ಜೆಡಿಎಸ್‌ನಲ್ಲಿ ಅನಾಥ ಪ್ರಜ್ಞೆ: ಅಭಿವೃದ್ಧಿಗೆ ಗ್ರಹಣ

ನಾರಾಯಣಗೌಡರ ರಾಜೀನಾಮೆಗೂ ವ್ಯಕ್ತವಾಗದ ಪ್ರತಿರೋಧ • ಪುತ್ರನ ಸೋಲಿನಿಂದ ಹೊರಬರದ ಮುಖ್ಯಮಂತ್ರಿ

Team Udayavani, Jul 19, 2019, 12:33 PM IST

mandya-tdy-1

ಮಂಡ್ಯ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿವಿನ ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ ಕೆ.ಆರ್‌.ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡರ ರಾಜೀನಾಮೆ ಜೆಡಿಎಸ್‌ನಲ್ಲಿ ಸಂಚಲನ ಉಂಟು ಮಾಡಿದ್ದು, ಈ ಕಾರಣದಿಂದಲೇ ಜೆಡಿಎಸ್‌ ಶಾಸಕರಿಗೆ ರೆಸಾರ್ಟ್‌ ಬಂಧನದಲ್ಲಿ ಇರಿಸಲಾಗಿದ್ದು, ಜಿಲ್ಲೆಯ ಅಭಿವೃದ್ಧಿ ಪ್ರಕ್ರಿಯೆಯಲ್ಲೂ ಕೂಡ ಗ್ರಹಣ ಹಿಡಿದಂತಾಗಿದೆ.

ವರ್ಷದ ಹಿಂದಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಪಾರ ನಿರೀಕ್ಷೆಯನ್ನಿಟ್ಟುಕೊಂಡು ಜಿಲ್ಲೆಯ ಜನರು ಜೆಡಿಎಸ್‌ ಕೈ ಹಿಡಿದಿದ್ದರು. ಏಳು ಕ್ಷೇತ್ರಗಳಲ್ಲೂ ದಳಪತಿಗಳು ವಿಜಯದುಂಧುಬಿ ಮೊಳಗಿಸಿ ಭರ್ಜರಿ ಜಯ ದಾಖಲಿಸಿದ್ದರು. ಹತ್ತು ವರ್ಷಗಳ ಬಳಿಕ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರಿದ್ದು ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಹೊಸ ಪರ್ವ ಶುರುವಾಗಲಿದೆ ಎಂಬ ಆಶಾಕಿರಣ ಎಲ್ಲರಲ್ಲೂ ಮೂಡಿತ್ತು.

ಪ್ರಗತಿಯತ್ತ ಸಣ್ಣ ಹೆಜ್ಜೆ ಇಡಲಿಲ್ಲ:

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಅಭಿವೃದ್ಧಿಯ ಬಗ್ಗೆ ಜಿಲ್ಲೆಯ ಜನರು ಕಂಡಿದ್ದ ಆಶಾಗೋಪುರ ಗಾಳಿಗೋಪುರವಾಗಿದೆ. ಜಿಲ್ಲೆ ಯೊಳಗೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿ ಉಳಿದಿದೆ. ಒಂದು ವರ್ಷದಲ್ಲಿ ಪ್ರಗತಿಯತ್ತ ಒಂದು ಸಣ್ಣ ಹೆಜ್ಜೆಯನ್ನೂ ಇಡಲು ಸಾಧ್ಯವಾಗಲಿಲ್ಲ. ಇದರಿಂದ ರೋಸಿ ಹೋಗಿರುವ ಜನರು ಜೆಡಿಎಸ್‌ ವಿರುದ್ಧವೇ ತಿರುಗಿ ಬಿದ್ದಿ ದ್ದಾರೆ. ಇದಕ್ಕೆ ಇತ್ತೀಚೆಗೆ ನಡೆದ ಲೋಕಸಭಾ ಚುನಾ ವಣೆ ಸಾಕ್ಷಿಯಾಗಿದ್ದು, ಜೆಡಿಎಸ್‌ ಶಾಸಕರು ದಿನೇದಿನೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವುದರ ದಿಕ್ಸೂಚಿಯೂ ಆಗಿದೆ.

