‘ಡಿಯರ್‌ ಕಾಮ್ರೆಡ್‌’ ತೆಲುಗು ಅವತರಣಿಕೆ ಪ್ರದರ್ಶನಕ್ಕೆ ವಿರೋಧ

ಕನ್ನಡ ಡಬ್ಬಿಂಗ್‌ ಸಿನಿಮಾ ಪ್ರದರ್ಶನಕ್ಕೆ ಕರವೇ ಆಗ್ರಹ • ಸಂಜಯ ಚಿತ್ರಮಂದಿರದ ಎದುರು ಪ್ರತಿಭಟನೆ

Team Udayavani, Jul 30, 2019, 4:09 PM IST

mandya-tdy-2

ಮಂಡ್ಯದ ಸಂಜಯ ಚಿತ್ರಮಂದಿರದ ಮುಂದೆ 'ಡಿಯರ್‌ ಕಾಮ್ರೆಡ್‌' ಚಿತ್ರದ ಕನ್ನಡ ಅವತರಣಿಕೆ ಪ್ರದರ್ಶಿಸುವಂತೆ ಒತ್ತಾಯಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯ: ಡಿಯರ್‌ ಕಾಮ್ರೆಡ್‌ ಕನ್ನಡ ಆವೃತ್ತಿ ಇದ್ದರೂ ತೆಲುಗು ಅವತರಣಿಕೆಯಲ್ಲಿ ಚಿತ್ರ ಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ನಗರದ ಸಂಜಯ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದರು.

ಚಿತ್ರಮಂದಿರದ ಎದುರು ಜಮಾಯಿಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಯರ್‌ ಕಾಮ್ರೆಡ್‌ ಸಿನಿಮಾವನ್ನು ತೆಲುಗು ಅವತರಣಿಕೆ ಬದಲು ಕನ್ನಡ ಅವತರಣಿಕೆಯಲ್ಲಿ ಪ್ರದರ್ಶಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ವಿಶ್ವದ ಎಲ್ಲ ಸಿನಿಮಾ, ಜ್ಞಾನ ಎಲ್ಲವೂ ಕನ್ನಡ ಭಾಷೆಯಲ್ಲೇ ಬರಬೇಕು. ಇದರಿಂದ ಕನ್ನಡ ಭಾಷೆ ಬೆಳೆಯುತ್ತದೆ. ಇದರ ಭಾಗವಾಗಿಯೇ ಕನ್ನಡ ಸಿನಿಮಾ ರಂಗದಲ್ಲಿ ಅಘೋಷಿತ ನಿಷೇಧ ಹೇರಿದ್ದ ಡಬ್ಬಿಂಗ್‌ ಸಿನಿಮಾ ಜಾರಿಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈ ಹೋರಾಟದ ಭಾಗವಾಗಿಯೇ ಡಿಯರ್‌ ಕಾಮ್ರೆಡ್‌ ಚಿತ್ರವನ್ನು ಕನ್ನಡಕ್ಕೆ ಡಬ್‌ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಹೆಚ್.ಡಿ.ಜಯರಾಂ ಹೇಳಿದರು.

ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಶೇ.90ರಷ್ಟು ಕನ್ನಡ ಮಾತನಾಡುವ ಕನ್ನಡಿಗರಿರುವ ಜಿಲ್ಲೆಯಾಗಿದೆ. ನಂದಾ ಚಿತ್ರಮಂದಿರದಲ್ಲಿ ಡಿಯರ್‌ ಕಾಮ್ರೆಡ್‌ ಸಿನಿಮಾದ ಕನ್ನಡ ಅವತರಣಿಕೆ ಪ್ರದರ್ಶಿತವಾಗುತ್ತಿದೆ. ಹೀಗಿರುವಾಗ ಸಂಜಯ ಚಿತ್ರಮಂದಿರದಲ್ಲಿ ಅದೇ ಸಿನಿಮಾದ ತೆಲುಗು ಅವತರಣಿಕೆ ಪ್ರದರ್ಶಿಸುವ ಅನಿವಾರ್ಯತೆ ಏನಿದೆ. ಪರಭಾಷಾ ಚಿತ್ರಗಳಿಂದ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಸಿಗದಂತ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ತಕ್ಷಣದಿಂದ ತೆಲುಗು ಬದಲಿಗೆ ಕನ್ನಡ ಆವೃತ್ತಿಯನ್ನೇ ಪ್ರದರ್ಶಿಸುವಂತೆ ಒತ್ತಾಯಿಸಿದರು.

ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗುವ ಎಲ್ಲ ಪರಭಾಷಾ ಚಿತ್ರಗಳು ಕನ್ನಡದಲ್ಲೇ ಡಬ್‌ ಆಗಿ ಪ್ರದರ್ಶನಗೊಳ್ಳಬೇಕು. ತಪ್ಪಿದಲ್ಲಿ ಪ್ರದರ್ಶನ ತಡೆಹಿಡಿಯಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಯಿತು. ಚಿತ್ರಮಂದಿರದ ವ್ಯವಸ್ಥಾಪಕ ಕುಶಾಲ್ ಗೌಡ ಮನವಿ ಸ್ವೀಕರಿಸಿ ಇಂದು ಸಂಜೆಯಿಂದಲೇ ಕನ್ನಡ ಆವೃತ್ತಿಯಲ್ಲಿ ಸಿನಿಮಾ ಪ್ರದರ್ಶನ ಮಾಡುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಸಂಪತ್‌ ಕುಮಾರ್‌, ಕಾವೇರಿ ಕಣಿವೆ ರೈತ ಒಕ್ಕೂಟದ ಜಿ.ಬಿ.ನವೀನ್‌ಕುಮಾರ್‌, ಎಂ,ಬಿ,ನಾಗಣ್ಣಗೌಡ, ಗಿರೀಗೌಡ, ಚಿತ್ರ ನಿರ್ದೇಶಕ ರವಿಕೀರ್ತಿ, ವಿಶ್ವಾಸ್‌ ಇತರರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.