ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ
Team Udayavani, Jul 29, 2019, 5:31 AM IST
ನಾಗಮಂಗಲ: ‘ನಾನು ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯವರೆಗೂ ಯಾವುದೇ ಉಪಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ’ ಎಂದು ಮಾಜಿ ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಯಡಿಯೂರಪ್ಪ ನವರು ಬಹುಮತ ಸಾಬೀತು ಪಡಿಸುವ ಮೂಲಕ ಸೋಮವಾರ ವಿಶ್ವಾಸಮತವನ್ನು ಗೆಲ್ಲವುದು ನೂರಕ್ಕೆ ನೂರು ಸತ್ಯ ಎಂದರು. ರಾಜಕಾರಣ ದಲ್ಲಿ ಅಧಿಕಾರಗಳು ಸಿಗುವುದೇ ವಿರಳ. ಅದರಲ್ಲೂ ಸಂಪೂರ್ಣ ಅವಧಿ ಅಧಿಕಾರ ನಡೆಸುವ ಎಲ್ಲಾ ಅವಕಾಶಗಳಿದ್ದರೂ ಸುಲಭವಾಗಿ ಬಿಟ್ಟು ಬರುವಂತಹ ಕುಟುಂಬ ಯಾವುದಾದರೂ ಇದ್ದರೆ ಅದು ದೇವೇಗೌಡರ ಕುಟುಂಬ.
ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿಯೂ ಇದೇ ರೀತಿ ಯಾಗಿದೆ. ಕಳೆದ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗಲೂ ಹೀಗೆಯೇ ಆಗಿತ್ತು. ಈಗಲೂ ಹೀಗೆಯೇ ಆಗಿದೆ. ಅದು ದೈವ ತೀರ್ಮಾನವೋ ಅಥವಾ ಅವರೇ ಹೊರ ಬರುತ್ತಾರೋ ಗೊತ್ತಿಲ್ಲ. ಕುಮಾರಸ್ವಾಮಿಯವರು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ. ಇನ್ನಷ್ಟು ದಿನ ಅವರು ಆಡಳಿತ ನಡೆಸಿದ್ದರೆ ಸಂತೋಷಪಡುತ್ತಿದ್ದೆ. ನಾವು ಎಲ್ಲಿಯೂ ಸರ್ಕಾರ ಬೀಳಲಿ ಎಂದು ಹೇಳಿಲ್ಲ. ಸರ್ಕಾರದಿಂದಾಗುತ್ತಿದ್ದ ಲೋಪಗಳನ್ನು ತಿಳಿಸುತ್ತಿದ್ದೆ. ಸರ್ಕಾರ ಬೀಳುವುದರಿಂದ ನಮಗೇನೂ ಖುಷಿಯಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