ಮೋದಿಯೊಳಗೆ ಪಟೇಲ್‌ ನಾಯಕತ್ವ


Team Udayavani, Feb 10, 2019, 7:20 AM IST

modiy.jpg

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯೊಳಗೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹೋಲುವಂತಹ ನಾಯಕತ್ವವಿರುವ ಕಾರಣ ಭಾರತ ಪ್ರಗತಿಯಲ್ಲಿ ನಿರ್ಣಾಯಕ ಘಟ್ಟವನ್ನು ತಲುಪಿದೆ ಎಂದು ಕೇಂದ್ರ ಮಾಜಿ ಸಚಿವ ಎಸ್‌.ಎಂ.ಕೃಷ್ಣ ಬಣ್ಣಿಸಿದರು.

ನಗರದ ಚಿಕ್ಕೇಗೌಡನದೊಡ್ಡಿಯಲ್ಲಿರುವ ಬಾಲಗಂಗಾಧರನಾಥ ಸ್ವಾಮೀಜಿ ಸಮುದಾಯ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಟೇಲ್‌ ಅವರಂತಹ ಶಕ್ತಿಯುತವಾದ, ಗಟ್ಟಿ ನಾಯಕತ್ವವನ್ನು ನರೇಂದ್ರ ಮೋದಿ ಅವರಲ್ಲಿ ನಾವು ನೋಡುತ್ತಿದ್ದೇವೆ. ಅವರನ್ನು ಮತ್ತೆ ಐದು ವರ್ಷಗಳವರೆಗೆ ದೇಶದ ಪ್ರಧಾನಿಯಾಗಿ ಮುಂದುವರಿಸುವುದು ಇಂದಿನ ನಮ್ಮ ಅಗತ್ಯ ಮತ್ತು ಅನಿವಾರ್ಯತೆಯಾಗಿದೆ ಎಂದು ಹೇಳಿದರು.

ದೇಶ ಕವಲುದಾರಿಯಲ್ಲಿರುವುದರಿಂದ ಅದನ್ನು ಹೆದ್ದಾರಿಗೆ ತರಬೇಕಿದೆ. ಆ ನಿಟ್ಟಿನಲ್ಲಿ ಮೋದಿ ಭಾಗಶಃ ಪೂರ್ಣ ಹಂತ ತಲುಪಿದ್ದಾರೆ. ಅದನ್ನು ಪರಿಪೂರ್ಣಗೊಳಿಸಲು ಮತ್ತೆ ಅವರ ನಾಯಕತ್ವ ದೇಶಕ್ಕೆ ಸಿಗಬೇಕು ಎಂದು ಹೇಳಿದರು.

ಕಳೆದ ಐದು ವರ್ಷದಲ್ಲಿ ಭಾರತದಲ್ಲಿ ದೊಡ್ಡ ಕ್ರಾಂತಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಈ ಕ್ರಾಂತಿಯ ಹರಿಕಾರರಾಗಿದ್ದಾರೆ. ದೇಶಕ್ಕೆ ಸಮರ್ಥ ನಾಯಕತ್ವ ದೊರಕಿರುವುದಲ್ಲದೆ ದಷ್ಟಪುಷ್ಟ ಸರ್ಕಾರವೂ ಲಭಿಸಿದೆ. ಜನಪರವಾದಂತಹ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಜನರ ಮನಗೆದ್ದಿದ್ದಾರೆ. ಅವರಿಂದ ಯಾವ ಪ್ರಮಾಣದಲ್ಲಿ ಜನರಿಗೆ ಅನುಕೂಲವಾಗಿದೆ ಎನ್ನುವುದನ್ನು ಗುಣಾತ್ಮಕವಾಗಿ ಚರ್ಚಿಸಬೇಕಿದೆ ಎಂದು ಹೇಳಿದರು.

ಗುಣಾವಗುಣಗಳ ಚರ್ಚೆ ಅಗತ್ಯ: ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಕೊಟ್ಟ ಕಾರ್ಯಕ್ರಮಗಳ ಗುಣಾವಗುಣಗಳ ಬಗ್ಗೆ ಚರ್ಚೆ ನಡೆದರೆ ಅದರಿಂದ ಜನರಿಗೆ ಹೆಚ್ಚು ತಿಳಿವಳಿಕೆ ಬರಲಿದೆ. ಗುಣಾತ್ಮಕ ಚರ್ಚೆಯಲ್ಲಿ ತಾವು ಮುಂದೆ ಇದ್ದೇವೆ ಎನ್ನುವುದನ್ನು ದೇಶದ ಸಮುದಾಯಕ್ಕೆ ತೋರಿಸಬೇಕಿದೆ ಎಂದು ತಿಳಿಸಿದರು.

