ಚಿತಾಭಸ್ಮ ವೇಳೆ ಜೇಬುಗಳ್ಳತನ
Team Udayavani, Nov 29, 2018, 2:53 PM IST
ಶ್ರೀರಂಗಪಟ್ಟಣ: ಕಾವೇರಿ ಸಂಗಮದಲ್ಲಿ ತನ್ನ ನೆಚ್ಚಿನ ನಟ ಅಂಬರೀಶ್ ಚಿತಾಭಸ್ಮ ವಿಸರ್ಜನೆ ವೀಕ್ಷಣೆಗೆ ಆಗಮಿಸಿದ್ದ ಅಭಿಮಾನಿಯ ಕಿಸೆಯಿಂದ 70 ಸಾವಿರ ರೂ. ಹಣ ಜೇಬುಗಳ್ಳರು ಕದ್ದಿರುವ ಘಟನೆ ನಡೆಯಿತು. ಮೈಸೂರು ಜಿಲ್ಲೆ ಸಿದ್ದರಾಮನಹುಂಡಿ ಗ್ರಾಮದ ವ್ಯಾಪಾರಿ ಮಹೇಂದ್ರ ಹಣ ಕಳೆದುಕೊಂಡು ಕಾವೇರಿ ಸಂಗಮದಲ್ಲಿ ಪೊಲೀಸರೆದುರು ರೋಧಿಸುತ್ತಿದ್ದುದ್ದು ಕಂಡು ಬಂದಿತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ನಟ ಅಂಬರೀಶ್ ಚಿತಾಭಸ್ಮ ವಿಸರ್ಜನೆ ವೇಳೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸಿದ್ದರು. ಈ ವೇಳೆ ಮಹೇಂದ್ರ ಸಹ ಕಾವೇರಿ ಸಂಗಮದಲ್ಲಿ ನಿಂತು ವೀಕ್ಷಿಸುತ್ತಿದ್ದರು.
ಪೊಲೀಸರು ನದಿ ತಟಕ್ಕೆ ಜನರು ಆಗಮಿಸಿದಂತೆ ಬ್ಯಾರಿಕೇಡ್ ಅಳವಡಿಸಿ ತಡೆದು ಭದ್ರತೆ ಒದಗಿಸಿದ್ದರು. ಈ ವೇಳೆ ಅಧಿಕ ಜನರು ಕಿಕ್ಕಿರಿದು ತುಂಬಿದ್ದರು. ಜನರ ತಳ್ಳಾಟದ ನಡುವೆ ತನ್ನ ಪ್ಯಾಂಟ್ ಜೇಬಿನಲ್ಲಿದ್ದ 70 ಸಾವಿರ ರೂ. ಗಳನ್ನು ಕಳ್ಳರು ಎಗರಿಸಿದ್ದಾರೆ ಎಂದು ಮಹೇಂದ್ರ ಶ್ರೀರಂಗಪಟ್ಟಣ ಠಾಣೆಗೆ ದೂರು ನೀಡಿದ್ದು, ಪೊಲೀಸರು ಈ ಕುರಿತು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