಷ ಚಂದಗಾಲು ಶಂಕರ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.