ಹೇಮಗಿರಿ ದನಗಳ ಜಾತ್ರೆಯಲ್ಲಿ ಪ್ಲಾಸ್ಟಿಕ್‌ ನಿಷೇಧ


Team Udayavani, Jan 20, 2017, 3:30 PM IST

War-15.jpg

ಕೆ.ಆರ್‌.ಪೇಟೆ: ತಾಲೂಕಿನ ಹೇಮಗಿರಿಯ ಸುಪ್ರಸಿದ್ಧ ದನಗಳ ಜಾತ್ರೆಯಲ್ಲಿ ಪರಿಸರ ಹಿತದೃಷ್ಟಿಯಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ ಮಾಡಲಾಗಿದೆ. 40 ಮೈಕ್ರಾನ್‌ಗಿಂತ ಕಡಿಮೆ ಪ್ಲಾಸ್ಟಿಕ್‌ ಬಳಸಬಾರದು ಎಂದು ತಹಶೀಲ್ದಾರ್‌ ಕೆ.ರತ್ನಾ ಸೂಚನೆ ನೀಡಿದರು. 

ಹೇಮಗಿರಿಯಲ್ಲಿ ಜ.26ರಿಂದ ಫೆ. 8ರವರೆಗೆ ನಡೆಯ ಲಿರುವ ದನಗಳ ಜಾತ್ರೆ ಪ್ರಯುಕ್ತ ಪಟ್ಟಣದ ಮಿನಿವಿಧಾನ ಸೌಧದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜಾತ್ರಾ ಕಾಲದ ಸುಂಕ ಹರಾಜು ಪ್ರಕ್ರಿಯೆ ಸಭೆಯಲ್ಲಿ ಅವರು ಮಾತನಾಡಿದರು.

ಜಾತ್ರೆಗೆ ಬರುವ‌ ಜಾನುವಾರುಗಳಿಗೆ ಕುಡಿಯುವ ನೀರು, ವಿದ್ಯುತ್‌ ಪೂರೈಕೆ, ಜಾನುವಾರುಗಳೊಂದಿಗೆ ಬರುವ ರೈತರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಗಳಿಗೆ ತುರ್ತು ಚಿಕಿತ್ಸೆ ನೀಡಲು ಸಂಚಾರಿ ಪಶು ಚಿಕಿತ್ಸಾ ಕೇಂದ್ರ ತೆರೆಯಲಾಗುವುದು. ಅಗತ್ಯ ಬಿದ್ದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು. ಜಾತ್ರೆಗೆ ಬರುವ ರೈತರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಾನಪದ ಶೈಲಿಯ ಮನರಂಜನಾ ಕಾರ್ಯಕ್ರಮ ಆಯೋ ಜಿಸಲಾಗುವುದು. ಇದಕ್ಕೆ ಹೇಮಗಿರಿ ಸುತ್ತಮುತ್ತಲ ಗ್ರಾಮಸ್ಥರ ಸಹಕಾರ ನೀಡಬೇಕು ಎಂದು ಕೆ.ರತ್ನಾ ಮನವಿ ಮಾಡಿದರು.

ಫೆ.3ಕ್ಕೆ ಬ್ರಹ್ಮರಥೋತ್ಸವ: ರಥೋತ್ಸವದ ವರೆಗೆ ಜಾತ್ರಾ ಮಾಳದಲ್ಲಿರುವ ಉತ್ತಮ ರಾಸುಗಳು ಬಹುಮಾನ ನೀಡ ಲಾಗುವುದು. ಜಾತ್ರೆಯ ಅಂಗವಾಗಿ ಫೆ. 3ರಂದು ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿಯ ಬ್ರಹ್ಮ ರಥೋತ್ಸವವ ನಡೆಯಲಿದೆ ಎಂದು ತಿಳಿಸಿದರು.

ಯಾವುದಕ್ಕೆ ಎಷ್ಟು ಸುಂಕ: ಹರಾಜು ಪ್ರಕ್ರಿಯೆಯಲ್ಲಿ ಅಂಗಡಿ ಮೇಲಿನ ಸುಂಕವು 1.79 ಲಕ್ಷ ರೂ.ಗೆ ಹರಾಜಾಯಿತು. ದನಗಳ ಸುಂಕವು 75 ಸಾವಿರ ರೂ., ಗೊಬ್ಬರ ಸುಂಕವು 13 ಸಾವಿರ ರೂ., ವಾಹನಗಳ ಸುಂಕ 40 ಸಾವಿರ ರೂ., ಹಣ್ಣು-ಕಾಯಿ ಸುಂಕವು 5 ಸಾವಿರ ರೂ., ಗೋಲಕ 4 ಸಾವಿರ ರೂ., ಹುಣಸೇಮರದ ಸುಂಕ 9 ಸಾವಿರ ರೂ., ಹುಲ್ಲುಗಾವಲು ಸುಂಕವು 2 ಸಾವಿರ ರೂ.ಗಳಿಗೆ ಹರಾಜು ಕೂಗಲಾಯಿತು. ಬರಗಾಲದ ಹಿನ್ನೆಲೆಯಲ್ಲಿ ನಿರೀಕ್ಷಿತ ಹರಾಜು ನಡೆಯದೇ ಇದ್ದರೂ ಸ್ಥಳೀಯರು ಹರಾಜು ಪ್ರಕ್ರಿಯೆಗೆ ಶಕ್ತಿ ಮೀರಿ ಸಹಕರಿಸುವ ಮೂಲಕ ಜಾತ್ರೆಯ ಅಭಿವೃದ್ಧಿಗೆ ಸಹಕರಿಸಿದರು.

ಮುಜರಾಯಿ ಶಿರಸ್ತೇದಾರ್‌ ಮಹದೇವೇಗೌಡ, ಮರಿಸಿದ್ದೇಗೌಡ, ಚಂದ್ರಿಕಾ, ಗ್ರಾಮ ಲೆಕ್ಕಾಧಿಕಾರಿ ಹರೀಶ್‌, ಬಂಡಿಹೊಳೆ ಕಾವೇರಿ ಗ್ರಾಮೀಣ ಬ್ಯಾಂಕ್‌ ವ್ಯವಸ್ಥಾಪಕ ಜಗದೀಶ್‌, ಟಿಎಪಿಸಿಎಂಎಸ್‌ ನಿರ್ದೇಶಕ ಅಶೋಕ್‌, ಯಜಮಾನ್‌ ರಾಜಶೇಖರ್‌, ಗ್ರಾಪಂ ಮಾಜಿ ಅಧ್ಯಕ್ಷ ಬಿ.ಮಂಜುನಾಥ್‌, ಪುರಸಭೆ ಮಾಜಿ ಅಧ್ಯಕ್ಷ ಚಂದ್ರೇಗೌಡ, ದೇವರಸೇಗೌಡ, ವಿಶ್ವನಾಥ್‌, ಬಂಡಿಹೊಳೆ ಜಯರಾಂ, ರಾಜಶೇಖರ್‌, ಸುರೇಶ್‌, ದೇವಾಲಯ ಪ್ರಧಾನ ಅರ್ಚಕ ರಾಮಭಟ್‌, ಪಾರುಪತ್ತೇಗಾರ್‌ ರಂಗರಾಜ್‌ ಮತ್ತಿತರರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಪಟ್ಟಣ ಠಾಣೆ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಶಿವಣ್ಣ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿತ್ತು. 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.