ಅಧಿಕಾರಿಗಳಿಂದ ಕಡತ ನಾಪತ್ತೆ ಹೈಡ್ರಾಮ: ಆರೋಪ

ನಿವೇಶನ ರಹಿತರಿಗೆ ಭೂಮಿ ಮಂಜೂರು ಮಾಡದಿದ್ದರೆ ಅ.12ರಿಂದ ಧರಣಿ: ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ್‌

Team Udayavani, Oct 10, 2020, 3:20 PM IST

ಅಧಿಕಾರಿಗಳಿಂದ ಕಡತ ನಾಪತ್ತೆ ಹೈಡ್ರಾಮ: ಆರೋಪ

ಮಂಡ್ಯ: ತಾಲೂಕು ಕಚೇರಿಯಲ್ಲಿ ಬೂದನೂರು ನಿವೇಶನ ರಹಿತರಿಗೆಭೂಮಿ ಮಂಜೂರು ಮಾಡುವ ಸಂಬಂಧದ ಕಡತಗಳನ್ನೇ ಅಧಿಕಾರಿ ಗಳು ಬಚ್ಚಿಟ್ಟು ಕಳೆದು ಹೋಗಿದೆ ಎನ್ನುತ್ತಿದ್ದಾರೆ ಎಂದು ಬೂದನೂರು ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ್‌ ಗಂಭೀರ ಆರೋಪ ಮಾಡಿದರು.

ಜಿಲ್ಲಾಧಿಕಾರಿ ಕಚೇರಿಗೆ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತರಿಗೆ ಗುರುತಿಸಿರುವ ಭೂಮಿ ಸಂಬಂಧ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಲಾಗಿತ್ತು. ಜಿಲ್ಲಾಧಿಕಾರಿ ಅವರುತಾಲ್ಲೂಕು ಕಚೇರಿಯಿಂದ ಮಾಹಿತಿ ಪಡೆಯಿರಿ ಎಂದು ಪತ್ರ ಬರೆದು ತಿಳಿಸಿದ ಮೇರೆಗೆ ತಾಲ್ಲೂಕುಕಚೇರಿಗೆ ತೆರಳಿ ವಿಚಾರಿಸಿದಾಗ ಅಧಿಕಾರಿ ಗಳು ಕಡತಗಳು ನಾಪತ್ತೆಯಾಗಿವೆ ಎಂದುಹೇಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಗೊಂದಲ ಸೃಷ್ಟಿ: ಕಳೆದ 4 ವರ್ಷಗಳಿಂದ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ 50 ಎಕರೆ ಸರ್ಕಾರಿ ಭೂಮಿ ಇದ್ದು, ನಿವೇಶನ ರಹಿತರಿಗೆ 2 ಎಕರೆ ಮಂಜೂರು ಮಾಡುವ ಸಂಬಂಧಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಆ.2ರಂದು ನಿವೇಶನರಹಿತರು ಪ್ರತಿಭಟನಾ ಧರಣಿ ನಡೆಸುವ ಮುನ್ನಾ ಆ.1 ರಂದುಬೂದನೂರು ಗ್ರಾಮಕ್ಕೆ ಬಂದ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‌ ಅವರಿಗೆ ಸ್ಥಳೀಯ ರಾಜಕೀಯ ಪ್ರಭಾವಿಗಳು ಹಾಗೂ ಪುಡಾರಿಗಳು ರೈತರ ಕೃಷಿ ಭೂಮಿಯನ್ನು ಆಶ್ರಯ ನಿವೇಶನಕ್ಕೆ ವಶಪಡಿಸಿ ಕೊಳ್ಳಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಗ್ರಾಮದ ಸರ್ವೆ ನಂ. 190/ಪಿ10ನ 6.20ಎಕರೆ ಭೂಮಿಯೇ ಕಾಣುತ್ತಿಲ್ಲ ಎಂದು ಪೂರ್ವ ದಿಕ್ಕಿನಲ್ಲಿರುವ ಭೂಮಿಯ ಪರಿಶೀಲನೆನಡೆಸದೇ ಪಶ್ಚಿಮ ದಿಕ್ಕಿನಲ್ಲಿರುವ ಭೂಮಿಯನ್ನು ಎಸಿ, ತಹಶೀಲ್ದಾರ್‌ ಅವರಿಗೆ ತೋರಿಸಿ ವಂಚಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಕ್ರಮ ಕೈಗೊಳ್ಳಲು ಆಗ್ರಹ: ಬೂದನೂರು ಗ್ರಾಮದ ದಲಿತರ ಇನಾಮು, ಸರ್ಕಾರಿ ಶಾಲೆ ಹಾಗೂ ಸಾರ್ವಜನಿಕ ದಾರಿಗಳನ್ನು ಕಬಳಿಸಿರುವ ಭೂಗಳ್ಳರು ಬಡವರ ನಿವೇಶನ ಭೂಮಿಯನ್ನು ಕಬಳಿಸಲು ಸಂಚು ರೂಪಿಸಿದ್ದಾರೆ. ಇದರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಲೂಕು ಆಡಳಿತ ಮೇಲೆ ಸಂಪೂರ್ಣ ನಂಬಿಕೆ ಇಲ್ಲದಂತಾಗಿದ್ದು, ಖುದ್ದಾಗಿ ಜಿಲ್ಲಾಧಿಕಾರಿಗಳೇ ಕೂಡಲೇ ಸುಳ್ಳು ಮಾಹಿತಿನೀಡುತ್ತಿರುವರಾಜಸ್ವ ನಿರೀಕ್ಷಕ, ಗ್ರಾಮ ಲೆಕ್ಕಿಗರು ಹಾಗೂ ಭೂಮಾಪನ ಇಲಾಖೆಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು. ಬೂದನೂರುಗ್ರಾಪಂ ವ್ಯಾಪ್ತಿಯಲ್ಲಿ ಗುರುತಿಸಿರುವ ಸರ್ಕಾರಿ ಭೂಮಿಯನ್ನು 1-5ಮಾಡಿರುವ ಪ್ರಕಾರ ಅಳತೆ ಹದ್ದುಬಸ್ತ್ ಮಾಡಿ ನಿವೇಶನ ರಹಿತರಿಗೆ ಭೂಮಿ ನೀಡಬೇಕು. ತಕ್ಷಣವೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿವೇಶನರಹಿತರ ಸಭೆ ನಡೆಸಬೇಕು. ಬೂದನೂರು ಆಶ್ರಯ ನಿವೇಶನಕ್ಕೆ ಸಂಬಂಧಿಸಿದಂತೆ ಮಾಡಿರುವ ಆದೇಶ ಮತ್ತು ಆಗಿರುವ ಕ್ರಮಗಳ ನಕಲು ಪ್ರತಿ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನ್ಯಾಯ ಸಿಗುವವರೆಗೂ ಜಿಲ್ಲಾಧಿಕಾರಿ ಕಚೇರಿ ಬಳಿ ಅ.12ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ವಕೀಲ ಜೆ.ರಾಮಯ್ಯ ಇದ್ದರು

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.