ಪಾಂಡವಪುರ: ಬಿಜೆಪಿಯಿಂದ ಅದ್ಧೂರಿ ಶೋಭಾಯಾತ್ರೆ


Team Udayavani, Apr 24, 2022, 2:11 PM IST

Untitled-1

ಪಾಂಡವಪುರ: ಶ್ರೀರಾಮನವಮಿ ಉತ್ಸವ ಸಮಿತಿ, ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿಯಿಂದ ಪಟ್ಟಣದಲ್ಲಿ ಶನಿವಾರ ಶ್ರೀರಾಮರ ಪಟ್ಟಾಭಿಷೇಕ ಮಹೋತ್ಸವ ಮತ್ತು ಶೋಭಾಯಾತ್ರೆ ವಿಜೃಂಭಣೆ ಯಿಂದ ಜರುಗಿತು.

ಪಟ್ಟಣದ ಐದುದೀಪವೃತ್ತದಿಂದ ಹೊರಟ ಶೋಭಾಯಾತ್ರೆಗೆ ಬಿಜೆಪಿ ಮುಖಂಡರು ಚಾಲನೆ ನೀಡಿದರು. ಶ್ರೀರಾಮ ಉತ್ಸವಮೂರ್ತಿ ಇರುವಂತಹ ಶೋಭಯಾತ್ರೆಯೂ ವಿವಿಧ ಕಲಾತಂಡಗಳ ಜೊತೆಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ನಂತರ ಪಾಂಡವ ಕ್ರೀಡಾಂಗಣವನ್ನು ತಲುಪಿತು. ಯಾತ್ರೆಯಲ್ಲಿ ಡೊಳ್ಳು ಕುಣಿತ, ನಂದಿಕುಣಿತ ವಿಶೇಷವಾಗಿ ಚಂಡೇಮೇಳ, ವಾದ್ಯ ಕಲಾತಂಡಗಳು ಭಾಗವಹಿಸಿದ್ದವು. ಮೆರವಣಿಗೆ ಯುದ್ದಕ್ಕೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಕೇಸರಿ ಶಾಲು ಪ್ರದರ್ಶಿಸಿ ಜೈಶ್ರೀರಾಮ್‌ ಎಂಬ ಘೋಷಣೆ ಕೂಗಿದರು.

ಶೋಭಯಾತ್ರೆ ನೇತೃತ್ವವಹಿಸಿದ್ದ ಬಿಜೆಪಿ ಮುಖಂಡ ಡಾ.ಎನ್‌.ಎಸ್‌.ಇಂದ್ರೇಶ್‌ ಯುವಕರೊಂದಿಗೆ ವಾದ್ಯಮೇಳಗಳಿಗೆ ತಕ್ಕಂತೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಪೊಲೀಸ್‌ ಭದ್ರತೆ: ಹಿಂದೂಪರ ಸಂಘಟನೆಗಳು ನಡೆಸಿದ ಶೋಭಾಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ಡಿವೈಎಸ್‌ಪಿ, ಸರ್ಕಲ್‌ ಇನ್ಸ್‌ ಪೆಕ್ಟರ್‌, ಸಬ್‌ಇನ್ಸ್‌ಪೆಕ್ಟರ್‌ ಸೇರಿ ಹಲವು ಪೊಲೀಸರು ಭದ್ರತೆ ನೀಡಿ ಅಹಿತಕರ ಘಟನೆಗಳು ಸಂಭವಿಸದಂತೆ ಶೋಭಾಯಾತ್ರೆ ಸುಗಮವಾಗಿ ನಡೆಸಿಕೊಟ್ಟರು. ಪಟ್ಟಣದ ಐದು ದೀಪವೃತ್ತದಿಂದ ಹೊರಟ ಮೆರವಣಿಗೆಯು ಎರಡೂವರೆ ಗಂಟೆಗೂ ಹೆಚ್ಚು ಕಾಲ ಪಟ್ಟಣದಲ್ಲಿ ಸಂಚರಿಸಿತು.

ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ: ಶೋಭಾಯಾತ್ರೆ ಹಿನ್ನೆಲೆಯಲ್ಲಿ ಪಟ್ಟಣದ ಹಲವೆಡೆ ಭಕ್ತರು, ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಮಾಡಲಾಯಿತು.

ರಂಗೋಲಿ, ವೇಷಭೂಷಣ ಸ್ಪರ್ಧೆ: ಶೋಭಾಯಾತ್ರೆ ಅಂಗವಾಗಿ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವ ಮಹಿಳೆಯರಿಗಾಗಿ 122 ಬಾಕ್ಸ್‌ ಗಳನ್ನು ಆಯೋಜನೆ ಮಾಡಲಾಗಿತ್ತು. ಭಾಗವಹಿಸಿದ ಮಹಿಳೆಯರು ನಿಯೋಜನೆಗೊಂಡಿದ್ದ ಬಾಕ್ಸ್‌ ಒಳಗಡೆಯೇ ರಂಗೋಲಿ ಬಿಡಿಸಬೇಕಿತ್ತು. ರಂಗೋಲಿ ಬಿಡಿಸಲು 1 ಗಂಟೆ ಕಾಲಾವಕಾಶ ನೀಡಲಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ 122 ಮಹಿಳೆಯರು ಭಾಗವಹಿಸಿ ವಿವಿಧ ಬಗೆಯ ರಂಗೋಲಿಗಳನ್ನು ಬಿಡಿಸಿ ಗಮನ ಸೆಳೆದರು. ಅದೇ ವೇದಿಕೆಯಲ್ಲಿ ಮಕ್ಕಳ ವೇಷಭೂಷಣ ಸ್ಪರ್ಧೆಯೂ ನಡೆಯಿತು.

ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು, ಶ್ರೀರಾಮ, ಹನುಮ ಸೇರಿ ವಿವಿಧ ಬಗೆಯ ವೇಷಗಳನ್ನು ಧರಿಸಿ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.