ಮುಖ್ಯಮಂತ್ರಿ ತಮ್ಮ ಪುತ್ರ ನಿಖೀಲ್ ಕುಮಾರಸ್ವಾಮಿಗೆ ರಾಜಕೀಯ ಭವಿಷ್ಯ ಕಲ್ಪಿಸುವ ಏಕಮಾತ್ರ ಉದ್ದೇಶದಿಂದ 8500 ಕೋಟಿ ರೂ. ಅಭಿವೃದ್ಧಿಯ ಚಿತ್ರಣವಿರುವ ದೂರದ ಬೆಟ್ಟವನ್ನು ತೋರಿಸಿದರೇ ವಿನಃ ಅನುಷ್ಠಾನಕ್ಕೆ ಆಸಕ್ತಿ ವಹಿಸಲಿಲ್ಲ. ಘೋಷಿಸಿದ ಕಾಮಗಾರಿಗಳು ಶಂಕುಸ್ಥಾಪನೆ, ಗುದ್ದಲಿ ಪೂಜೆಗಷ್ಟೇ ಸೀಮಿತವಾದವು. ಹೊಸ ಸಕ್ಕರೆ ಕಾರ್ಖಾನೆ, ಇಸ್ರೇಲ್ ಮಾದರಿ ಕೃಷಿ, ಕೆರೆ-ಕಟ್ಟೆಗಳನ್ನು ತುಂಬಿಸುವ, ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸುವ ಪುಂಗಿ ನಿರಂತರವಾಗಿ ಊದಿದರೂ ಅವು ಕಾರ್ಯಗತಗೊಳ್ಳಲೇ ಇಲ್ಲ.

ಮುಖ ಮಾಡದ ಸಿಎಂ: ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖೀಲ್ ಸೋತ ಬಳಿಕ ಸಿಎಂ ಕುಮಾರಸ್ವಾಮಿ ಜಿಲ್ಲೆಯ ಕಡೆ ಮುಖ ಮಾಡಲೇ ಇಲ್ಲ. 8500 ಕೋಟಿ ರೂ. ಅಭಿವೃದ್ಧಿಯ ಚಿತ್ರಣ ಕಾಗದದಲ್ಲೇ ಉಳಿಯುವಂತಾಯಿತು. ಹೊಸ ಕಾರ್ಖಾನೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಕೆರೆ-ಕಟ್ಟೆಗಳೆಲ್ಲಾ ನೀರಿಲ್ಲದೆ ಭಣಗುಡುತ್ತಿದ್ದರೂ ಅವುಗಳನ್ನು ತುಂಬಿಸುವುದಕ್ಕೆ ಯಾರಿಗೂ ಆಸಕ್ತಿ ಇದ್ದಂತಿಲ್ಲ. ಮುಂಗಾರು ಮಳೆ ಕೊರತೆಯಿಂದ ಬರಗಾಲ ಜಿಲ್ಲೆಯನ್ನು ಆವರಿಸುತ್ತಿದೆ. ಮಳೆ ಇಲ್ಲದೆ ಕೃಷಿ ಚಟುವಟಿಕೆಯನ್ನೇ ನಡೆಸಲಾಗದಂತಹ ಘನಘೋರ ಸ್ಥಿತಿಯಲ್ಲಿ ರೈತರಿದ್ದಾರೆ. ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವಿಲ್ಲದೆ ಅಣೆಕಟ್ಟೆಯ ನೀರಿನ ಮಟ್ಟ ಏರುತ್ತಿಲ್ಲ. ಕುಡಿಯಲು ಸಾಲುವಷ್ಟು ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹವಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಬೇಕಿದ್ದ ಶಾಸಕರೆಲ್ಲರೂ ರೆಸಾರ್ಟ್‌ ಸೇರಿಕೊಂಡು ಮೋಜು-ಮಸ್ತಿ ನಡೆಸುತ್ತಿದ್ದಾರೆ. ದಳಪತಿಗಳ ನಡೆಯ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಜಿಲ್ಲೆಯ ಜನರ ಋಣ ತೀರಿಸುವ ಮಾತನಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಕೂಡ ಜನರ ಕಷ್ಟದಿಂದ ದೂರವೇ ಉಳಿದು ಅಧಿಕಾರದ ಉಳಿವಿನ ಬೆನ್ನೇರಿರುವುದು ಜನರ ಸ್ಥಿತಿ ಕೇಳ್ಳೋರು ಯಾರು ಎನ್ನುವಂತಾಗಿದೆ.

