ಕ್ಷೇತ್ರದ ಜನರದ್ದು ಪ್ರಬುದ್ಧ ರಾಜಕೀಯ
Team Udayavani, Mar 9, 2020, 5:50 PM IST
ಮಂಡ್ಯ: ಜಿಲ್ಲೆಯ ಜನರು ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳುವಲ್ಲಿ ಪ್ರಬುದ್ಧರಾಗಿದ್ದಾರೆ. ರಾಜಕಾರಣದಲ್ಲಿ ದೇಶವೇ ತಿರುಗಿನೋಡುವಷ್ಟರ ಮಟ್ಟಿಗೆ ಹಿಡಿತ ಸಾಧಿಸಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದ ಸುಭಾಷ್ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ರಾಜಕಾರಣದ ಹಿಡಿತ ಸಾಬೀತುಪಡಿಸಿದ್ದಾರೆ. ಇದು ಹಿಂದೆಯೂ ನಡೆದಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಬಿಜೆಪಿ ಪ್ರಬುದ್ಧವಾಗಿ ಬೆಳೆಯುವಂತಹ ಕಾಲ ಪಕ್ವವಾಗಿದೆ. ಈ ಅವಕಾಶವನ್ನು ಮುಖಂಡರು, ಕಾರ್ಯಕರ್ತರು ಸದ್ಬಳಕೆ ಮಾಡಿಕೊಂಡು ಪಕ್ಷ ಸಂಘಟನೆ ಮಾಡಬೇಕು. ಅದಕ್ಕೆ ನಾನು ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಕಮಲ ಅರಳುವುದಿಲ್ಲ ಎಂದು ವಿರೋಧಿಗಳು ಸಾರಿ ಹೇಳಿದ್ದರು. ಆದರೆ, ಬಿಜೆಪಿ ಗೆದ್ದು ತೋರಿಸಲಿಲ್ಲವೇ?. ಮತದಾರರು ಪ್ರಬುದ್ಧರಾಗಿದ್ದಾರೆ. ಸರಿಯಾದ ಆಯ್ಕೆ ಮಾಡುತ್ತಾರೆ ಎನ್ನುವುದಕ್ಕೆ ಚುನಾವಣಾ ಫಲಿತಾಂಶಗಳೇ ಸಾಕ್ಷಿ ಎಂದು ಹೇಳಿದರು.
ಎಸ್.ಎಂ.ಕೃಷ್ಣ ಗರಡಿಯಲ್ಲಿ ಬೆಳೆದವನು: ನನಗೂ ಮಂಡ್ಯಕ್ಕೂ ಅವಿನಾಭಾವ ಸಂಬಂಧವಿದೆ. ಎಸ್. ಎಂ.ಕೃಷ್ಣ ಅವರು ನನ್ನ ರಾಜಕೀಯ ಗುರು. ಅವರೊಬ್ಬ ಪ್ರಬುದ್ಧ ಮತ್ತು ಮೌಲ್ಯಯುತ ರಾಜಕಾರಣಿ. ಅಂತಹವರ ಗರಡಿಯಲ್ಲಿ ಬೆಳೆದವನು ನಾನು. ಇದರ ಜೊತೆಗೆ ಈ ಜಿಲ್ಲೆಯ ಅನ್ನದಾತ ಸರ್ ಎಂ ವಿಶ್ವೇಶ್ವರಯ್ಯನವರ ತವರೂರಿನವನು. ಇದೊಂದು ಹೆಮ್ಮೆ ನನಗಿದೆ. ಮಂಡ್ಯ ಜಿಲ್ಲೆ ಸಮೃದ್ಧಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಮಂಡ್ಯ ಎಂದರೆ ಬಲು ಪ್ರೀತಿ. ಈ ಜಿಲ್ಲೆಯ ಋಣದಲ್ಲಿ ನಾನೂ ಇದ್ದೇನೆ ಎಂದು ಹೇಳಿದರು. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ.
ಕಾಶ್ಮೀರದಲ್ಲಿ 370ನೇ ವಿಧಿ ತೆಗೆದುಹಾಕಿರುವುದು. ತ್ರಿವಳಿ ತಲಾಖ್ ರದ್ದು ಮಾಡಿರುವುದು ಸೇರಿದಂತೆ ಪ್ರಧಾನಿ ದಿಟ್ಟ ಕ್ರಮಗಳನ್ನು ಅಲ್ಪ ಸಂಖ್ಯಾತರೂ ಕೂಡ ಒಪ್ಪಿದ್ದಾರೆ. ಆದರೆ 70 ವರ್ಷಗಳಲ್ಲಿ ಕಾಂಗ್ರೆಸ್ ಮಾಡಲಾಗದ ಕೆಲಸವನ್ನು ಪ್ರಧಾನಿ ಮೋದಿ 7 ವರ್ಷದಲ್ಲಿ ಮಾಡಿ ತೋರಿಸಿದ್ದಾರೆ. ಈಗ ಕಾಂಗ್ರೆಸ್ನವರು ಅಪಪ್ರಚಾರ ಮಾಡುತ್ತಿದ್ದಾರೆ. ಅಂಬೇಡ್ಕರ್ ನಿಧನರಾದಾಗ ಇದೇ ಕಾಂಗ್ರೆಸ್ನವರು ದೆಹಲಿಯಲ್ಲಿ ಅಂತ್ಯ ಸಂಸ್ಕಾರ ಮಾಡಲು ಒಂದು ಅಡಿ ಜಾಗ ಕೊಡಲಿಲ್ಲ. ಗಾಂಧೀಜಿ ಅವರ ಬಗ್ಗೆ ಕಾಂಗ್ರೆಸ್ಗೆ ಯಾವತ್ತೂ ಒಲವೇ ಇರಲಿಲ್ಲ. ಈಗ ಡಾ.ಅಂಬೇಡ್ಕರ್ ಮತ್ತು ಗಾಂಧೀಜಿ ಅವರನ್ನು ಮುಂದೆ ಇಟ್ಟು ಮತ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ನಡೆಸುವ ಅವಕಾಶ ಸಿಕ್ಕಿದೆ. ಜನಪರ ಕೆಲಸಗಳನ್ನು ಒಗ್ಗಟ್ಟಿನಿಂದ ಮಾಡೋಣ, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಇದ್ದರೂ ನನ್ನ ಬಳಿ ಹೇಳಿಕೊಂಡು ಒಳ್ಳೆಯ ಕೆಲಸಗಳನ್ನು ಮಾಡಿಸಿಕೊಳ್ಳಿ. ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ನಾನು ಸದಾ ಸಿದ್ದ. ಸರ್ಕಾರ ಇರುವುದೇ ಜನರಿಗೆ ಒಳ್ಳೆಯದನ್ನು ಮಾಡಬೇಕು ಎನ್ನುವ ಆಶಯದೊಂದಿಗೆ ಆಡಳಿತ ನಡೆಸುತ್ತದೆ ಎಂದು ಹೇಳಿದರು.
ಸಚಿವರನ್ನು ಸ್ವಾಗತಿಸಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶ ಮಾತನಾಡುವ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯಕುಮಾರ್ ಮಾಜಿ ಅಧ್ಯಕ್ಷ ನಾಗಣ್ಣಗೌಡ, ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಡಾ.ಸಿದ್ದ ರಾಮಯ್ಯ, ಜಿಪಂ ಸದಸ್ಯ ಚಂದಗಾಲು ಶಿವಣ್ಣ , ಕೆ.ಎಸ್. ನಂಜುಂಡೇಗೌಡ, ಎಸ್.ಆರ್.ಅರವಿಂದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