ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ

ಕಲ್ಲು ಗಣಿಗಾರಿಕೆ ಸ್ಥಳಗಳಿಗೆ ಸಚಿವ ಪಾಟೀಲ್‌ ಭೇಟಿ „ ಮೂರು ತಿಂಗಳೊಳಗೆ ಡ್ರೋನ್‌ ಸರ್ವೆ

Team Udayavani, Jan 3, 2021, 1:57 PM IST

ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಗಣಿ ಇಲಾಖೆ, ಪೊಲೀಸ್‌ ಇಲಾಖೆ ಸೇರಿದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ್‌ ಹೇಳಿದರು.

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು, ಕಾಳೇನಹಳ್ಳಿ, ಚನ್ನನಕೆರೆ, ಹಂಗರಹಳ್ಳಿಗ್ರಾಮಗಳ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಸ್ಥಳಗಳಿಗೆ ಭೇಟಿ ನೀಡಿದ್ದು, ಅಕ್ರಮ ಗಣಿಗಾರಿಕೆನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗಿದೆಎಂದು ಕೆಆರ್‌ಎಸ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ದಂಡ ಕಟ್ಟದಿದ್ದರೆ ವಿದ್ಯುತ್‌ ಕಡಿತ: ಅಕ್ರಮ ಗಣಿಗಾರಿಕೆ ಮಾಡುತ್ತಿರುವವರಿಗೆ ದಂಡ ವಿಧಿಸಿದ್ದು, ದಂಡ ಕಟ್ಟದಿದ್ದರೆ ವಿದ್ಯುತ್‌ ಕಡಿತ ಮಾಡುವಂತೆಸೂಚನೆ ನೀಡಲಾಗಿದೆ. ಅದರಂತೆ ರಾಜಧನ ಹೆಚ್ಚಿಸಿ,ಗಣಿಗಾರಿಕೆಗೆ ಅನುಮತಿ ನೀಡಲಾಗುವುದು. ಇದರಜತೆಗೆ ಅಕ್ರಮವಾಗಿ ಕಲ್ಲು ಗಣಿಗಾರಿಕೆನಡೆಸುತ್ತಿರುವವರಿಗೆ ದಂಡ ಹಾಗೂ ರಾಜಧನ ಪಾವತಿ ಮಾಡುವಂತೆ ಸೂಚಿಸ ಲಾಗುವುದು. ಈಗಾಗಲೇಚನ್ನನಕೆರೆ ಗ್ರಾಮದ ಬಳಿರಾಮದೇವ್‌ ಎಂಬ ಗಣಿಮಾಲೀಕ ರಾಜಧನ ಪಾವತಿಸಿಲ್ಲ. ಆತನ ಪರವಾನಗಿ ಜಪ್ತಿಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕಾಲಾವಕಾಶ ನಿಗದಿ: ಅಕ್ರಮ ಕಲ್ಲು ಗಣಿಗಾರಿಕೆನಡೆಸುತ್ತಿರುವವರಿಗೆ ದಂಡ ಹಾಗೂ ರಾಜಧನ ಪಾವತಿಸಿಕಾನೂನು ಚೌಕಟ್ಟಿನಲ್ಲಿ ಕಲ್ಲು ಗಣಿಗಾರಿಕೆನಡೆಸಲು ಅನುಮತಿ ಪಡೆಯಲು ಕಾಲಾವಕಾಶನೀಡಲಾಗುವುದು. ಕಡ್ಡಾಯವಾಗಿ ನಿಯಮಗಳನ್ನುಪಾಲಿಸಬೇಕು. ಸುತ್ತಮುತ್ತಲಿನ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕೃಷಿ ಚಟುವಟಿಕೆಗಳಿಗೆ ಹಾನಿಯಾಗದಂತೆ ಗಣಿಗಾರಿಕೆ ನಡೆಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.

134 ಗಣಿಗಾರಿಕೆಗೆ ಅನುಮತಿ ಸಮಸ್ಯೆ ಇತ್ಯರ್ಥ: 2012ರಿಂದ ಹಂಗರಹಳ್ಳಿ ಹಾಗೂ ಮುಂಡಗದೊರೆಗ್ರಾಮಗಳ ಬಳಿ ಅರಣ್ಯ ಮತ್ತು ಗಣಿ ಇಲಾಖೆ ನಡುವೆಗಡಿ ನಿಗದಿಯಲ್ಲಿ ತಾಂತ್ರಿಕ ಕಾರಣಗಳಿಂದ 134ಗಣಿಗಾರಿಕೆಗೆ ಅನುಮತಿ ವಿಳಂಬವಾಗಿತ್ತು. ಅದನ್ನುಶೀಘ್ರವೇ ಇತ್ಯರ್ಥಪಡಿಸಲು ಸರ್ವೆ ನಡೆಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದಂಡಹಾಗೂ ರಾಜಧನ ಪಾವತಿಸದೇ ನಡೆಸುವಗಣಿಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳದ ಅಧಿಕಾರಿಗಳವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಮೂರು ತಿಂಗಳೊಳಗೆ ಸರ್ವೆ: ಕೆಆರ್‌ಎಸ್‌ ಜಲಾಶಯದ ವ್ಯಾಪ್ತಿಯಲ್ಲಿ ಬೇಬಿಬೆಟ್ಟ ಸೇರಿದಂತೆಸುತ್ತಮುತ್ತ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆಡ್ರೋನ್‌ ಸರ್ವೆ ನಡೆಸಲಾಗುವುದು. ಡ್ಯಾಂನಿಂದಎಷ್ಟು ದೂರ ಗಣಿಗಾರಿಕೆ ನಡೆಸಬಹುದು. ಇದರಿಂದ ಜಲಾಶಯಕ್ಕೆ ಆಗುವ ತೊಂದರೆ ಬಗ್ಗೆ ಕೂಲಂಕುಷವಾಗಿ ಸರ್ವೆ ನಡೆಸಿ ವರದಿ ನೀಡುವಂತೆ ಖಾಸಗಿಏಜೆನ್ಸಿಗೆ ನೀಡಲಾಗಿದೆ. ಮೂರು ತಿಂಗಳೊಳಗೆ ವರದಿಬರಲಿದ್ದು, ಅದರ ಆಧಾರದ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಕೆ.ಸಿ.ನಾರಾಯಣಗೌಡ, ಡೀಸಿ ಡಾ. ಎಂ.ವಿ.ವೆಂಕಟೇಶ್‌, ಜಿಪಂ ಸಿಇಒ ಎಸ್‌.ಎಂ.ಜುಲ್‌ ಫಿಖಾರ್‌ ಉಲ್ಲಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಪುಷ್ಪಾ, ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್‌ ರೂಪ ಹಾಜರಿದ್ದರು.

