ಕಳಪೆ ರಸ್ತೆ, ಚರಂಡಿ ಕಾಮಗಾರಿ ವಿರುದ್ಧ ಆಕ್ರೋಶ
ಚರಂಡಿ ನಿರ್ಮಿಸದೆ ರಸ್ತೆ ಕಾಮಗಾರಿ ಮಾಡಬೇಡಿ
Team Udayavani, Jun 19, 2019, 4:25 PM IST
ಪಾಂಡವಪುರ ತಾಲೂಕಿನ ಆನುವಾಳು ಪರಿಶಿಷ್ಟರ ಕಾಲೋನಿಯಲ್ಲಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಪಾಂಡವಪುರ: ತಾಲೂಕಿನ ಆನುವಾಳು ಗ್ರಾಮದ ಪರಿಶಿಷ್ಟರ ಕಾಲೋನಿಯಲ್ಲಿ ನಡೆಯುತ್ತಿರುವ ಚರಂಡಿ ಮತ್ತು ರಸ್ತೆ ಕಾಮಗಾರಿ ಕಳಪೆ ಯಿಂದ ಕೂಡಿದೆ ಎಂದು ಆರೋಪಿಸಿ ದಲಿತ ಮುಖಂಡರು ಕಾಮಗಾರಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.
ವಿಶೇಷ ಘಟಕ ಯೋಜನೆ(ಎಸ್ಸಿಪಿ)ಯಡಿ ಕೆಆರ್ಐಡಿಎಲ್ ಇಲಾಖೆ ಸುಮಾರು 5 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಅಂದಾಜು ಪಟ್ಟಿ ಪ್ರಕಾರ ಬಾಕ್ಸ್ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಆದರೆ, ಕಾಮಗಾರಿ ಪಡೆದಿರುವ ಗುತ್ತಿಗೆದಾರರು ಮೊದಲು ಚರಂಡಿ ನಿರ್ಮಿಸದೆ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವುದನ್ನು ವಿರೋಧಿಸಿದರು.ನಿಯಮದಂತೆ ಸಿಮೆಂಟ್ ಮಿಶ್ರಿತ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕಬ್ಬಿಣದ ಸರಳುಗಳನ್ನು ಹಾಕಬೇಕು. ಆದರೆ, ಇದಾವುದನ್ನು ಬಳಸದೆ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅಭಿವೃದ್ಧಿ ಕಾಮಗಾರಿ ಯೋಜನೆಯ ಪ್ರಕಾರವೇ ಕಾಮಗಾರಿ ಮಾಡಬೇಕು. ಇಲ್ಲವಾದರೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಜತೆಗೆ ಕೆಆರ್ಐಡಿಎಲ್ನ ಅಧಿಕಾರಿಗಳು ಗುತ್ತಿಗೆದಾರರಿಂದ ಕಮಿಷನ್ ಹಣ ಪಡೆಯಲು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಒಮ್ಮೆಯೂ ಭೇಟಿ ನೀಡದೆ ಹೇಗೋ ಕಾಮಗಾರಿ ಮುಗಿದರೆ ಸಾಕು ಎನ್ನುವ ಮನಸ್ಥಿತಿಯಲ್ಲಿದ್ದಾರೆ ಎಂದು ಕಿಡಿಕಾರಿದರು.
ಕಾಮಗಾರಿಯನ್ನು ಮಾಡಬೇಡಿ ಎಂದು ತಡೆಯುತ್ತಿಲ್ಲ. ಕಾಮಗಾರಿಯನ್ನು ಅಂದಾಜು ಪಟ್ಟಿ ಯೋಜನೆ ಪ್ರಕಾರ ಮಾಡಿ ಎಂದು ಕೇಳುತ್ತಿದ್ದೇವೆ ಅಷ್ಟೇ. ನಾನೊಬ್ಬ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯನಾಗಿ ಗುಣಮಟ್ಟದ ಕಾಮಗಾರಿ ಮಾಡಿ ಎಂದು ಮನವಿ ಮಾಡಿದರೂ ನನ್ನ ಮಾತಿಗೂ ಬೆಲೆ ಕೊಡದೆ ನಿಮ್ಮ ಇಷ್ಟ ಬಂದಂತೆ ಕಾಮಗಾರಿ ನಿರ್ವಹಿಸುತ್ತಿದ್ದೀರಿ ಎಂದು ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಮಂಜು ನಾಥ್, ಕುಮಾರ, ಕಾಂತರಾಜು, ಚಂದ್ರಶೇಖರ್, ಪಾಪಯ್ಯ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…