ರೈತರ ಆತ್ಮಹತ್ಯೆ ನಿಲ್ಲಲಿಲ್ಲ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಒಂದಂಶದೊಂದಿಗೆ ಅಧಿಕಾರಕ್ಕೇರಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನೂ ಗೊಂದಲವಿಲ್ಲದೆ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡುವಲ್ಲಿ ವಿಫ‌ಲರಾಗಿದ್ದಾರೆ. ಋಣಮುಕ್ತ ಪ್ರಮಾಣಪತ್ರ ನೀಡುವ ಮೂಲಕ ರೈತರ ಮನಗೆಲ್ಲುವ ಪ್ರಯತ್ನ ನಡೆಸಿದರಾದರೂ ಬ್ಯಾಂಕುಗಳು ಆ ಋಣಮುಕ್ತ ಪ್ರಮಾಣಪತ್ರಕ್ಕೆ ಕವಡೆಕಾಸಿನ ಕಿಮ್ಮತ್ತನ್ನೂ ನೀಡದೆ ಸಾಲ ಮರುಪಾವತಿಸದ ರೈತರಿಗೆ ನೋಟೀಸ್‌ ಜಾರಿ ಮಾಡುತ್ತಲೇ ಇವೆ. ರೈತರ ಸರಣಿ ಆತ್ಮಹತ್ಯೆ ಎಂದಿನಂತೆ ಮುಂದುವರೆದರೂ ಸತ್ತ ರೈತರಿಗೆ ಪರಿಹಾರ ಕೊಟ್ಟರೇ ವಿನಃ ಆತ್ಮಹತ್ಯೆ ತಡೆಯುವುದಕ್ಕೆ ಸಿಎಂ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ದಳ ನಾಯಕರಿಂದ ಸಾಧ್ಯವಾಗಲೇ ಇಲ್ಲ. ಇದೂ ಸಹ ಜೆಡಿಎಸ್‌ ವರ್ಚಸ್ಸು ಕುಸಿಯುವುದಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಅಭಿವೃದ್ಧಿ ಶೂನ್ಯ: ಏಳು ಕ್ಷೇತ್ರಗಳಲ್ಲಿ ಒಂದು ವರ್ಷ ಜೆಡಿಎಸ್‌ನ ಶಾಸಕರೇ ಇದ್ದರೂ ಯಾರೂ ತಮ್ಮ ಕ್ಷೇತ್ರಗಳನ್ನು ಪರಿಣಾಮಕಾರಿಯಾಗಿ ಪ್ರಗತಿಯತ್ತ ಮುನ್ನಡೆಸಲು ಸಾಧ್ಯವಾಗಲಿಲ್ಲ. ಒಂದೊಂದು ಕ್ಷೇತ್ರಕ್ಕೆ ಕನಿಷ್ಠ 300ರಿಂದ 600 ಕೋಟಿ ಘೋಷಣೆಯಾದರೂ ಯಾವುದೇ ಕಾಮಗಾರಿಗಳು ಕಾರ್ಯರೂಪಕ್ಕೆ ಬರಲಿಲ್ಲ. ಕಾಗದದೊಳಗೆ, ಗುದ್ದಲಿಪೂಜೆಗಳಿಗಷ್ಟೇ ಎಲ್ಲವೂ ಸೀಮಿತವಾಗಿವೆ.

ಸರ್ಕಾರದ ನೇತೃತ್ವವನ್ನು ಜೆಡಿಎಸ್‌ ವಹಿಸಿದ್ದರೂ ಏಳಕ್ಕೆ ಏಳು ಕ್ಷೇತ್ರಗಳನ್ನು ಕೊಡುಗೆಯಾಗಿ ನೀಡಿದ ಮಂಡ್ಯ ಜಿಲ್ಲೆಗೆ ಕಿಂಚಿತ್‌ ಕೊಡುಗೆಯನ್ನು ನೀಡದಿರುವ ಬಗ್ಗೆ ಜನರಲ್ಲಿ ಅಸಮಾಧಾನ ಮೂಡಿಸಿದೆ. ಒಣಗುತ್ತಿರುವ ಬೆಳೆಗಳಿಗೆ ನೀರು ಕೇಳಿದರೂ ಸಕಾಲದಲ್ಲಿ ನೀಡದೆ ಸತಾಯಿಸಿ ಬೆಳೆ ಒಣಗಿದ ಬಳಿಕ ನೀರು ಬಿಡುಗಡೆ ಮಾಡಿರುವ ದಳಪತಿಗಳ ನಿರ್ಲಕ್ಷ್ಯ ಧೋರಣೆ ಬಗ್ಗೆಯೂ ಜಿಲ್ಲೆಯ ಜನರಲ್ಲಿ ಆಕ್ರೋಶವಿದೆ.

 

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.