ವಿಶ್ವದ 8 ಕೋಟಿ ಮಂದಿಗೆ ಗ್ಲುಕೋಮಾ


Team Udayavani, Mar 15, 2020, 5:39 PM IST

mandya-tdy-1

ಮಂಡ್ಯ: ವಿಶ್ವದಲ್ಲಿ 8 ಕೋಟಿ ಮಂದಿ ಗ್ಲುಕೋಮಾ ಕಾಯಿಲೆಯಿಂದ ಬಳುತ್ತಿದ್ದು, ಭಾರತದಲ್ಲಿ ಸುಮಾರು 1.10 ಕೋಟಿ ಜನತೆ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಕೃಷಿಕ್‌ ಲಯನ್ಸ್‌ ಸಂಸ್ಥೆ ಪೋಷಕ ಕೆ.ಟಿ.ಹನುಮಂತು ಆತಂಕ ವ್ಯಕ್ತ ಪಡಿಸಿದರು.

ತಾಲೂಕಿನ ಕಾರಸವಾಡಿ ಪ್ರಾಥಮಿಕ ಶಾಲಾ ಅವರಣದಲ್ಲಿ ಕೃಷಿಕ್‌ ಲಯನ್ಸ್‌ ಸಂಸ್ಥೆ, ನಂಜಮ್ಮ- ಮೋಟೇಗೌಡ ಚಾರಿಟಬಲ್‌ ಟ್ರಸ್ಟ್‌, ಭಾರತೀಯ ದಂತ ವೈದ್ಯಕೀಯ ಸಂಘದ ವತಿಯಿಂದ ನಡೆದ ವಿಶ್ವ ಗ್ಲುಕೋಮಾ ದಿನ-2020ರ ಅಂಗವಾಗಿ ಕಣ್ಣು, ದಂತ ಹಾಗೂ ಮಕ್ಕಳ ಆರೋಗ್ಯ ತಪಾಸಣೆಯನ್ನು ಉದ್ಘಾಟಿಸಿ ಮಾತನಾಡಿದರು.

11 ಲಕ್ಷ ಮಂದಿ ಕುರುಡು: 2010ರ ವೇಳೆಗೆ ವಿಶ್ವದಲ್ಲಿ 6 ಕೋಟಿ ಜನರು ಗ್ಲುಕೋಮಾ ಕಾಯಿಲೆಗೆ ಒಳಗಾಗಿದ್ದರೆ, 2020ರ ಹೊತ್ತಿಗೆ 8 ಕೋಟಿ ಜನತೆ ಈ ಕಾಯಿಲೆಗೆ ತುತ್ತಾಗಿದ್ದಾರೆ. ಸರಿಯಾದ ಚಿಕಿತ್ಸೆ ಪಡೆಯದೆ ಭಾರತದಲ್ಲಿ ಸುಮಾರು 11 ಲಕ್ಷ ಮಂದಿ ಶಾಶ್ವತವಾಗಿ ಕುರುಡ ರಾಗಿದ್ದಾರೆ ಎಂದು ವಿವರಿಸಿದರು. ಮುಂದುವರಿದ ರಾಷ್ಟ್ರಗಳಲ್ಲಿ ಕಂಡುಹಿಡಿಯಲಾಗದ ಗ್ಲುಕೋಮಾ ಸಂಖ್ಯೆ ಶೇ. 50ರಷ್ಟಿದ್ದರೆ ಭಾರತದಂತಹ ರಾಷ್ಟ್ರಗಳಲ್ಲಿ ಶೇ. 90ರಷ್ಟಿದ್ದು, ಇದು ಈ ದೇಶದ ಅತ್ಯಂತ ದೊಡ್ಡ ಪಿಡುಗಾಗಿದೆ ಎಂದು ಹೇಳಿದರು.

ದೃಷ್ಟಿ ಕದಿಯುವ ಗಂಭೀರ ಕಾಯಿಲೆ: ಸಕ್ಕರೆ ಕಾಯಿಲೆಯಂತೆ ಜೀವನ ಪರ್ಯಂತ ಇರುವಂತಹ ಕಾಯಿಲೆ. ಇದನ್ನು ನಿಯಂತ್ರಿಸಬಹುದು. ಈ ರೋಗ 40 ವರ್ಷ ಮೇಲ್ಪಟ್ಟವರಲ್ಲಿ ಕಾಣಿಸಿ ಕೊಳ್ಳುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಗಂಭೀರ ಕಾಯಿಲೆ ಗುÉಕೋಮಾ ಕಾಯಿಲೆ ಎಂದು ಎಚ್ಚರಿಸಿದರು.

