ಅಂಬರೀಶ್‌ ಸಾಧನೆ ಜನರಿಗೆ ಗೊತ್ತಿದೆ: ಸಿಎಂಗೆ ತಿರುಗೇಟು


Team Udayavani, Mar 1, 2019, 7:12 AM IST

ambi-sa.jpg

ನಾಗಮಂಗಲ: ಮಂಡ್ಯ ಜಿಲ್ಲೆಯಲ್ಲಿ ಅಂಬರೀಶ್‌ ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ತಿಳಿಸಲು ಸಿಎಂ ಕುಮಾರಸ್ವಾಮಿ ನಮಗೆ ಒಂದು ಅವಕಾಶ ಕಲ್ಪಿಸಿದ್ದಾರೆ ಎಂದು ಮಂಡ್ಯ ಜಿಲ್ಲೆಗೆ ಅಂಬರೀಶ್‌ ಕೊಡುಗೆ ಶೂನ್ಯ ಎಂಬ ಸಿಎಂ ಹೇಳಿಕೆಗೆ ಮಂಡ್ಯ ಲೋಕಸಭಾ ಸ್ಪರ್ಧಾಕಾಂಕ್ಷಿ ಸುಮಲತಾ ತಿರುಗೇಟು ನೀಡಿದರು.

ಪಟ್ಟಣದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ  ಅಂಬರೀಶ್‌ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿ, ಅಂಬರೀಶ್‌ ಜಿಲ್ಲೆಗೆ ನೀಡಿರುವ ಕೊಡುಗೆಗಳ ಬಗ್ಗೆ ನಾನು ಹೇಳುವ ಅವಶ್ಯಕತೆ ಇಲ್ಲ. ಏಕೆಂದರೆ ಜಿಲ್ಲೆಯ ಪ್ರತಿಯೊಬ್ಬ ಮತದಾರನಿಗೂ ಗೊತ್ತಿದೆ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು. ಅವರು ಎಂದೂ ಪ್ರಚಾರಕ್ಕೋಸ್ಕರ ಕೆಲಸ ಮಾಡಿದರವರಲ್ಲ. ಅವರ ಸಾಧನೆಗಳನ್ನು ಅವರ ಕೆಲಸಗಳೇ ಹೇಳುತ್ತವೆ. ಅವರ ಸಾಧನೆಗಳು ಏನು ಎಂಬುದಕ್ಕೆ ಜನತೆ ಈ ಬಾರಿಯ ಚುನಾವಣೆಯಲ್ಲಿ ಉತ್ತರಿಸಲಿದ್ದಾರೆ ಎಂದು ಹೇಳಿದರು. 

ನನ್ನ ನಿರ್ಧಾರ ವೈಯಕ್ತಿಕ: ಅಂಬರೀಶ್‌ ಬದುಕಿರುವವರೆಗೂ ದೇವೇಗೌಡರನ್ನು ತಂದೆ ಸಮಾನರಾಗಿ ಕಾಣುತ್ತಿದ್ದರು. ನಾನು ಕೂಡ ಇಂದಿಗೂ ಅವರನ್ನು ಅದೇ ಗೌರವದಿಂದ ಕಾಣುತ್ತಿದ್ದೇನೆ. ನನಗೆ ದ್ವೇಷದ ರಾಜಕಾರಣ ಮಾಡಲು ಬರುವುದಿಲ್ಲ. ಯಾರ ವಿರುದ್ಧವೂ ಮಾತನಾಡುವುದಿಲ್ಲ, ನನ್ನ ನಿರ್ಧಾರ ವೈಯಕ್ತಿಕ. ಇದನ್ನು ಅಂಬರೀಶ್‌ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬೆಂಬಲಿಸಿದ್ದಾರೆ.

