ನಿರ್ವಹಣೆ ಕಾಣದ ಮಿನಿ ವಿಧಾನಸೌಧ


Team Udayavani, Oct 18, 2019, 4:12 PM IST

mandya-tdy-1

ಕೆ.ಆರ್‌.ಪೇಟೆ: ತಾಲೂಕಿನ ಶಕ್ತಿ ಕೇಂದ್ರವೇ ಆಗಿರುವ ಹತ್ತಾರು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಹಾಗೂ ಪ್ರತಿದಿನ ನೂರಾರು ಅಧಿಕಾರಿಗಳು ಮತ್ತು ಸಾವಿರಾರು ಸಾರ್ವಜನಿರು ತಮ್ಮತಮ್ಮ ಕೆಲಸಗಳಿಗಾಗಿ ಬಂದು ಹೋಗುವ ಮಿನಿ ವಿಧಾನಸೌಧ ಸೂಕ್ತ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯ ಗೂಡಾಗಿದೆ. ಕೇವಲ ಒಂದು ದಶಕಗಳ ಹಿಂದೆ ನಿರ್ಮಿಸಿರುವ ನಾಲ್ಕು ಮಹಡಿಯ ಶ್ವೇತವರ್ಣದ ಮಿನಿ ವಿಧಾನಸೌಧ ಮಳೆ ಬಂದರೆ ಸೋರುತ್ತದೆ. ಹತ್ತಾರು ತಹಶೀಲ್ದಾರ್‌ ರು ಬಂದು ಅದೇ ಸೋರುವ ಮಿನಿ ವಿಧಾನಸೌಧದಲ್ಲಿ ಅಧಿಕಾರ ನಡೆಸಿದರು. ವರ್ಗವಾದರು. ಆದರೆ ಯಾವ ತಹಶೀಲ್ದಾರ್‌ ಕೂಡ ಮಿನಿ ವಿಧಾನ ಸೌಧದ ದುರಸ್ತಿಗೆ ಮನಸ್ಸು ಮಾಡಲಿಲ್ಲ.

ಮಳೆ ಬಂದರೆ ಬಹುತೇಕ ಕೊಠಡಿಗಳು ಸೋರುವ ಜೊತೆಗೆ ಕೆಲವು ಕೊಠಡಿಗಳಲ್ಲಿ ನೀರು ತುಂಬಿಕೊಂಡು ವಿದ್ಯುತ್‌ ಶಾಕ್‌ ಹೊಡೆಯುವ ಆತಂಕವೂ ಉಂಟಾಗಿದೆ. ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಮಳೆ ಬಂದರೆ ನೀರು ಸೋರುವ ಸ್ಥಳಕ್ಕೆ ಬಕೆಟ್‌ ಇಡುವ ಜೊತೆಗೆ ವಿದ್ಯುತ್‌ ಶಾಕ್‌ ಹೊಡೆಯುವ ಭಯದಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವುದು ಸಾಮಾನ್ಯ ವಾಗಿದೆ. ಕಟ್ಟಡದ ನೆಲ ಮಹಡಿಯಲ್ಲಿ ಮಳೆ ಬಂದರೆ ನೀರಿನಲ್ಲೇ ಸಾರ್ವಜನಿಕರು ಓಡಾಡಬೇಕಿದೆ.

ಅವೈಜ್ಞಾನಿಕ ಕಟ್ಟಡ ನಿರ್ಮಾಣ: ಮಿನಿ ವಿಧಾನಸೌಧದ ಕಟ್ಟಡವನ್ನು 2007ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಉದ್ಘಾಟಿಸಿದ್ದರು. ಮಿನಿವಿಧಾನ ಸೌಧದಲ್ಲಿ ಹೊಸತರಲ್ಲಿ ಸ್ವಲ್ಪ ದಿನ ಚೆನ್ನಾಗಿಯೇ ಇತ್ತು. ಆಗಲೇ ಮಳೆಗಾಲದಲ್ಲಿ ಸೋರುವುದು ಗೋಚರಕ್ಕೆ ಬಂದಿತು. ಅದರಿಂದ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದು ತಿಳಿಯಿತು. ಹನ್ನೆರಡು ವರ್ಷಗಳಿಂದ ಒಮ್ಮೆಯೂ ಸುಣ್ಣಬಣ್ಣ ಕಾಣದ ಕಟ್ಟಡ ಬಿಸಿಲಿನಿಂದ ಒಣಗಿ ಕೆಲವೆಡೆಗಳಲ್ಲಿ ಮಳೆ ನೀರಿನಿಂದ ಗೋಡೆಯ ಮೇಲೆ ಪಾಚಿ ಕಟ್ಟಿಕೊಂಡಿದ್ದು ಬಳಿಬಣ್ಣ ಈಗ ಕಪ್ಪುಬಣ್ಣಕ್ಕೆ ತಿರುಗಿದೆ.

