ಮಿಮ್ಸ್‌ನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳೇ ತಂತ್ರಜ್ಞರು!

ಥಿಯರಿಗಿಂತ ಪ್ರಾಕ್ಟಿಕಲ್ಸ್ಗೇ ಪ್ರಾಮುಖ್ಯತೆ • ಪರಿಣಾಮ ಫ‌ಲಿತಾಂಶದಲ್ಲಿ ಕುಸಿತ ••ಕಮರುತ್ತಿರುವ ವಿದ್ಯಾರ್ಥಿಗಳ ಭವಿಷ್ಯ

Team Udayavani, Jun 16, 2019, 1:16 PM IST

mandya-tdy-1..

ಮಿಮ್ಸ್‌ ಕಟ್ಟಡ

ಮಂಡ್ಯ: ಮಿಮ್ಸ್‌ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನೇ ತಾಂತ್ರಿಕ ವಿಭಾಗಗಳಲ್ಲಿ ತಂತ್ರಜ್ಞರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ. ಈ ವಿದ್ಯಾರ್ಥಿಗಳು ಥಿಯರಿಗಿಂತಲೂ ಹೆಚ್ಚಿನ ಸಮಯನ್ನು ಪ್ರಾಯೋಗಿಕ ತರಗತಿಗಳಲ್ಲೇ ಕಳೆಯುತ್ತಿದ್ದಾರೆ. ಥಿಯರಿ ಓದುವುದಕ್ಕೆ ಹಾಗೂ ಅದನ್ನು ಕರಗತ ಮಾಡಿಕೊಂಡು ಪರೀಕ್ಷೆ ಬರೆಯುವಲ್ಲಿ ವಿಫ‌ಲರಾಗುತ್ತಿದ್ದು, ಇದರ ಪರಿಣಾಮ ಪ್ರತಿ ವರ್ಷ ಪ್ಯಾರಾ ಮೆಡಿಕಲ್ ವಿಭಾಗದ ಫ‌ಲಿತಾಂಶ ಕುಸಿಯುತ್ತಲೇ ಇದೆ.

ಮಿಮ್ಸ್‌ನಲ್ಲಿ ತಂತ್ರಜ್ಞರು ಮಾಡಬೇಕಾದ ಬಹಳಷ್ಟು ಕೆಲಸವನ್ನು ಪ್ರಾಕ್ಟಿಕಲ್ ಹೆಸರಿನಲ್ಲಿ ವಿದ್ಯಾರ್ಥಿಗಳೇ ಮಾಡುತ್ತಿದ್ದಾರೆ. ಪ್ಯಾರಾಮೆಡಿಕಲ್ ಕಲಿಯಲು ಬರುವ ವಿದ್ಯಾರ್ಥಿಗಳ ಪೈಕಿ ಹುಡುಗಿಯರಿಗಿಂತ ಹುಡುಗರಿಗೆ ಹೆಚ್ಚು ಕೆಲಸ ನೀಡಲಾಗುತ್ತಿದೆ. ಹಗಲು-ರಾತ್ರಿ ಎನ್ನದೆ ದುಡಿಸಿಕೊಳ್ಳುತ್ತಿರುವುದರಿಂದ ಅವರಿಗೆ ಓದುವುದಕ್ಕೆ ಸಮಯಾವಕಾಶವೇ ಸಿಗದಂತಾಗಿದೆ. ಈ ಕೆಲಸದ ಒತ್ತಡ ಸಹಿಸಲಾಗದೆ ಎಷ್ಟೋ ವಿದ್ಯಾರ್ಥಿಗಳು ಅರ್ಧಕ್ಕೇ ಕೋರ್ಸ್‌ ಬಿಟ್ಟು ಹೋಗುತ್ತಿದ್ದಾರೆ. ಇದು ವಿಚಿತ್ರವೆನಿಸಿದರೂ ಸತ್ಯವಾಗಿದೆ.

ಆರು ವಿಭಾಗಗಳು: ಪ್ಯಾರಾಮೆಡಿಕಲ್ ಅಧ್ಯಯನದಲ್ಲಿ ಮೆಡಿಕಲ್ ಲ್ಯಾಬೋರೇಟರಿ, ಹೆಲ್ತ್ ಇನ್ಸ್‌ ಪೆಕ್ಟರ್‌, ಇಮೇಜಿಂಗ್‌ ತಂತ್ರಜ್ಞಾನ, ಆಪರೇಷನ್‌ ಥಿಯೇಟರ್‌ ಟೆಕ್ನಾಲಜಿ, ಅಪ್ತಾಲ್ಮಿಕ್‌ ಟೆಕ್ನಾಲಜಿ, ಮೆಡಿಕಲ್ ರೆಕಾರ್ಡ್‌ ಟೆಕ್ನಾಲಜಿ ಎಂಬ ಆರು ವಿಭಾಗಗಳಿವೆ.

