ನೀರಿನ ಸಮಸ್ಯೆ ತಡೆಗೆ ಸೂಚನೆ
Team Udayavani, Mar 26, 2021, 3:57 PM IST
ಮಂಡ್ಯ: ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಮುನ್ನವೇ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಬೇಸಿಗೆ ಕಾಲದಲ್ಲಿ ಜಿಲ್ಲೆಯ ಯಾವ ಹಳ್ಳಿಗಳಲ್ಲಿನೀರಿನ ಸಮಸ್ಯೆ ಇದೆ ಎಂದು ಗುರುತಿಸಿಸಮಸ್ಯೆಗಳಿಗೆ ಮುಂಚಿತವಾಗಿಯೇಪರಿಹಾರ ಕಂಡುಕೊಳ್ಳಬೇಕು ಎಂದರು.
ಹೈರಿಂಗ್ ವ್ಯವಸ್ಥೆ: ಖಾಸಗಿ ಬೋರ್ವೆಲ್ಗಳ ಬದಲಾಗಿ ಡಿಪೆನಿಂಗ್ ಅಥವಾ ಹೈರಿಂಗ್ಗಳತ್ತ ಗಮನ ಹರಿಸಬೇಕು. ಈ ವಿಧಾನಗಳುಸಾಧ್ಯವಾಗದಿದ್ದಲ್ಲಿ ಕನಿಷ್ಠ ಟ್ಯಾಂಕರ್ ವ್ಯವಸ್ಥೆಯನ್ನಾದರೂ ಮಾಡಬೇಕು. ರೈತರ ಜತೆ ಚರ್ಚಿಸಿ ಹೈರಿಂಗ್ ವ್ಯವಸ್ಥೆ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಪಿಎಸ್ ಅಳವಡಿಸಬೇಕು: ಸರ್ಕಾರದಸುತ್ತೋಲೆಯಲ್ಲಿರುವಂತೆ ಟ್ಯಾಂಕರ್ ನಿರ್ಮಾಣ ಮಾಡಬೇಕಾದರೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು. ನಿಗದಿತವೇಳೆಯಲ್ಲಿ ಕೆಲಸ ನಿರ್ವಹಿಸುವಕಾರ್ಮಿಕರಿಗೆ ಸರಿಯಾದ ರೀತಿಯಲ್ಲಿವೇತನ ನೀಡಬೇಕು. ವೇತನ ನೀಡುವಲ್ಲಿಯಾವುದೇ ಸಮಸ್ಯೆ ಬಾರದಂತೆ ಕ್ರಮ ವಹಿಸಬೇಕು ಎಂದರು.
ಶಾಶ್ವತ ಪರಿಹಾರ: ಜಿಪಂಗೆ ಪ್ರತಿ ಗ್ರಾಮದನೀರಿನ ಸಮಸ್ಯೆಗಳ ಬಗ್ಗೆ ಹೆಚ್ಚಿನಅರಿವಿರುವುದರಿಂದ ಎಲ್ಲ ರೀತಿಯಸಮಸ್ಯೆಗಳನ್ನು ಗುರುತಿಸಿ ಶಾಶ್ವತ ಪರಿಹಾರಒದಗಿಸಬೇಕು. ಕೆ.ಆರ್.ಪೇಟೆ ತಾಲೂಕಿನಲ್ಲಿ 2 ವರ್ಷಗಳಿಂದ ನೀರಿನ ಸಮಸ್ಯೆ ಇದ್ದು, ಬೋರ್ವೆಲ್ಗಳಿಂದ ನೀರಿನ ಪೂರೈಕೆ ಮಾಡಲಾಗುತ್ತಿದೆ. ಅದಕ್ಕೆ ಶಾಶ್ವತ ಪರಿಹಾರ ಒದಗಿಸಲು ಗಮನಹರಿಸಬೇಕು ಎಂದು ತಿಳಿಸಿದರು.
ಜಾಗೃತಿ ಮೂಡಿಸಿ: ಜಿಲ್ಲೆಯ ನಗರ ಪ್ರದೇಶ, ಪುರಸಭೆ, ನಗರ ಸಭೆಗಳಂಥ ಪ್ರದೇಶಗಳಲ್ಲಿನೀರಿನ ಸಮಸ್ಯೆ ಕಡಿಮೆಯಿದೆ ಎಂದುಕಡೆಗಣಿಸುವಂತಿಲ್ಲ. ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಬಾರದಂತೆ ಹಾಗೂ ನೀರಿನಮಿತಬಳಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ, ಜಿಪಂ ಉಪಕಾರ್ಯದರ್ಶಿ ಎನ್.ಡಿ.ಪ್ರಕಾಶ್, ಗ್ರಾಮೀಣ ಕುಡಿಯುವ ನೀರುಸರಬರಾಜು ಹಾಗೂ ನೈರ್ಮಲ್ಯ ವಿಭಾಗದಕಾರ್ಯಪಾಲಕ ಅಭಿಯಂತರ ಕುಮಾರ್,ಕೃಷಿ ಇಲಾಖೆಯ ಜಂಟಿ ನಿರ್ದೇಶಕಚಂದ್ರಶೇಖರ್, ಜಿಲ್ಲಾ ನಗರಾಭಿವೃದ್ಧಿಕೋಶದ ಆರ್.ಪ್ರತಾಪ್, ಜಿಲ್ಲಾಆರೋಗ್ಯಾ ಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ತಾಲೂಕು ಮಟ್ಟದ ಅಧಿ ಕಾರಿಗಳು ಸೇರಿದಂತೆ ಮತ್ತಿತರರಿದ್ದರು.
ಬೇಸಿಗೆ ಸಂಭವಿಸುತ್ತಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿಗೆಸಮಸ್ಯೆಯಾಗದಂತೆ ಮುಂಜಾಗ್ರತೆಕ್ರಮ ಕೈಗೊಳ್ಳಬೇಕು. ಸಮಸ್ಯೆಉಂಟಾಗುವ ಗ್ರಾಮಗಳಲ್ಲಿಟ್ಯಾಂಕರ್ ಅಥವಾ ಖಾಸಗಿಬೋರ್ವೆಲ್ಗಳಿಂದ ನೀರುಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. – ಎಸ್.ಅಶ್ವಥಿ, ಜಿಲ್ಲಾಧಿಕಾರಿ, ಮಂಡ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್