![court](https://www.udayavani.com/wp-content/uploads/2024/07/court-7-415x231.jpg)
ಕಾಂಗ್ರೇಸ್, ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
Team Udayavani, Sep 24, 2020, 4:32 PM IST
![ಕಾಂಗ್ರೇಸ್, ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ](https://www.udayavani.com/wp-content/uploads/2020/09/mandya-tdy-2-17-620x372.jpg)
ಮಳವಳ್ಳಿ: ಸೆ.30ರಂದು ನಡೆಯಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಪಟ್ಟಣದ ಟಿಎಪಿಸಿಎಂಎಸ್ ಕಚೇರಿಯಲ್ಲಿ ಚುನಾವಣಾಧಿಕಾರಿ ತಹಶೀಲ್ದಾರ್ ಕೆ.ಚಂದ್ರಮೌಳಿ ಅವರಿಗೆ ಕಾಂಗ್ರೆಸ್ ಬೆಂಬ ಲಿತ ಅಭ್ಯರ್ಥಿಗಳಾಗಿ “ಎ’ ದರ್ಜೆ ವಿಭಾಗದಿಂದ ಹಿಟ್ಟನಹಳ್ಳಿ ಎಚ್.ಬಿ.ಬಸವೇಶ್, ಚೊಟ್ಟನಹಳ್ಳಿ ಬಸವರಾಜು,ಕಲ್ಕುಣಿ ಕೆ.ಜೆ. ದೇವರಾಜು, ಉಪ್ಪನಹಳ್ಳಿ ಸುಂದ್ರಪ್ಪ, ಕೆಂಬೂತಗೆರೆ ದ್ಯಾಪೇ ಗೌಡ, ಮೋಳೆದೊಡ್ಡಿ ಲಿಂಗರಾಜು ಹಾಗೂ “ಬಿ’ ದರ್ಜೆ ವಿಭಾಗ ದಿಂದ ಕಿರುಗಾವಲು ಕ್ಷೇತ್ರದಿಂದ ತಳಗವಾದಿ ಚೌಡಯ್ಯ, ಶಕುಂತಲಾ ಮಲ್ಲಿಕ್, ಕಾಗೇಪುರ ಪ್ರಕಾಶ್, ಕಸಬಾ ಕ್ಷೇತ್ರದಿಂದ ಕಂದೇಗಾಲ ಕುಳ್ಳಚೆನ್ನಯ್ಯ, ವಡ್ಡರಹಳ್ಳಿ ಸವಿತ, ಬಿಜಿಪುರ ಕ್ಷೇತ್ರದಿಂದಕುಮಾರ್ ನಾಮಪತ್ರ ಸಲ್ಲಿಸಿದರು.
ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಸುಂದರ್ರಾಜ್ ಮಾತನಾಡಿ, ಟಿಎಪಿಸಿಎಂಎಸ್ಯಲ್ಲಿ ಕಳೆದ ಬಾರಿ ಅಧಿಕಾರ ಹಿಡಿದಂತೆ ಈ ಬಾರಿಯೂ ಮುಖಂಡರ ಸಹಕಾರದಿಂದ ಕಾಂಗ್ರೆಸ್ ಪಕ್ಷದ ಅಧಿಕಾರಕ್ಕೆ ಬರಲಿದೆ ಎಂದರು. ಜಿಪಂ ಸದಸ್ಯೆ ಸುಜಾತ ಕೆ.ಎಂ.ಪುಟ್ಟು, ತಾಪಂ ಸದಸ್ಯರಾದ ವಿ.ಪಿ.ನಾಗೇಶ್, ಸುಂದರೇಶ್, ವಿಶ್ವಾಸ್, ದೊಡ್ಡಯ್ಯ, ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಮುಖಂಡರಾದ ನರೇಂದ್ರ ಕೆ.ಎಂ.ಪುಟ್ಟು, ಚೌಡಪ್ಪ, ಡಿ.ಸಿ.ಚೌಡೇಗೌಡ, ಗಂಗಾಧರ್, ದೀಲಿಪ್ಕುಮಾರ್, ಶಾಂತರಾಜು ಇದ್ದರು.
ಬಿಜೆಪಿಯಿಂದ ಸ್ಪರ್ಧೆ: ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಎಂ.ಎನ್.ಕೃಷ್ಣ ನೇತೃತ್ವದಲ್ಲಿ ಕಿರುಗಾವಲು ಕ್ಷೇತ್ರದಿಂದ ಶೆಟ್ಟಹಳ್ಳಿ ಶ್ರೀನಿವಾಸ್ ಮತ್ತು ಬಿಜಿಪುರಕ್ಷೇತ್ರದಿಂದ ಸಿದ್ದರಾಜು ನಾಮಪತ್ರ ಸಲ್ಲಿಸಿದರು.
ಬಿಜೆಪಿ ಪ್ರಬಲ: ತಾಲೂಕು ಘಟಕದ ಅಧ್ಯಕ್ಷ ಎಂ.ಎನ್.ಕೃಷ್ಣ ಮಾತನಾಡಿ, ತಾಲೂಕಿನಲ್ಲಿ ಬಿಜೆಪಿ ಪಕ್ಷ ಸಾಕಷ್ಟು ಪ್ರಬಲವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸ್ಪರ್ಧೆ ಮಾಡುತ್ತಿದ್ದು, ಟಿಎಪಿಸಿಎಂಎಸ್ ಚುನಾವಣಾ ಇತಿಹಾಸದಲ್ಲಿ ಇದುವರೆಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿರಲಿಲ್ಲ. ಈ ಬಾರಿ ಸ್ಪರ್ಧೆ ಮಾಡಿದ್ದು, ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು. ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಹೆಬ್ಬಣಿ ಬಸವರಾಜು, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗೇಗೌಡ, ಮುಖಂಡರಾದ ಕಾಂತರಾಜು, ಶಿವಲಿಂಗೇಗೌಡ ಹಾಜರಿದ್ದರು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.