ರಾಜಧನ ಹೆಚ್ಚಳಕ್ಕೆ ಸೂಚನೆ :  ಜಿಲ್ಲೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆಗಳಿಗೆ ರಾಜಧನ ಹೆಚ್ಚಿಸಿ ಪಾವತಿಸುವಂತೆ ಸೂಚಿಸಬೇಕು ಎಂದು ಸಚಿವ ಸಿ.ಸಿ.ಪಾಟೀಲ್‌ ಅಧಿಕಾರಿಗಳಿಗೆ ತಿಳಿಸಿದರು. ಅಕ್ರಮವಾಗಿ ನಡೆಯುತ್ತಿರುವುದರಿಂದ ಸರ್ಕಾರಕ್ಕೆಯಾವುದೇ ಆದಾಯವಿಲ್ಲ. ಆದ್ದರಿಂದ ತಾಲೂಕು ಆಡಳಿತ, ಗಣಿ ಹಾಗೂ ಪೊಲೀಸ್‌ ಅಧಿಕಾರಿಗಳಿಗೆ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡು ಅವರಿಗೆ ನೋಟಿಸ್‌ನೀಡಬೇಕು. ಅಲ್ಲದೆ, ರಾಜಧನ ಹೆಚ್ಚಳ ಮಾಡಿ ವಸೂಲಿ ಮಾಡಬೇಕು ಎಂದರು.

ಸ್ತಬ್ಧವಾಗಿದ್ದ ಗಣಿ ಯಂತ್ರಗಳು: ಸಚಿವ ಸಿ.ಸಿ.ಪಾಟೀಲ್‌ ಗಣಿಗಾರಿಕೆ ಪ್ರದೇಶಕ್ಕೆ ಆಗಮಿಸುತ್ತಿರುವ ವಿಷಯ ಮುಂಚಿತವಾಗಿ ಗಣಿ ಮಾಲೀಕರಿಗೆ ತಿಳಿದಿದ್ದರಿಂದಎಲ್ಲ ಗಣಿ ಚಟುವಟಿಕೆಗಳನ್ನು ನಿಲ್ಲಿಸಲಾಗಿತ್ತು. ಇದರಿಂದ ಗಣಿ ಪ್ರದೇಶ ಸ್ತಬ್ಧವಾಗಿತ್ತು. ಅಲ್ಲದೆ, ಭಾಗದಲ್ಲಿ ನಿತ್ಯ ನೂರಾರು ಟಿಪ್ಪರ್‌, ಲಾರಿಗಳು ಸಂಚರಿಸುತ್ತಿದ್ದವು.ಆದರೆ, ಶನಿವಾರ ಸಚಿವರು ಬರುವ ವಿಚಾರ ತಿಳಿದಿದ್ದರಿಂದ ಟಿಪ್ಪರ್‌, ಲಾರಿಗಳುಆರ್ಭ ಟಿಸದೆ ಮೌನವಾಗಿ ಸಾಲಾಗಿ ಒಂದೆಡೆ ನಿಂತಿದ್ದ ದೃಶ್ಯಗಳು ಕಂಡು ಬಂದವು.ಅಲ್ಲದೆ, ಗಣಿ ಗಾರಿಕೆ ನಡೆಯುತ್ತಿತ್ತು ಎಂಬುದಕ್ಕೆ ಕೆಲವು ಕಲ್ಲು ಕೊರೆಯುವಯಂತ್ರಗಳು ಸೇರಿದಂತೆ ವಿವಿಧ ಯಂತ್ರೋಪಕರಣಗಳು ಸ್ಥಳದಲ್ಲಿಯೇ ಇದ್ದವು. ಆದರೆ ಕಾರ್ಮಿಕರು ಮಾತ್ರ ನಾಪತ್ತೆಯಾಗಿದ್ದರು.

ಗಣಿ ಮಾಲೀಕರಿಂದ ಸಚಿವರಿಗೆ ಸನ್ಮಾನ : ಟಿ.ಎಂ.ಹೊಸೂರು ಗೇಟ್‌ಗೆ ಬರುತ್ತಿದ್ದಂತೆತಾಲೂಕು ಆಡಳಿತದಿಂದ ತಹಶೀಲ್ದಾರ್‌ ರೂಪಸಚಿವರನ್ನು ಸ್ವಾಗತಿಸಿದರು. ನಂತರ ಸ್ವಲ್ಪದೂರದಲ್ಲಿಯೇ ಗಣಿ ಮಾಲೀಕರಅಸೋಸಿಯೇಷನ್‌ ವತಿಯಿಂದ ಗಣಿ ಮಾಲೀಕರು ಅಭಿನಂದಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.