ಅಕ್ರಮ ಗುಡಿಸಲು ತೆರವಿಗೆ ವಿರೋಧ


Team Udayavani, Feb 2, 2018, 4:11 PM IST

uprooted trees 4 copy.jpg

ಮದ್ದೂರು: ಪಶು ಸಂಗೋಪನಾ ಇಲಾಖೆಗೆ ಸೇರಿದೆ ಎನ್ನಲಾದ ನಿವೇಶನವನ್ನು ಖಾಸಗಿ ವ್ಯಕ್ತಿಯೊಬ್ಬರು ಅಕ್ರಮ ಖಾತೆ ಮಾಡಿಸಿಕೊಂಡು ನಿರ್ಮಿಸಿಕೊಂಡಿದ್ದ ಗುಡಿಸಲನ್ನು ಕಂದಾಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಲು ಮುಂದಾದಾಗ ವ್ಯಕ್ತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿದ ಘಟನೆ ತಾಲೂಕಿನ ಗೊರವನಹಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.

ತಹಶೀಲ್ದಾರ್‌ ಹಾಗೂ ಪೊಲೀಸರ ಕ್ರಮವನ್ನು ವಿರೋಧಿಸಿ ಗುಡಿಸಲು ನಿರ್ಮಿಸಿಕೊಂಡಿದ್ದ ದಾಸೇಗೌಡ ಮತ್ತು ಆತನ ಕುಟುಂಬದವರು ಜಾನುವಾರುಗಳೊಂದಿಗೆ ಗೊರವನಹಳ್ಳಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ವೇಳೆ ಧರಣಿ ನಿರತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಒಂದು ಹಂತದಲ್ಲಿ ಪೊಲೀಸರು ಜಾನುವಾರುಗಳನ್ನು ಕಚೇರಿ ಆವರಣದಿಂದ ಹೊರದಬ್ಬಿದರು. ಬಳಿಕ ಪ್ರತಿಭಟನಾಕಾರರಿಗೆ ಮೊಕದ್ದಮೆ ಹೂಡುವುದಾಗಿ ಧಮಕಿ ಹಾಕಿದರು.

ಗೊರವನಹಳ್ಳಿ ಗ್ರಾಮದ ಸರ್ವೆ ನಂ.4ರಲ್ಲಿ 7 ಗುಂಟೆ ನಿವೇಶನನ್ನು ಪಶುಸಂಗೋಪನಾ ಆಸ್ಪತ್ರೆ ನಿರ್ಮಿಸಲು ಮಂಜೂರು ಮಾಡಲಾಗಿತ್ತು. ಈ ನಿವೇಶನದಲ್ಲಿ ದಾಸೇಗೌಡ ನಕಲಿ ದಾಖಲೆಗಳನ್ನು ನೀಡಿ ಅಕ್ರಮವಾಗಿ ಗ್ರಾಪಂ ಕಚೇರಿಯಿಂದ ಖಾತೆ ಮಾಡಿಸಿಕೊಂಡಿದ್ದರು ಎಂದು ಹೇಳಲಾಗಿದೆ.

ಈ ವಿಷಯ ತಿಳಿದ ತಹಶೀಲ್ದಾರ್‌ ನಾಗರಾಜು ಸ್ಥಳಕ್ಕೆ ತೆರಳಿ ನಿವೇಶನದಲ್ಲಿ ನಿರ್ಮಿಸಿದ್ದ ಗುಡಿಸಲನ್ನು ಪೊಲೀಸರ ನೆರವಿನೊಂದಿಗೆ ನೆಲಸಮಗೊಳಿಸಿ ನಿವೇಶನವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ಈ ವೇಳೆ ದಾಸೇಗೌಡ ದಾಖಲೆಗಳನ್ನು ನೀಡಿ ನಿವೇಶನ ತನ್ನದೆಂದು ವಾದಿಸಿದ್ದರು.

ಬಳಿಕ ಪೊಲೀಸರು ದಾಸೇಗೌಡ ಮತ್ತು ಕುಟುಂಬದವರನ್ನು ಸ್ಥಳದಿಂದ ಹೊರಗೆ ಕಳುಹಿಸಲು ಮುಂದಾದಾಗ ಪೊಲೀಸರು ಮತ್ತು ದಾಸೇಗೌಡ ಕುಟುಂಬದವರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ-ನೂಕಾಟ ನಡೆಯಿತು. ಇದನ್ನು ಲೆಕ್ಕಿಸದ ಕಂದಾಯ ಇಲಾಖೆ ಅಧಿಕಾರಿಗಳು ಗುಡಿಸಲಿನಲ್ಲಿದ್ದ ವಸ್ತುಗಳನ್ನು ಹೊರಗೆಸೆದು ನಿವೇಶನವನ್ನು ವಶಕ್ಕೆ ತೆಗೆದುಕೊಂಡು ಕುಟುಂಬದವರನ್ನು ಹೊರಹಾಕಿದರು.

ತಹಶೀಲ್ದಾರ್‌ ಮತ್ತು ಪೊಲೀಸರ ಕ್ರಮ ಖಂಡಿಸಿ ದಾಸೇಗೌಡ ಮತ್ತು ಆತನ ಕುಟುಂಬದವರು ಗ್ರಾಪಂ ಕಚೇರಿ ಎದುರು ಪ್ರತಿಭಟನೆಗಿಳಿದು ಅಧಿಕಾರಿಗಳ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮದ್ದೂರು ಠಾಣೆ ಸಬ್‌ಇನ್ಸ್‌ಪೆಕ್ಟರ್‌ ಕುಮಾರ್‌ ಹಾಗೂ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದ ದಾಸೇಗೌಡ ಹಾಗೂ ಕುಟುಂಬದವರಿಗೆ ಅನುಮತಿ ಇಲ್ಲದೆ ಧರಣಿ ನಡೆಸುತ್ತಿರುವ ಬಗ್ಗೆ ಮೊಕದ್ದಮೆ ಹೂಡುವ ಬೆದರಿಕೆ ಹಾಕಿದರು.

ಇದಕ್ಕೆ ಧರಣಿ ನಿರತರು ಮಣಿಯದಿದ್ದಾಗ ಪೊಲೀಸರು ಮೊದಲ ಹಂತವಾಗಿ ಜಾನುವಾರುಗಳನ್ನು ಬಲವಂತವಾಗಿ ಗ್ರಾಪಂ ಕಚೇರಿ ಆವರಣದಿಂದ ಹೊರದಬ್ಬಿದರು. ನಂತರ ಪೊಲೀಸರ ಬೆದರಿಕೆಗೆ ಮಣಿದ ಪ್ರತಿಭಟನಾಕಾರರು ಧರಣಿಯನ್ನು ಅಂತ್ಯಗೊಳಿಸಿದರು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.