ಭಿಕ್ಷೆ ಕೇಳಿದ ಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ
Team Udayavani, Nov 18, 2020, 7:36 PM IST
ಭಿಕ್ಷೆಗೆ ಬೇಡಿಕೆ ಇಟ್ಟು ಹಲ್ಲೆಗೊಳಗಾದ ವ್ಯಕ್ತಿಯನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು.
ಮಂಡ್ಯ: ಹಸಿವು ನೀಗಿಸಿಕೊಳ್ಳಲು ಭಿಕ್ಷೆ ಕೇಳಿದ ಮಾನಸಿಕ ಅಸ್ವಸ್ಥ ವ್ಯಕ್ತಿಗೆ ಮರದ ರಿಪೀಸ್ ಪಟ್ಟಿಯಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.
ಪಾಂಡವಪುರ ಪಟ್ಟಣದ ಡಾ.ರಾಜ್ಕುಮಾರ್ ವೃತ್ತದಲ್ಲಿರುವ ಶ್ರೀಕಂಠೇಶ್ವರ ಮೆಡಿಕಲ್ ಸ್ಟೋರ್ನಲ್ಲಿ ಮಾನಸಿಕ ಅಸ್ವಸ್ಥ ಭಿಕ್ಷೆ ನೀಡುವಂತೆ ಬೇಡಿಕೊಂಡಿದ್ದಾನೆ. ಭಿಕ್ಷೆ ನೀಡಲು ನಿರಾಕರಿಸಿದ ಅಂಗಡಿ ಮಾಲೀಕರು ಮುಂದೆ ಹೋಗುವಂತೆ ಸೂಚಿಸಿದರು. ಆದರೂ, ಅಸ್ವಸ್ಥ ವ್ಯಕ್ತಿ ಮುಂದೆ ಹೋಗದೆ ಹಲವು ಬಾರಿ ಭಿಕ್ಷೆ ನೀಡುವಂತೆ ಒತ್ತಾಯಿಸಿ ಬೇಡಿಕೊಂಡಿದ್ದಾನೆ. ಇದರಿಂದ ಕುಪಿತರಾದ ಅಂಗಡಿ ಮಾಲೀಕ ಶಿಲ್ಪ ಎಂಬುವವರು ಮರದ ರಿಪೀಸ್ ಪಟ್ಟಿಯಿಂದ ಭಿಕ್ಷುಕನ ಮೇಲೆ ಏಳೇಟು ಬಾರಿ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತ ಸುರಿಯುತ್ತಿದ್ದನ್ನು ಕಂಡು ಸಾರ್ವಜನಿಕರು ಅಂಗಡಿ ಮಾಲೀಕರಿಗೆ ತೀವ್ರ ತರಾಟೆಗೆ ತೆಗೆದುಕೊಂಡು ಗಾಯಗೊಂಡ ವ್ಯಕ್ತಿಯನ್ನು ಅಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದರು. ಆದರೆ ಅಂಗಡಿ ಮಾಲೀಕರು ಸಾರ್ವಜನಿಕರ ಮಾತಿಗೆ ಸೊಪ್ಪು ಹಾಕಲಿಲ್ಲ.
ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ನರಳಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರೇ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದರು. ವೈದ್ಯರು ತಲೆಗೆ ಹೊಲಿಗೆ ಹಾಕಿ ಚುಚ್ಚು ಮದ್ದು ನೀಡಿ ಕಳುಹಿಸಿದ್ದಾರೆ. ಅಸ್ವಸ್ಥ ವ್ಯಕ್ತಿ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದ ರಾಜೇಶ್ಗೌಡ(೩೮) ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್