ಆಫ್ಟಿಕ್ ನರಕ್ಕೆ ಬಹಳಷ್ಟು ತೊಂದರೆ: ಗ್ಲುಕೋಮಾ ಕಾಯಿಲೆಯನ್ನು ನಿಶ್ಯಬ್ಧ ದೃಷ್ಟಿಚೋರ ಎನ್ನುತ್ತಾರೆ. ಇದರಲ್ಲಿ ಕಣ್ಣಿನ ಒಳಗಿನ ಒತ್ತಡ ಹೆಚ್ಚಾಗುತ್ತದೆ ಎಂದ ಅವರು, ಈ ಕಾಯಿಲೆ ಗಂಭೀರವಾಗಲು ಹೆಚ್ಚಿನ ಸಂದರ್ಭದಲ್ಲಿ ಕಣ್ಣಿನ ದೃಷ್ಟಿ ನರವಾದ ಆಫ್ಟಿಕ್‌ ನರಕ್ಕೆ ಬಹಳಷ್ಟು ತೊಂದರೆ ಉಂಟಾಗುತ್ತದೆ ಎಂದು ಹೇಳಿದರು.

ಅರಿವಿನ ಸಪ್ತಾಹ ಕಾರ್ಯಕ್ರಮ: ಈ ಕಾಯಿಲೆಯಿಂದ ನಾಶವಾದ ದೃಷ್ಟಿ ಮತ್ತು ಪುನಶ್ಚೇತನಗೊಳಿಸಲು ಸಾಧ್ಯವಿಲ್ಲ. ಮುಂದೆ ಬರುವಂತಹ ದೃಷ್ಟಿ ದೋಷವನ್ನು ಮಾತ್ರ ತಡೆಯಬಹುದು. ಪ್ರತಿ ವರ್ಷ ಮಾರ್ಚ್‌ 8 ರಿಂದ 14ರವರೆಗೆ ಈ ಕಾಯಿಲೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗ್ಲುಕೋಮಾ ಅರಿವಿನ ಸಪ್ತಾಹ ಕಾರ್ಯಕ್ರಮವಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತದೆ ಎಂದರು. ಕಣ್ಣಿನ ಒತ್ತಡ ಮತ್ತು ನರದ ಪರೀಕ್ಷೆಯನ್ನು ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡಿಸಿ ಗ್ಲುಕೋಮಾ ಕಂಡುಬಂದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದು ಇದರಿಂದ ದೂರ ಇರುವುದು ಸೂಕ್ತ ಎಂದು ಸಲಹೆ ನೀಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೀತೇಶ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಪ್ರಶಸ್ತಿ ವಿಜೇತ ಕಾರಸವಾಡಿ ಮಹದೇವು, ಕೃಷಿಕ್‌ ಲಯನ್ಸ್‌ ಸಂಸ್ಥೆ ಖಜಾಂಚಿ ಮಂಗಲ ಎಂ. ಯೋಗೀಶ್‌, ಸಮೃದ್ಧಿ ಲಯನ್ಸ್‌ನ ನೀನಾ ಪಟೇಲ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್‌, ಸಂತೇಕಸಲಗೆರೆ ಬಸವರಾಜು ಇದ್ದರು. ವರ್ಧಮಾನ್‌ ಜೈನ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಿರ್ಮಲಾ ಪ್ರಸಾದ್‌ ಹಾಗೂ ಆಸ್ಪತ್ರೆಯ ತಜ್ಞ ವೈದ್ಯರು ಕಣ್ಣಿನ ತಪಾಸಣೆ ನಡೆಸಿದರು. ಡಾ. ಹರೀಶ್‌ ಮಕ್ಕಳ ಪರೀಕ್ಷೆ ನಡೆಸಿ ಔಷಧಗಳನ್ನು ವಿತರಿಸಿದರು. ಡಾ. ನಿಸರ್ಗ ಅರುಣಾನಂದ ದಂ ತಪಾಸಣೆ ನಡೆಸಿದರು.

ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಪಾಸಣೆ ಮಾಡಿಸಿಕೊಂಡರು. ಅದರಲ್ಲಿ 15 ಮಂದಿಯನ್ನು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.