ಪ್ರತಿ ವರ್ಷ ಒಂದೊಂದು ವಿಭಾಗಕ್ಕೂ ತಲಾ 20 ವಿದ್ಯಾರ್ಥಿಗಳಂತೆ ದಾಖಲು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಅರ್ಧದಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗುತ್ತಿದ್ದು, ಫ‌ಲಿತಾಂಶ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಈ ಫ‌ಲಿತಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಿಮ್ಸ್‌ ನಿರ್ದೇಶಕರು ಸೇರಿದಂತೆ ಪ್ಯಾರಾಮೆಡಿಕಲ್ ವಿಭಾಗದ ಮುಖ್ಯಸ್ಥರು ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ.

ಫ‌ಲಿತಾಂಶ ಕುಸಿತ: 2016ರಲ್ಲಿ 117 ವಿದ್ಯಾರ್ಥಿಗಳಿಗೆ 79, 20017ರಲ್ಲಿ 120 ವಿದ್ಯಾರ್ಥಿಗಳಿಗೆ 66 ಹಾಗೂ 2018ರಲ್ಲಿ 105 ವಿದ್ಯಾರ್ಥಿಗಳಿಗೆ 67 ವಿದ್ಯಾರ್ಥಿಗಳು ಮಾತ್ರ ಪ್ಯಾರಾಮೆಡಿಕಲ್ನಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಡಿಸ್ಟಿಂಕ್ಷನ್‌ನಲ್ಲಿ ಪಾಸಾದ ವಿದ್ಯಾರ್ಥಿಗಳನ್ನೂ ಕಾಲೇಜಿನಲ್ಲಿ ಕಾಣದಂತಾಗಿದೆ. ಪ್ರತಿ ವರ್ಷ ಅರ್ಧಕ್ಕೆ ಕೋರ್ಸ್‌ ಗಳನ್ನು ಬಿಟ್ಟುಹೋಗುವವರ ಸಂಖ್ಯೆಯೇ ಹೆಚ್ಚಾಗಿದೆ.

ಮೊದಲನೇ ವರ್ಷದಲ್ಲಿ ಎಲ್ಲಾ ವಿಭಾಗದವರಿಗೂ ಒಂದೇ ಮಾದರಿಯ ತರಗತಿಯನ್ನು ತೆಗೆದುಕೊಳ್ಳಲಾಗುತ್ತದೆ. ಎರಡನೇ ವರ್ಷದಿಂದ ಅವರವರ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪ್ರತ್ಯೇಕಗೊಳ್ಳುತ್ತಾರೆ.

ಆಸ್ಪತ್ರೆಯ ಎಕ್ಸ್‌-ರೇ, ಲ್ಯಾಬೋರೇಟರಿ, ಡಯಾಲಿಸಿಸ್‌, ಎಂಆರ್‌ಡಿ, ರಕ್ತನಿಧಿ ಕೇಂದ್ರ, ಪೆಥಾಲಜಿ, ಸ್ಕ್ಯಾನಿಂಗ್‌ ಸೆಂಟರ್‌, ಎಕೋ, ಇಸಿಜಿ, ಶಸ್ತ್ರಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ತಾಂತ್ರಿಕ ವಿಭಾಗದಲ್ಲಿ ಸರ್ಕಾರಿ ಸಿಬ್ಬಂದಿ ಇದ್ದರೂ ಬೇಡಿಕೆಯಷ್ಟಿಲ್ಲ. ಈ ಕೊರತೆ ನೀಗಿಸಲು ಹೊರ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವ‌ರ ನಡುವೆಯೂ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹಾಕಲಾಗುತ್ತಿದೆ. ತಂತ್ರಜ್ಞರ ನಿಗದಿಯಷ್ಟು ಇಲ್ಲದೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಅಧಿಕವಾಗಿರುವುದರಿಂದ ರೋಗಿಗಳ ಒತ್ತಡವನ್ನು ದೂರ ಮಾಡುವ ಉದ್ದೇಶದಿಂದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳನ್ನೇ ಅಲ್ಲಿನ ಕೆಲಸಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾತುಗಳು ಮಿಮ್ಸ್‌ ವಲಯದಿಂದಲೇ ಕೇಳಿ ಬರುತ್ತಿವೆ.