ಅಭಿಮಾನಿಗಳ ಒತ್ತಾಯಕ್ಕೆ ಮಣಿದು ರಾಜಕೀಯ ಪ್ರವೇಶಿಸಿದ್ದೇನೆಯೇ ಹೊರತು ಅಧಿಕಾರ ಗಳಿಸುವುದಕ್ಕೆ, ಸ್ವಾರ್ಥಕ್ಕಾಗಿ ಅಲ್ಲ. ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷ ಜಿಲ್ಲೆಯಲ್ಲಿ ಸರ್ವನಾಶವಾಗುತ್ತಿದೆ. ಆದ್ದರಿಂದ ನೀವು ಸ್ಪರ್ಧಿಸಬೇಕು ಎಂದು ದುಂಬಾಲು ಬಿದ್ದಿದ್ದಾರೆ. ಅವರ ಒತ್ತಡಕ್ಕೆ ಮಣಿದು ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದೇನೆ ಎಂದು ಹೇಳಿದರು.

ಅಂಬಿ ಹೆಸರು ಉಳಿಸುವೆ: ನನಗೆ ರಾಜಕೀಯದಿಂದ ಜೀವನ ಸಾಗಿಸುವ ಅನಿವಾರ್ಯತೆ ಇಲ್ಲ, ನಾನು ಮತ್ತು ನನ್ನ ಮಗ ಜೀವನ ನಿರ್ವಹಣೆ ಮಾಡಲು ನನ್ನ ಪತಿ ಅಂಬಿ ಸಂಪಾದಿಸಿರುವುದೇ ಸಾಕು. ಅಂಬರೀಶ್‌ ಹೆಸರು ಅಳಿಸಲು ನಾನು ಬಿಡುವುದಿಲ್ಲ, ಅವರ ಹೆಸರನ್ನು ನಾನು ಉಳಿಸುತ್ತೇನೆ.

ಅಭಿಮಾನಿಗಳ ಮೇಲೆ ಹೊಂದಿದ್ದ ಪ್ರೀತಿಯಂತೆ ಅವರ ಮಾರ್ಗದಲ್ಲಿಯೇ ಅಭಿಮಾನಿಗಳನ್ನು ಉಳಿಸಿಕೊಳ್ಳುತ್ತೇನೆ, ಅಂಬಿ ಸ್ವಭಾವ, ವ್ಯಕ್ತಿತ್ವ ಇತರೆ ಯಾವುದೇ ರಾಜಕಾರಣಿಗಳಿಗೂ ಇಲ್ಲ, ಅವರ ವ್ಯಕ್ತಿತ್ವ ಎಂತಹದ್ದು ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದರು. ನನ್ನ ಮುಂದಿನ ತೀರ್ಮಾನ ನಿಮ್ಮಗಳ ಆಶಯದಂತೆ, ಆದ್ದರಿಂದ ನಿಮ್ಮೆಲ್ಲರ ಆಶೀರ್ವಾದ ನನಗೆ ಅವಶ್ಯವೆಂದು ಸುಮಲತಾ ಕಾರ್ಯಕರ್ತರಲ್ಲಿ ಕೈಮುಗಿದು ಮನವಿ ಮಾಡಿದರು. 

ಬೆಂಬಲಕ್ಕೆ ನಿಂತ ಕೈ ಕಾರ್ಯಕರ್ತರು: ಸುಮಲತಾ ಈ ಬಾರಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿದರೆ ಸಂತೋಷ. ಒಂದು ವೇಳೆ ಟಿಕೆಟ್‌ ಸಿಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುವಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಭೆಯಲ್ಲಿ ಸುಮಲತಾರನ್ನು ಒತ್ತಾಯಿಸಿದರು. ನೀವು ಯಾವ ಪಕ್ಷದಿಂದ ಸ್ಪರ್ಧಿಸಿದರೂ ಸರಿ, ಆದರೆ ನೀವು ಸ್ಪರ್ಧಿಸಬೇಕು. ನಿಮ್ಮ ಜೊತೆ ನಾವಿದ್ದೇವೆ, ನಿಮಗಾಗಿ ನಾವು ಪ್ರಾಣ ನೀಡಲು ಸಿದ್ದರಿದ್ದೇವೆ.

