ರಸಗೊಬ್ಬರಗಳ ದರ ಏರಿಕೆಗೆ ಆಕ್ರೋಶ
Team Udayavani, Apr 13, 2021, 4:25 PM IST
ಪಾಂಡವಪುರ: ಕೇಂದ್ರ ಸರ್ಕಾರ ದಿನೇ ದಿನೆ ಕೃಷಿ ಹಾಗೂ ನಿತ್ಯ ಬಳಕೆಯ ವಸ್ತುಗಳ ದರ ಹೆಚ್ಚಿಸುವಮೂಲಕ ಶ್ರೀಸಾಮಾನ್ಯರ ಮೇಲೆ ಬರೆ ಎಳೆಯುತ್ತಿದ್ದು, ಜತೆಗೆ ರಸಗೊಬ್ಬರಗಳ ದರ ಏರಿಸುವ ಮೂಲಕ ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ, ನಂತರಮಿನಿಧಾನಸೌಧದ ಆವರಣದಲ್ಲಿ ಧರಣಿ ಪ್ರತಿಭಟಿಸಿದರು.
ಪಟ್ಟಣದ ಐದು ದೀಪ ವೃತ್ತದಲ್ಲಿ ಜಮಾವಣೆಗೊಂಡ ರೈತ ಸಂಘದ ಕಾರ್ಯಕರ್ತರು,ರೈತ ಸಂಘದ ತಾಲೂಕು ಅಧ್ಯಕ್ಷ ಚಿಕ್ಕಾಡೆ ಹರೀಶ್ನೇತೃತ್ವದಲ್ಲಿ ಶ್ರೀರಂಗಪಟ್ಟಣ-ಜೇವರ್ಗಿ ರಾಷ್ಟ್ರೀಯಹೆದ್ದಾರಿ ತಡೆದು ಕೆಲ ಕಾಲ ಪ್ರತಿಭಟನೆ ನಡೆಸಿದರು.
ರಸಗೊಬ್ಬರದ ದರ ಏರಿಕೆ ಮಾಡಿರುವ ಕೇಂದ್ರಸರ್ಕಾರದ ನೀತಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆ ಬಳಿಕಮೆರವಣಿಗೆ ಮೂಲಕ ಮಿನಿವಿಧಾನಸೌಧಕ್ಕೆ ತೆರಳಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿದರು. ರಸಗೊಬ್ಬರ ದರ ದಿಢೀರ್ ಏರಿಕೆ ಮಾಡಿರುವುದು ಸರಿಯಲ್ಲ. ಬೆಳೆಗಳಿಗೆ ಹೆಚ್ಚು ದರ ನಿಗದಿ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ನಾಲೆ ಆಧುನೀಕರಣ ಹೆಸರಿನಲ್ಲಿ ಲೂಟಿ: ಕೆಆರ್ ಎಸ್ ಜಲಾಶಯದಿಂದ ನಾಲೆಗೆ ಕಟ್ಟುಪದ್ಧತಿ ಮೂಲಕ ನೀರು ಹರಿಸಬೇಕು. ನಾಲೆಗೆ ನೀರು ಹರಿಸದ ಕಾರಣದಿಂದಾಗಿ ಬೆಳೆಗಳು ಒಣಗುತ್ತಿವೆ.ಇದಕ್ಕೆ ಯಾರು ಹೊಣೆಗಾರರು, ನಿಮ್ಮ ಪರಿಹಾರ ಭಿಕ್ಷೆನಮಗೆ ಬೇಕಾಗಿಲ್ಲ. ಮೊದಲು ಸಮರ್ಪಕವಾಗಿ ಕಟ್ಟುಪದ್ಧತಿ ಮೂಲಕ ನಾಲೆಗೆ ನೀರು ಹರಿಸಬೇಕು.ನಾಲೆ ಆಧುನೀಕರಣ ಹೆಸರಿನಲ್ಲಿ ಹಣ ಲೂಟಿ ಮಾಡಲಾಗುತ್ತಿದೆ. ಕಾಮಗಾರಿ ಕೆಲಸ ಯಾವಾಗಬೇಕಾದರೂ ಮಾಡಿಕೊಳ್ಳಿ, ನಮಗೆ ನೀರು ಕೊಡಿ ಎಂದರು.
ಕಾನೂನು ಭಂಗ ಚಳವಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿನಾಕಾರಣ ರೈತರಿಗೆ ತೊಂದರೆ ಕೊಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.. ತಕ್ಷಣ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ರೈತ ಸಂಘದಿಂದ ಕಾನೂನು ಭಂಗ ಚಳವಳಿಮಾಡಬೇಕಾಗುತ್ತದೆ ಎಂದು ರೈತ ಸಂಘದ ಅಧ್ಯಕ್ಷಚಿಕ್ಕಾಡೆ ಹರೀಶ್, ಕೆನ್ನಾಳು ನಾಗರಾಜು ಪ್ರತಿಭಟನೆಯಲ್ಲಿ ಎಚ್ಚರಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ರಸ್ತೆತಡೆನಡೆಸಿದ ಪರಿಣಾಮ ಮೈಸೂರು, ತುಮಕೂರುಮಾರ್ಗದ ಸಂಚಾರ ಕೆಲಕಾಲ ಸ್ಥಗಿತಗೊಂಡಿತು. ಪ್ರತಿಭಟನೆಯಲ್ಲಿ ದಸಂಸ ಮುಖಂಡಚಿಕ್ಕಬ್ಯಾಡರಹಳ್ಳಿ ಪ್ರಕಾಶ್, ಕೆನ್ನಾಳು ನಾಗರಾಜು,ಕ್ಯಾತನಹಳ್ಳಿ ತುಳಸಿದಾಸ್, ಹರವು ಪ್ರಕಾಶ್,ಡಾಮಡಹಳ್ಳಿ ಸೋಮಣ್ಣ, ಕ್ಯಾತನಹಳ್ಳಿ ವಿಷಕಂಠ,ಬೇಬಿ ನಟರಾಜು, ರಾಮಚಂದ್ರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