ಒಂದೇ ದಿನ 3 ಕೋವಿಡ್ 19 ಸೋಂಕು ದೃಢ
Team Udayavani, Apr 8, 2020, 1:58 PM IST
ಮಂಡ್ಯ: ಕಳೆದೊಂದು ತಿಂಗಳಿನಿಂದ ಕೋವಿಡ್ 19 ದಿಂದ ಮುಕ್ತವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೀಗ ಮೂರು ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ತಬ್ಲೀಘಿ ರಿಂದಲೇ ಸೋಂಕು ಹರಡಿರುವುದು ಹೆಚ್ಚಿನ ಭೀತಿ ಸೃಷ್ಟಿಸಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 7 ಮಂದಿಯ ಪೈಕಿ ಮೂವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿತರು 32 ವರ್ಷ, 36 ವರ್ಷ ಹಾಗೂ 65 ವರ್ಷದವರಾಗಿದ್ದಾರೆ. ಉಳಿದ ಇಬ್ಬರಿಗೆ ನೆಗೆಟೀವ್ ಬಂದಿದ್ದರೆ, ಮತ್ತಿಬ್ಬರ ಗಂಟಲ ದ್ರವ ಮತ್ತು ರಕ್ತದ ಮಾದರಿಯನ್ನು ಪುನರ್ ಪರಿಶೀಲನೆಗಾಗಿ ಮತ್ತೂಮ್ಮೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನಾಗಮಂಗಲದ 5 ಪ್ರಕರಣಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ತಿಳಿಸಿದರು.
ಟ್ರಾವೆಲ್ ಹಿಸ್ಟರಿ: ಮಳವಳ್ಳಿ ಮೂಲದ 7 ಮಂದಿಯ ಟ್ರಾವೆಲ್ ಹಿಸ್ಟರಿಯನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಲಾಗಿದ್ದು, ಫೆ. 4ರಂದು ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಫೆ. 13ರವರೆಗೂ ಅಲ್ಲಿಯೇ ಉಳಿದುಕೊಂಡಿದ್ದಾರೆ. ನಂತರ ಫೆ.13ರಂದು ದೆಹಲಿಯಿಂದ ಧರ್ಮಗುರುಗಳೊಂದಿಗೆ 7 ಮಂದಿಯೂ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ಮೂಲಕ ಬೆಂಗಳೂರಿನ ಯಶವಂತಪುರಕ್ಕೆ ಮಧ್ಯರಾತ್ರಿ 1 ಗಂಟೆಗೆ ಬಂದಿಳಿದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಧರ್ಮ ಗುರುಗಳು ಮೈಸೂರು ಯಶ್ವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಮೈಸೂರಿಗೆ ತೆರಳಿದರೆ, ಮಳವಳ್ಳಿ ಮೂಲದ 7 ಮಂದಿ ಯಶವಂತಪುರದಿಂದ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿ ಅಲ್ಲಿಂದ ಸಾರಿಗೆ ಬಸ್ ಮೂಲಕ ಮದ್ದೂರಿಗೆ ಬಂದಿಳಿದರು. ಬಳಿಕ ಮದ್ದೂರಿನಿಂದ ಮಳವಳ್ಳಿಗೆ ಮಾರುತಿ-800 ಹಾಗೂ ಮತ್ತೂಂದು ಕಾರಿನಲ್ಲಿ ತೆರಳಿದ್ದಾರೆ ಎಂದು ತಿಳಿಸಿದರು.
ಧರ್ಮಗುರುಗಳಿಂದ ಸೋಂಕು ಶಂಕೆ: ಸೋಂಕು ದೃಢಪಟ್ಟಿರುವ ಮೂವರು ದೆಹಲಿಯಿಂದ ಬಂದಿದ್ದ ಧರ್ಮಗುರುಗಳೊಂದಿಗೆ ಸಂಪರ್ಕದಲ್ಲಿದ್ದ ಕಾರಣ ಅವರಿಂದಲೂ ಹರಡಿರಬಹುದು ಎಂದು ಸಂಶಯ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, 10 ಧರ್ಮಗುರುಗಳ ಪೈಕಿ 5 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದರಿಂದ ಅವರಿಂದಲೇ ಇವರಿಗೂ ಸೋಂಕು ತಗುಲಿರಬಹುದೆಂದು ಶಂಕಿಸಲಾಗಿದೆ ಎಂದರು.
ದೆಹಲಿಯ ತಬ್ಲೀಘಿ ಸಭೆಯಲ್ಲಿ ಪಾಲ್ಗೊಂಡಿದ್ದವರು ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡುವಂತೆ ಕೋರಿದ್ದರೂ, ಇದುವರೆಗೂ ಯಾರೂ ಯಾರೊಬ್ಬರೂ ಮಾಹಿತಿ ನೀಡಿಲ್ಲ. ಸಭೆಗೆ ಹೋಗಿದ್ದವರಿಂದಲೇ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ, ಅಬಕಾರಿ ಜಿಲ್ಲಾ ಅಧಿಕಾರಿ ಶಿವಪ್ರಸಾದ್, ವಾರ್ತಾಧಿಕಾರಿ ಹರೀಶ್ ಇತರರು ಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