ಮರ ಕಡಿಯದೆ ಸಸಿ ನೆಟ್ಟು ಪೋಷಿಸಿ

ನ್ಯಾಯಾಲಯ ಆವರಣದಲ್ಲಿ ಭೂ ಸಂರಕ್ಷಣಾ ದಿನ • ನೈಸರ್ಗಿಕ ಸಂಪತ್ತು ಉಳಿಸಿ

Team Udayavani, Apr 25, 2019, 2:46 PM IST

mandya-4-tdy-..

ಶ್ರೀರಂಗಪಟ್ಟಣ: ಮಾನವ ಸ್ವಾರ್ಥಕ್ಕಾಗಿ ನೈಸರ್ಗಿಕ ಸಂಪತ್ತು ಬಳಸಿಕೊಂಡು ಅರಣ್ಯ ನಾಶ ಮಾಡುವುದರಿಂದ ಪ್ರಕೃತಿ ವಿಕೋಪಗಳು ಸಂಭವಿಸಲು ಪ್ರಮುಖ ಕಾರಣ ಎಂದು 3ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಧೀಶ ಕಸನಪ್ಪ ನಾಯಕ್‌ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಆಯೋಜಿಸಿದ್ದ ಭೂ ಸಂರಕ್ಷಣಾ ದಿನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭೂಮಿಯಲ್ಲಿರುವ ನೈಸರ್ಗಿಕ ಸಂಪತ್ತನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡು ಪರಿಸರ ಹಾಳು ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಕಾಡು ನಾಶ ಮಾಡುವುದರಿಂದ ಪರಿಸರ ನಾಶವಾಗಿ ಅಕಾಲಿಕ ಮಳೆ, ಮಳೆ ಪ್ರಮಾಣ ಕುಸಿತ ಮತ್ತಿತರೆ ವಿಕೋಪಗಳು ಸಂಭವಿಸುತ್ತಿವೆ ಎಂದು ಹೇಳಿದರು.

ನೈಸರ್ಗಿಕ ಸಂಪತ್ತು ಉಳಿಸಿ: ಭೂಮಿ ಮೇಲೆ ಶುದ್ಧ ನೀರು, ಗಾಳಿ, ಬೆಳಕು ಮನುಷ್ಯನಿಗೆ ಸಮರ್ಪಕವಾಗಿ ದೊರೆಯದೆ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಮುಂದಿನ ಪೀಳಿಗೆಯೂ ಆರೋಗ್ಯವಾಗಿ ಬದುಕಬೇಕೆಂದರೆ, ಮಾನವ ದುರಾಸೆ ಬಿಟ್ಟು ಭೂಮಿಯಲ್ಲಿರುವ ನೈಸರ್ಗಿಕ ಸಂಪತ್ತು ಲೂಟಿ ಮಾಡದೆ ಸಂರಕ್ಷಣೆ ಮಾಡಬೇಕು. ಈಗಾಗಲೇ ಕುಡಿಯುವ ನೀರಿಗೆ ಪರದಾಟ, ಮಳೆ ಇಲ್ಲದೆ ಬರಗಾಲ, ಕೃಷಿ ಮಾಡಲಾಗದೆ ವಲಸೆ ಹೋಗುವ ಪರಿಸ್ಥಿತಿ ಏರ್ಪಟ್ಟಿದೆ. ಈಗಲಾದರೂ ಮಾನವ ಎಚ್ಚೆತ್ತುಕೊಂಡು ಮುಂದಿನ ಪೀಳಿಗೆಗೆ ಪರಿಸರ, ಜಲ ಸಂರಕ್ಷಣೆ ಮಾಡಿ ಭೂಮಿಯ ಒಡಲು ತಂಪಾಗಿಡುವ ಕಾರ್ಯಚಟುವಟಿಕೆಗಳು ಹಮ್ಮಿಕೊಳ್ಳಬೇಕಿದೆ.

ಸಸಿ ನೆಟ್ಟು ಪೋಷಿಸಿ: ತಾಪಮಾನ ಹೆಚ್ಚಳದಿಂದ ಭೂಮಿ ಮತ್ತು ಮಾನವನ ಆರೋಗ್ಯ ಕೆಡುತ್ತಿದೆ. ಈಗಾಗಲೇ ಸ್ವಯಂಕೃತ ಅಪರಾಧಗಳಿಮದ ಕಾಡು ಕಡಿದು ನಾಶ ಮಾಡಲಾಗಿದೆ. ಪರಿಸರ ಸಂರಕ್ಷಣೆ ಎಂದರೆ ಕಾಡು ಮಾತ್ರ ಬೆಳೆಸುವುದಷ್ಟೇ ಅಲ್ಲ. ಮನೆ ಸುತ್ತಮುತ್ತ, ಹೊಲಗದ್ದೆಗಳ ಬಳಿ, ಖಾಲಿ ಇರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಸಸಿ ನೆಟ್ಟು, ಪೋಷಣೆ ಮಾಡಿ ಗಿಡಮರಗಳ ಬೆಳೆಸಲು ಮುಂದಾಗಬೇಕು. ಮರಗಳು ಹೇರಳವಾಗಿದ್ದರೆ ಮಾತ್ರ ಭೂಮಿಯ ಒಡಲು ತಂಪಾಗಿರುತ್ತದೆ. ಉತ್ತಮ ಗಾಳಿ, ಶುದ್ಧ ನೀರು, ಉತ್ತಮ ಮಳೆಯಾದರೆ ಮನುಷ್ಯನ ಆರೋಗ್ಯವೂ ಕಾಪಾಡಬಹುದು ಎಂದು ಸಲಹೆ ನೀಡಿದರು.