ನೀವು ಎದೆಗುಂದುವುದು ಬೇಡ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಹಿಂದೆ ಸರಿಯಬೇಡಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಮಲತಾ, ನಾನು ದಿಟ್ಟ ಹೆಜ್ಜೆ ಇಟ್ಟಿದ್ದೇನೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ ಎಂದು ಭರವಸೆ ನೀಡಿದರು. ನಾನು ಕಾಂಗ್ರೆಸ್‌ ಪಕ್ಷ ಜಿಲ್ಲೆಯಲ್ಲಿ ನಶಿಸಲು ಬಿಡುವುದಿಲ್ಲ, ಪಕ್ಷ ಬಲವರ್ಧನೆಗಾಗಿ ಶ್ರಮಿಸುತ್ತೇನೆ ಎಂದರು.

ಅಂಬಿ ಸಾಧನೆ ಪ್ರಶ್ನಿಸುವ ನೈತಿಕತೆ ಇಲ್ಲ: ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಮಾತನಾಡಿ, ದೇವೇಗೌಡರ ಕುಟುಂಬ ಜಿಲ್ಲೆಗೆ ನೀಡಿರುವ ಕೊಡುಗೆಯಾದರು ಏನು ? ಅಂಬರೀಶ್‌ ಸಾಧನೆಯನ್ನು ಪ್ರಶ್ನಿಸುವ ನೈತಿಕತೆ ಅವರಿಗಿಲ್ಲ. ನಮಗೆ ನಮ್ಮ ಜಿಲ್ಲೆಯವರು ಬೇಕು. ನಾವು ಸ್ವಾಭಿಮಾನಿಗಳು. ನಮ್ಮ ಜಿಲ್ಲೆಗೆ ಹೊರ ಜಿಲ್ಲೆಯ ಅಭ್ಯರ್ಥಿ ಅವಶ್ಯಕತೆ ಇಲ್ಲ, ಮುಖ್ಯಮಂತ್ರಿಗಳಾಗಿ ಅವರ ಹುದ್ದೆಗೆ ತಕ್ಕಂತೆ ಮಾತನಾಡುವುದನ್ನು ಕಲಿಯಲಿ ಎಂದು ಛೇಡಿಸಿದರು.

ಅಂಬರೀಶ್‌ ಮರಣ ಹೊಂದಿದ ನಂತರ ಅವರ ಬಗ್ಗೆ ಮಾತನಾಡುವವರು ಅವರು ಬದುಕಿರುವಾಗ ಏಕೆ ಸುಮ್ಮನಿದ್ದರು. ಸುಮಲತಾ ಅವರೂ ಜಿಲ್ಲೆಗೆ ಏನು ಮಾಡದೆ ಹೋದರೂ ಪರವಾಗಿಲ್ಲ ಅವರು ಗೆದ್ದು ಸುಮ್ಮನೆ 5 ವರ್ಷ ಪೂರೈಸಲಿ. ಜೆಡಿಎಸ್‌ನವರು ಹೇಳಿಕೊಳ್ಳುವ ಏಳು ಜನ ಶಾಸಕರೇ ಅದೇನು ಅಭಿವೃದ್ಧಿ ಮಾಡುತ್ತಾರೆ ಅಂತ ನಾವು ನೋಡೋಣ ಎಂದು ಹೇಳಿದರು. 

ಸಭೆಯಲ್ಲಿ ಅಂಬರೀಶ್‌ ಪುತ್ರ ಅಭಿಷೇಕ್‌, ಕಾಂಗ್ರೆಸ್‌ ಮುಖಂಡ ಸಚ್ಚಿದಾನಂದ, ಹೆಚ್‌.ಟಿ.ಕೃಷ್ಣೇಗೌಡ, ರಾಜೇಶ್‌, ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಶರತ್‌ರಾಮಣ್ಣ, ಧನಂಜಯ, ತುರುಬನಹಳ್ಳಿ ರಾಜೇಗೌಡ, ವಸಂತ್‌ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.