ನೆರೆಯ ದೇಶ ಪಾಕಿಸ್ತಾನ ನಮ್ಮ ದೇಶದ ಮೇಲೆ ಪದೇ ಪದೇ ದಾಳಿ ನಡೆಸುತ್ತಾ ಅಟ್ಟಹಾಸ ಮೆರೆಯುತ್ತಿತ್ತು. ದುಷ್ಟ ಪಾಕಿಸ್ತಾನಕ್ಕೆ ಹೊಸ ಸಂದೇಶ ಕಳಿಸುವ ಸಲುವಾಗಿಯೇ ಹೊಸ ದೃಢ ನಿಲುವನ್ನು ಕೈಗೊಂಡರು. ಅದೇ ಸರ್ಜಿಕಲ್‌ ಸ್ಟ್ರೈಕ್‌. ಯಾವ ಭಾಷೆಯಲ್ಲಿ ಪಾಕಿಸ್ತಾನಕ್ಕೆ ಉತ್ತರ ನೀಡಬೇಕೋ ಅದೇ ಧಾಟಿಯಲ್ಲಿ ಉತ್ತರಿಸಿ ರಾಷ್ಟ್ರಕ್ಕೆ ದೊಡ್ಡ ಕೊಡುಗೆ ನೀಡಿದರು ಎಂದು ಬಣ್ಣಿಸಿದರು.

ಮೋದಿಯೊಳಗೆ ಪಟೇಲ್‌ ನಾಯಕತ್ವ: ಮೋದಿ ಒಬ್ಬ ಸರ್ವಾಧಿಕಾರಿ ಎಂದು ಟೀಕಿಸುತ್ತಾರೆ. ಅದೇ ಕಾರಣಕ್ಕೆ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿರುವುದು. ಅಂತಹದೊಂದು ಗಟ್ಟಿ ನಾಯಕತ್ವ ದೇಶಕ್ಕೆ ಅಗತ್ಯ. ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್‌. ಆದರೆ, ಅವರಿಗೆ ನೀಡಬೇಕಾದ ಪ್ರಾಮುಖ್ಯತೆಯನ್ನು ನಾವು ಕೊಡಲೇ ಇಲ್ಲ. ಸರ್ದಾರ್‌ ಪಟೇಲ್‌ ನಾಯಕತ್ವವಿಲ್ಲದಿದ್ದರೆ ದೇಶದ 512 ಸಂಸ್ಥಾನಗಳನ್ನು ವಿಲೀನಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣವಾಗುತ್ತಿರಲಿಲ್ಲ. ಅದರ ಕೀರ್ತಿ ಪಟೇಲರಿಗೆ ಸಲ್ಲಬೇಕು ಎಂದು ತಿಳಿಸಿದರು.

ಬಿಜೆಪಿ ಈಗ ಬಂದು ಮುದುಡಿಹೋಗುವ ಪಕ್ಷವಲ್ಲ. ಯುವ ಜನಾಂಗಕ್ಕೆ ಸ್ಫೂರ್ತಿ ತರುವುದು ಬಿಜೆಪಿ ಧ್ಯೇಯ ವನ್ನು ಬಿಜೆಪಿ ಹೊಂದಿದೆ. ವಾಜಪೇಯಿಯನ್ನು ಧರ್ಮರಾಯನಿಗೆ ಹೋಲಿಸಿದ ಎಸ್‌.ಎಂ.ಕೃಷ್ಣ, ಅಂತಹ ನಾಯಕರಿದ್ದ ಬಿಜೆಪಿಗೆ ಬಂದಿರೋದು ನನ್ನ ಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿ.ಸೋಮಶೇಖರ್‌, ಎನ್‌.ಶಿವಣ್ಣ, ಪರಾಜಿತ ಲೋಕಸಭಾ ಅಭ್ಯರ್ಥಿ ಡಾ.ಸಿದ್ದರಾಮಯ್ಯ, ಮಂಡ್ಯ ಜಿಲ್ಲಾ ಉಸ್ತುವಾರಿ ಇ.ಅಶ್ವತ್ಥ್ ನಾರಾಯಣ್‌, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ಮಾಜಿ ಅಧ್ಯಕ್ಷ ಎಚ್.ಹೊನ್ನಪ್ಪ, ಬಿಜೆಪಿ ಮುಖಂಡರಾದ ಕೆ.ಎಸ್‌.ನಂಜುಂಡೇಗೌಡ, ಎನ್‌.ಶಿವಣ್ಣ, ಮಲ್ಲಿಕಾರ್ಜುನ್‌, ಎಚ್.ಆರ್‌.ಅರವಿಂದ್‌, ಮಧುಚಂದನ್‌, ಅರುಣ್‌ಕುಮಾರ್‌, ವಿದ್ಯಾ ನಾಗೇಂದ್ರ, ಪಾಲಹಳ್ಳಿ ಲಿಂಗಣ್ಣ, ದಾಸನದೊಡ್ಡಿ ರಾಮೇಗೌಡ, ವಕೀಲ ದೊರೆಸ್ವಾಮಿ, ಡಾ.ಸದಾನಂದ ಇತರರಿದ್ದರು.

ಮಹಾಘಟ ಬಂಧನ್‌ ಬಗ್ಗೆ ವ್ಯಂಗ್ಯ: ಮೋದಿ ಅವರನ್ನು ಸೋಲಿಸಲು 20ಕ್ಕೂ ಹೆಚ್ಚು ಪಕ್ಷಗಳು ಒಂದಾಗಿವೆ. ಆದರೆ, ಆ ಪಕ್ಷಗಳಲ್ಲಿ ನಾಯಕತ್ವ ಯಾರದ್ದು ಅನ್ನೋದೆ ಗೊತ್ತಿಲ್ಲ. ಅದಕ್ಕಾಗಿಯೇ ಚುನಾವಣೆ ಬಳಿಕ ಹೇಳುತ್ತೇವೆ ಅಂತ ಮಹಾಘಟ ಬಂಧನ್‌ ಬಗ್ಗೆ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.