ಬ್ಯಾಂಕ್‌ ಖಾತೆ ಬದಲಾವಣೆಗೆ ಗ್ರಾಹಕರ ಪರದಾಟ

ಹಣ ಪಡೆಯಲಾಗದ ಪರಿಸ್ಥಿತಿ ನಿರ್ಮಾಣ

Team Udayavani, Aug 31, 2020, 1:27 PM IST

ಬ್ಯಾಂಕ್‌ ಖಾತೆ ಬದಲಾವಣೆಗೆ ಗ್ರಾಹಕರ ಪರದಾಟ

ಭಾರತೀನಗರ: ಬ್ಯಾಂಕುಗಳ ವಿಲೀನದಿಂದ ಗ್ರಾಹಕರು ತಮ್ಮ ಖಾತೆಯ ಬದಲಾವಣೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ಯಾಂಕಿನ ಶಾಖಾ ಕಚೇರಿಯ ಮುಂದೆ ಗ್ರಾಹಕರು ಸಾಲುಗಟ್ಟಿ ನಿಲ್ಲಿವಂತಾಗಿದೆ.

ಇದು ಇಲ್ಲಿನ ವಿಜಯ ಬ್ಯಾಂಕ್‌ (ಬ್ಯಾಂಕ್‌ ಆಫ್ ಬರೋಡಾ) ಶಾಖಾ ಕಚೇರಿಯಲ್ಲಿ ದಿನನಿತ್ಯ ಗ್ರಾಹಕರು, ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಸಾಮಾಜಿಕ ಅಂತರವಿಲ್ಲದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ವಿಜಯ ಬ್ಯಾಂಕ್‌ 1977ರಲ್ಲಿ ಭಾರತೀನಗರದಲ್ಲಿ ಪ್ರಾರಂಭವಾದಿದ್ದು, ಇಲ್ಲಿಯವರೆಗೆ 48 ಸಾವಿರ ಖಾತೆದಾರರನ್ನು ಹೊಂದಿದೆ. ಸರ್ಕಾರಿ ಸೌಲಭ್ಯ ಪಡೆಯುವ 9 ಸಾವಿರ ಖಾತೆದಾರರಿದ್ದಾರೆ. ಆದರೆ, ಬ್ಯಾಂಕ್‌ ಆಫ್ ಬರೋಡಾ ಆದ ನಂತರ ಸಮಸ್ಯೆಗಳು ಗ್ರಾಹಕರಿಗೆ ಪ್ರಾರಂಭವಾಗಿದೆ.

ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣ: ಬ್ಯಾಂಕ್‌ ಬದಲಾದಂತೆ ಸಾಫ್ಟ್ವೇರ್‌ ಬದಲಾಗಬೇಕು. ಆದರೆ, ಅದು ಆಗಲಿಲ್ಲ. ಕೆಲವರು ಎಟಿಎಂನಲ್ಲಿ ಹಣ ಪಡೆಯಲು ಹೋದರೆ ಬ್ಯಾಲೆನ್ಸ್‌ ಇಲ್ಲ ಎಂಬ ಸಂದೇಶ ಬರುತ್ತದೆ. ಮತ್ತೂಂದೆಡೆ ಖಾತೆದಾರರು ಬ್ಯಾಂಕ್‌ ತೆರಳಿದರೆ ಹಣ ತೆಗೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಖಾತೆದಾರರಿಗೆ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ವಿಜಯ ಬ್ಯಾಂಕ್‌ 2019ರಲ್ಲಿ ಬ್ಯಾಂಕ್‌ ಆಫ್ ಬರೋಡಾ ಜತೆ ವಿಲೀನವಾಯಿತು. ನಂತರ ದಿನಗಳಲ್ಲಿ ಖಾತೆದಾರರು ವ್ಯವಹಾರ ನಡೆಸುತ್ತಿದ್ದರು. ನಂತರ ಆಗಸ್ಟ್‌ 15ರಿಂದ ಖಾತೆಗಳೆಲ್ಲ ಸ್ಥಗಿತವಾಗಿದೆ. ಖಾತೆದಾರರು ವ್ಯವಹರಿಸಲಾಗದ ಪರಿಸ್ಥಿತಿ ನಿರ್ಮಾಣವಾಯಿತು.

ಬ್ಯಾಂಕ್‌ ಮುಂದೆ ಜನದಟ್ಟಣೆ: ವೃದ್ಧಾಪ್ಯ ವೇತನ ಪಡೆಯಲು ವೃದ್ಧರೆ ಹೆಚ್ಚಾಗಿ ಬರುತ್ತಿದ್ದಾರೆ. ಇವರನ್ನು ನಿಯಂತ್ರಿಸಲು ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಬ್ಯಾಂಕ್‌ ಮುಂದೆ ಜನದಟ್ಟಣೆ ಕಂಡು ಬರುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಿಲ್ಲುವಂತೆ ಬ್ಯಾಂಕ್‌ ಸಿಬ್ಬಂದಿ ಸಲಹೆ ನೀಡಿದರೂ, ಖಾತೆದಾರರು ಮಾತ್ರ ಇದಕ್ಕೆ ಯಾವುದೇ ಕ್ಯಾರೆ ಎನ್ನುತ್ತಿಲ್ಲ. ಬ್ಯಾಂಕ್‌ ವೀಲಿನವಾದ ನಂತರ ಹೊಸ ತಂತ್ರಾಂಶದ ಬಗ್ಗೆ ಸಿಬ್ಬಂದಿ ಇನ್ನಷ್ಟು ತಿಳಿಯಬೇಕಾಗಿದೆ. ನೆಟ್‌ವರ್ಕ್‌ ಸಮಸ್ಯೆಯಿಂದ ಬ್ಯಾಂಕ್‌ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