ಸ್ವಚ್ಛತೆಯೇ ಕಾಣದ ಕಚೇರಿ: ಮಿನಿ ವಿಧಾನಸೌಧದಲ್ಲಿ ಪ್ರತಿದಿನ ಕಸ ಗುಡಿಸದೆ ಅಲ್ಲಲ್ಲಿ ಕಸದ ರಾಶಿಗಳೇ ಬಿದ್ದಿವೆ. ಗೋಡೆಗಳಲ್ಲಿ ಜೇಡರ ಬಲೆಗಳು ಗೂಡು ಕಟ್ಟಿಕೊಂಡಿವೆ. ಸ್ವಚ್ಛತೆಗೆ ಇಲ್ಲಿ ಅರ್ಥವೇ ತಿಳಿದಿಲ್ಲ. ತಾಲೂಕನ್ನು ಅಭಿವೃದ್ಧಿ ಮಾಡಬೇಕಿರುವ ಮತ್ತು ಸ್ವತ್ಛತೆ ಕಾಪಾಡಬೇಕಾದ ಇತರರಿಗೆ ಮಾದರಿಯಾಗ ಬೇಕಿರುವ ತಾಲೂಕು ಆಡಳಿತ ಕಚೇರಿಯಲ್ಲೇ ಸೂಕ್ತ ನಿರ್ವಹಣೆ ಮಾಡದಿರುವುದು ವಿಪರ್ಯಾಸ.

ಹತ್ತಕ್ಕೂ ಹೆಚ್ಚು ಕಚೇರಿಗಳು: ಮಿನಿ ವಿಧಾನಸೌಧದಲ್ಲಿ ಕೇವಲ ತಾಲೂಕು ಕಚೇರಿ ಮಾತ್ರ ಇಲ್ಲ. ಇದರ ಜೊತೆಗೆ ತಾಲೂಕು ಖಜಾನೆ ಇಲಾಖೆ, ರೇಷ್ಮೆ, ಭೂ ಮಾಪನಾ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಡಾ.ಬಿ.ಆರ್‌.ಅಂಬೇಡ್ಕರ್‌ ನಿಗಮ, ತಾಲೂಕು ಕಾನೂನು ಸೇವಾ ಸಮಿತಿ ಸೇರಿದಂತೆ ಹತ್ತಾರು ಇಲಾಖೆ ಕಚೇರಿಗಳೂ ಕಾರ್ಯನಿರ್ವಹಿಸುತ್ತಿವೆ. ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಅವರಿಗೆ ಕಚೇರಿ ಸ್ವತ್ಛತೆ, ನಿರ್ವಹಣೆ ಬಗ್ಗೆ ಕಿಂಚತ್ತು ಕಾಳಜಿ ಇಲ್ಲವೆನ್ನಲು ಇಲ್ಲಿನ ಅವ್ಯವಸ್ಥೆಗಳಿಗಿಂತ ಮತ್ತೂಂದು ನಿದರ್ಶನ ಬೇಕಿಲ್ಲ. ಪರಿಸರ ಪ್ರೇಮಿ ಮಿನಿ ವಿಧಾನಸೌಧ: ರಸ್ತೆಗಳು, ಮನೆಯಂಗಳ, ಶಾಲಾ ಆವರಣ, ಸರ್ಕಾರಿ ಕಚೇರಿಗಳ ಆವರಣದಲ್ಲಿ ಸಸಿ ನೆಟ್ಟು ಪರಿಸರ ಸಂರಕ್ಷಣೆ ದಿನಾಚರಣೆ ಆಯೋಜಿಸಿ ಪರಿಸರ ಕುರಿತು ಜನಜಾಗೃತಿ ಮೂಡಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಾಲೂಕಿನ ಮುಖ್ಯ ಕೇಂದ್ರ ಬಿಂದು, ಆಡಳಿತ ನಿರ್ವಹಿಸುವ ಮಿನಿ ವಿಧಾನಸೌಧದಲ್ಲೇ ಈ ರೀತಿಯ ಅವ್ಯವಸ್ಥೆಗಳಿದ್ದರೆ, ಆಡಳಿತ ನಿರ್ವಹಣೆ ಎಷ್ಟರ ಮಟ್ಟಿಗೆ ನಡೆಯುತ್ತಿರುಬಹುದು ಎಂಬ ಅನುಮಾನ ಮೂಡಿಸುವಂತಾಗಿದೆ.

ಕಟ್ಟಡ ಸೋರುತ್ತಿರುವ ಬಗ್ಗೆ ನನ್ನ ಗಮನಕ್ಕೂ ಬಂದಿದೆ. ಈಗಾಗಲೇ ಲೋಕೋಪಯೋಗಿ ಇಲಾಖೆ ಮೂಲಕ ಕಟ್ಟಡ ದುರಸ್ತಿ, ಬಣ್ಣ ಬಳಿಸಲು ಮತ್ತು ಕಚೇರಿ ಆವರಣಕ್ಕೆ ಸುತ್ತಲೂ ಕಾಂಪೌಂಡ್‌ ನಿರ್ಮಾಣಕ್ಕೆ 39 ಲಕ್ಷ ರೂ. ವೆಚ್ಚದ ಅಂದಾಜು ಪಟ್ಟಿ ಸಿದ್ದಪಡಿಸಿ ವರದಿ ಕಳುಹಿಸಲಾಗಿದೆ. ಮೊದಲಿಗೆ ಕಟ್ಟಡ ದುರಸ್ತಿ, ಸ್ವತ್ಛತೆ ಹೀಗೆ ಹಂತಹಂತವಾಗಿ ಮಿನಿ ವಿಧಾನಸೌಧದ ಸೂಕ್ತ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತೇನೆ. ಎಂ.ಶಿವಮೂರ್ತಿ, ತಹಶೀಲ್ದಾರ್‌

 

-ಎಚ್‌.ಬಿ.ಮಂಜುನಾಥ್‌

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.