ಮರ ಕಡಿಯಬೇಡಿ: ವಕೀಲ ನಿಂಗೇಗೌಡ ಮಾತನಾಡಿ, ನಮ್ಮ ಸುತ್ತಮುತ್ತಲ ಬೆಟ್ಟಗುಡ್ಡಗಳನ್ನು ಕೊರೆಯುವುದು, ಅರಣ್ಯ ಸಂಪತ್ತು ನಾಶ ಮಾಡುವುದು, ರಸ್ತೆ ಬದಿ ಮರಗಳ ಮಾರಣ ಹೋಮ, ಸುಸಜ್ಜಿತ ನಾಡು ಕಟ್ಟಲು ನೈಸರ್ಗಿಕ ಸಂಪತ್ತು ಲೂಟಿ ಮಾಡಲಾಗುತ್ತಿದೆ. ಹೈಟೆಕ್‌ ಹೆಸರಲ್ಲಿ ಶತಮಾನದ ಮರಗಳನ್ನು ಉರುಳಿಸಿ ಧ್ವಂಸ ಮಾಡಿ ರಸ್ತೆ ಹಾಕುವ ಕೆಲಸಗಳು ನಡೆಯುತ್ತಿವೆ. ಈಗಾಗಲೇ ಮಳೆ ಇಲ್ಲದೆ, ಸಕಾಲದಲ್ಲಿ ಬೆಳೆಗಳು ಕೈಗೆಟುಕದೆ, ಕುಡಿಯಲು ನೀರಿಲ್ಲದೆ ಅನೇಕ ದೈನಂದಿನ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈಗಲಾದರೂ ಎಚ್ಚೆತ್ತು ನೈಸರ್ಗಿಕ ಸಂಪತ್ತು ಸಂರಕ್ಷಿಸುವತ್ತ ಗಮನಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾ ಧೀಶರಾದ ವೀರಣ್ಣ ಸೋಮಶೇಖರ್‌, ಪರಮೇಶ್ವರ್‌, ಅರುಣ್‌ ಕುಮಾರ್‌ ಮಾತ ನಾಡಿದರು. ಆಯುಷಾ ಬಿ.ಪಿ.ಮಜೀದ್‌, ತಹಶೀಲ್ದಾರ್‌ ನಾಗಪ್ರಶಾಂತ್‌, ವಕೀಲರ ಸಂಘದ ಅಧ್ಯಕ್ಷ ಸುಬ್ರಮಣ್ಯ, ಉಪಾಧ್ಯಕ್ಷ ಸೋಮು, ಕಾರ್ಯದರ್ಶಿ ಜಯಕುಮಾರ್‌ ಮತ್ತಿತತರರು ಭಾಗವಹಿಸಿದ್ದರು.

 

ಈಗಾಗಲೇ ನೀರಿಗಾಗಿ ಅಲೆದಾಟ ಶುರು:

ಈಗಾಗಲೇ ಅಂತರ್ಜಲ ಬತ್ತಿ ಹೋಗಿದೆ. ಕೊಳವೆ ಬಾವಿಗಳು ಎಷ್ಟು ಅಡಿಗಳ ಆಳಕ್ಕೆ ಕೊರೆದರೂ ನೀರು ಬರುತ್ತಿಲ್ಲ. ನೀರಿಗಾಗಿ ಬಿಂದಿಗೆ ಹಿಡಿದು ನಾಗರೀಕರು ಕಿಲೋಮೀಟರ್‌ಗಟ್ಟಲೆ ಅಲೆದಾಡುತ್ತಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ ಎಂದು ವಕೀಲ ನಿಂಗೇಗೌಡ ಆತಂಕ ವ್ಯಕ್ತಪಡಿಸಿದರು. ರೈತರು ನೈಸರ್ಗಿಕ ಗೊಬ್ಬರ ಬಳಸದೆ ರಾಸಾಯಿನಿಕ ಗೊಬ್ಬರ ಬಳಸುವುದರಿಂದ ನೀರು ವಿಷವಾಗುತ್ತಿದೆ. ಶುದ್ಧ ನೀರು ಸಿಗದೆ, ಶುದ್ಧೀಕರಣ ಮಾಡಿ ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಗ್ರಾಮಗಳಲ್ಲಿ ಬದುಕನ್ನು ಅರಸಿ ನಗರಪಟ್ಟಣಗಳತ್ತ ವಲಸೆ ಹೋಗುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದೆ ಜನಜೀವನ ಸಂಕಷ್ಟ ಎದುರಿಸಬೇಕಾಗಲಿದೆ. ಈಗಲಾದರೂ ಮನುಷ್ಯ ಎಚ್ಚೆತ್ತು ಮರಗಿಡ ಬೆಳೆಸಬೇಕು. ಕಾಡು ನಾಶ ಮಾಡದೆ, ಹೆಚ್ಚಿನ ಸಸಿ ನೆಟ್ಟು ಪರಿಸರ ಕಾಪಾಡಬೇಕು ಎಂದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.