ಸಾರ್ವಜನಿಕರು ಬ್ಯಾಂಕ್‌ ಮುಂದೆ ಸರದಿ ಸಾಲು ನಿಲ್ಲತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಬ್ಯಾಂಕ್‌ ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಕೋವಿಡ್ ಹೆಚ್ಚಾಗುತ್ತಿದ್ದು, ಒಂದೆಡೆ ಹೆಚ್ಚು ಜನ ಸೇರಲು ನಿಷೇಧಿಸಿದೆ. ಇದನ್ನು ಖಾತೆದಾರರು ಅರಿತುಕೊಳ್ಳಬೇಕಾಗಿದೆ. ಈ ಬಗ್ಗೆ ಬಾಂಕ್‌ ಅಧಿಕಾರಿಗಳು ಕ್ರಮ ವಹಿಸಬೇಕು ಎಂಬುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಸಾಮಾಜಿಕ ಅಂತರವಿಲ್ಲ :  ಈ ಬಗ್ಗೆ ವಿಚಾರಿಸಲು ಬ್ಯಾಂಕ್‌ ತೆರಳಿದ ಖಾತೆದಾರರಿಗೆ ಮತ್ತೂಮ್ಮೆ ಆಧಾರ್‌, ಪಾನ್‌ ಕಾರ್ಡ್‌ ನೀಡಿ ಖಾತೆಯನ್ನು ಚಾಲನೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದರಿಂದ ದಿನ ನಿತ್ಯ ಬ್ಯಾಂಕ್‌ ಮುಂದೆ ಜನವೋ ಜನ ಯಾವುದೇ ಸಾಮಾಜಿಕ ಅಂತರವಿಲ್ಲದೆ ಮುಗಿ ಬಿಳುತಿದ್ದರು. ವಿವಿಧ ಯೋಜನೆಯ ಹಣ ಪಡೆಯಲು ಖಾತೆದಾರರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಬ್ಯಾಂಕ್‌ ಸಮೀಪದ ಅಂಗಡಿಗಳಿಗೂ ತೊಂದರೆಯಾಗುತಿದ್ದರೂ, ಬ್ಯಾಂಕ್‌ ಅಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತಿದೆ.

ವಿಜಯ ಬ್ಯಾಂಕ್‌- ಬ್ಯಾಂಕ್‌ ಆಫ್ ಬರೋಡಾಗೆ ವಿಲೀನವಾದ ಮೇಲೆ ಗ್ರಾಹಕರಿಗೆ ಸಮಸ್ಯೆಯಾಗಿದೆ. ನಮ್ಮ ಸಿಬ್ಬಂದಿ ವೇಗವಾಗಿ ಎಲ್ಲಾ ಗ್ರಾಹಕರಿಗೂ ಖಾತೆ ಬದಲಾವಣೆ ಬಗ್ಗೆ ಮಾಹಿತಿ ನೀಡಿ, ಸಮಸ್ಯೆ ಪರಿಹರಿಸುತ್ತಿದ್ದಾರೆ. ಗ್ರಾಹಕರು ಬ್ಯಾಂಕ್‌ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇಲ್ಲಿ ಯಾವುದೇ ಸಮಸ್ಯೆ ಇಲ್ಲ. ಸರ್ಕಾರಿ ಯೋಜನೆ ಪಡೆಯುವ ಖಾತೆದಾರರ ಮನೆ ಬಳಿಯೇ ಹಣ ನೀಡುವ ವ್ಯವಸ್ಥೆ ಮಾಡಿದ್ದೇವೆ. ಆದರು ಸಹ ಹಣ ಬಂದಿದೆಯೇ ಎಂದು ಪಾಸ್‌ಬುಕ್‌ ಹಿಡಿದು ಬರುತ್ತಾರೆ. ಡಿ.ಎನ್‌.ಗಿರೀಶ್‌, ಬ್ಯಾಂಕ್‌ ಶಾಖೆಯ ಹಿರಿಯ ಪ್ರಬಂಧಕ, ವಿಜಯ ಬ್ಯಾಂಕ್‌ (ಬ್ಯಾಂಕ್‌ ಆಫ್ ಬರೋಡಾ)

ಕಳೆದ 15 ದಿನದಿಂದ ನೂರಾರು ಮಂದಿ ಗ್ರಾಹಕರು ಬ್ಯಾಂಕ್‌ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಪ್ರತಿಯೊಬ್ಬರಿಗೂ ಹಣ ಅಗತ್ಯವಿದೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಇತರರಿಗೂ ಆತಂಕ ಉಂಟುಮಾಡಿದೆ. ಪ್ರಸ್ತುತ ದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿದೆ. ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು. ವಿನಯ್‌, ಮೆಳ್ಳಹಳ್ಳಿ ಗ್ರಾಹಕ

 

 

ಅಣ್ಣೂರು ಸತೀಶ್‌

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.