ವಾರದಲ್ಲಿ ಮೂರು ದಿನ ಥಿಯರಿ: ಪ್ರತಿ ದಿನ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ಥಿಯರಿ ಇರುವುದಿಲ್ಲ. ಪ್ರಾಕ್ಟಿಕಲ್ಸ್ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಆಯಾ ವಿಭಾಗದ ಬೋಧಕರು ವಾರದಲ್ಲಿ ಎರಡರಿಂದ ಮೂರು ದಿನ ಮಾತ್ರ ಥಿಯರಿ ತರಗತಿಗಳನ್ನು ತೆಗೆದುಕೊಳ್ಳುವರು. ಹಿಂದೆಲ್ಲಾ ಥಿಯರಿಗೆ 45 ಅಂಕಗಳಿದ್ದು, ಈಗ ಗರಿಷ್ಠ ಅಂಕವನ್ನು 100 ಕ್ಕೆ ನಿಗದಿಪಡಿಸಲಾಗಿದೆ. ಪ್ರಾಕ್ಟಿಕಲ್ಸ್ ವಿದ್ಯಾರ್ಥಿಗಳಿಗೆ ಎಷ್ಟು ಮುಖ್ಯವೋ ಅದೇ ರೀತಿ ಥಿಯರಿಯೂ ಮುಖ್ಯವಾಗಿದೆ. ಹೆಚ್ಚು ಕಾಲ ಆಸ್ಪತ್ರೆಯ ವಿವಿಧ ತಾಂತ್ರಿಕ ವಿಭಾಗದಲ್ಲೇ ಇರುವ ವಿದ್ಯಾರ್ಥಿಗಳು ಥಿಯರಿಯನ್ನು ಓದಲು, ಅದನ್ನು ಅರ್ಥೈಸಿಕೊಂಡು ಬರೆಯಲಾಗದೆ ಪರೀಕ್ಷೆಯಲ್ಲಿ ನಪಾಸಾಗುತ್ತಿದ್ದಾರೆ. ಇದು ಫ‌ಲಿತಾಂಶ ಕುಸಿಯುವುದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಕಮರುತ್ತಿರುವ ಭವಿಷ್ಯ: ಬೋಧಕರು ವಿದ್ಯಾರ್ಥಿಗಳನ್ನು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಪ್ರಾಯೋಗಿಕ ತರಗತಿ ಹೆಸರಿನಲ್ಲಿ ದುಡಿಸಿಕೊಳ್ಳುವ ಮೂಲಕ ಅವರ ಭವಿಷ್ಯವನ್ನು ಕಮರಿಹೋಗುವಂತೆ ಮಾಡುತ್ತಿದ್ದಾರೆ. ಪ್ಯಾರಾಮೆಡಿಕಲ್ ಮಹತ್ವವನ್ನು ಬೋಧಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡುತ್ತಿಲ್ಲ. ಕೋರ್ಸ್‌ನ ಉಪಯೋಗ ಪಡೆದು ಭವಿಷ್ಯವನ್ನು ಯಾವ ರೀತಿ ಉಜ್ವಲಗೊಳಿಸಿಕೊಳ್ಳಬೇಕೆಂಬ ವಿಚಾರ ತಿಳಿಯದ ವಿದ್ಯಾರ್ಥಿಗಳು ಅರ್ಧಂಬರ್ಧ ಕೋರ್ಸ್‌ ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಟೆಕ್ನಿಷಿಯನ್ಸ್‌ಗಳ ಜೊತೆ ವಿದ್ಯಾರ್ಥಿಗಳ ಹೊಂದಾಣಿಕೆ: ಪ್ಯಾರಾಮೆಡಿಕಲ್ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿರುವ ಆಯಾ ವಿಭಾಗಗಳ ತಂತ್ರಜ್ಞರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಲಿಯುವ ಆಸಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಏಕೆಂದರೆ, ಪ್ಯಾರಾಮೆಡಿಕಲ್ ಕೋರ್ಸ್‌ ಪೂರ್ಣಗೊಳಿಸದಿದ್ದರೂ ಆಸ್ಪತ್ರೆಗಳಲ್ಲಿ ಕಲಿಸಿದ ತಂತ್ರಜ್ಞರ ನೆರವಿನಿಂದ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕೆಂಬ ಉದ್ದೇಶವೂ ಇದರಲ್ಲಿದೆ. ಇದೇ ಕಾರಣಕ್ಕೆ ತಂತ್ರಜ್ಞರು ಮಾಡಬೇಕಾದ ಕೆಲಸವನ್ನೆಲ್ಲಾ ವಿದ್ಯಾರ್ಥಿಗಳೇ ಮಾಡುತ್ತಿದ್ದಾರೆ. ತಂತ್ರಜ್ಞರ ಗೈರಾದಾಗಲೂ ವಿದ್ಯಾರ್ಥಿಗಳೇ ಎಲ್ಲಾ ಕೆಲಸವನ್ನು ನಿಭಾಯಿಸುತ್ತಿದ್ದು, ಥಿಯರಿ ಬಗ್ಗೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ಫ‌ಲಿತಾಂಶ ಕುಸಿಯುವುದಕ್ಕೆ ಮತ್ತೂಂದು ಕಾರಣವಾಗಿದೆ. ಕಲಿತಷ್ಟೇ ಸಾಕು ಎಂದು ಹಲವು ವಿದ್ಯಾರ್ಥಿಗಳು ಕೋರ್ಸ್‌ ಕೈಬಿಟ್ಟು ಉದ್ಯೋಗದ ಹಾದಿ ಹಿಡಿಯುತ್ತಿದ್ದಾರೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.